Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಚೀಯೋನಿನ ಯಾವ ನಿವಾಸಿಯೂ “ನಾನು ಅಸ್ವಸ್ಥನು” ಎಂದು ಹೇಳುವುದಿಲ್ಲ. ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸಿಯೋನಿನ ಯಾವ ನಿವಾಸಿಯೂ, “ನಾನು ಅಸ್ವಸ್ಥನು” ಎಂದು ಹೇಳನು, ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಚೀಯೋನಿನ ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು; ಅಲ್ಲಿಯ ಜನರ ಪಾಪವು ಪರಿಹಾರವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅಲ್ಲಿ ವಾಸಿಸುವವರಲ್ಲಿ ಯಾರೂ “ನನಗೆ ಸೌಖ್ಯವಿಲ್ಲ” ಎಂದು ಹೇಳುವುದಿಲ್ಲ. ಅಲ್ಲಿ ವಾಸಿಸುವವರೆಲ್ಲಾ ತಮ್ಮ ಪಾಪಗಳಿಗೆ ಕ್ಷಮೆಹೊಂದಿದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಚೀಯೋನಿನ ಯಾವ ನಿವಾಸಿಯೂ, “ನಾನು ಅಸ್ವಸ್ಥನಾಗಿದ್ದೇನೆ,” ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಪಾಪವು ಕ್ಷಮಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:24
19 ತಿಳಿವುಗಳ ಹೋಲಿಕೆ  

ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.”


ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.


ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ, ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.


ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ.


ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಮೂಡಿ ಬರುವುದು, ನಿಮ್ಮ ಕ್ಷೇಮವು ಬೇಗನೆ ಬೆಳೆಯುವುದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿರುವುದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವುದು.


ನಿಮ್ಮಲ್ಲಿ ಯಾವ ವ್ಯಾಧಿಯೂ ಉಂಟಾಗದಂತೆ ಯೆಹೋವನು ಮಾಡುವನು. ನಿಮ್ಮ ಅನುಭವಕ್ಕೆ ಬಂದ ಪ್ರಕಾರ ಐಗುಪ್ತದೇಶದಲ್ಲಿ ಪ್ರಬಲವಾಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸದೆ, ಅವುಗಳನ್ನು ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.


ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.


ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು.


ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.


ಯೆಹೋವನು ಹಿಜ್ಕೀಯನ ಪ್ರಾರ್ಥನೆಯನ್ನು ಲಾಲಿಸಿ ಜನರನ್ನು ಸ್ವಸ್ಥಗೊಳಿಸಿದನು.


ಐಗುಪ್ತ್ಯರ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.


ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.


ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ; ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.


ಯೆಹೋವನು ಇಂತೆನ್ನುತ್ತಾನೆ, “ಇಗೋ, ‘ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರ’ ಎಂದು ಜನರು ಹೇಳಿ, ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ, ನಿನ್ನನ್ನು ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.”


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.


ಆ ದಿನದಲ್ಲಿ ಯೆಹೋವನು ಯೆರೂಸಲೇಮಿನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು