Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಣ ಲೋಕದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗಳಿಂದ ತುಂಬಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರ ಸ್ವಾಮಿ ಉನ್ನತೋನ್ನತರು, ಮೇಲಿನ ಲೋಕದಲ್ಲಿ ಆಸೀನರು. ಅವರು ಜೆರುಸಲೇಮನ್ನು ನ್ಯಾಯನೀತಿಯಿಂದಲೂ ಸತ್ಯಸಂಧತೆಯಿಂದಲೂ ತುಂಬಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು ಉನ್ನತೋನ್ನತನಾಗಿದ್ದಾನೆ; ಮೇಲಿನ ಲೋಕದಲ್ಲಿ ವಾಸಿಸುತ್ತಾನಷ್ಟೆ; ಚೀಯೋನನ್ನು ನೀತಿನ್ಯಾಯಗಳಿಂದ ತುಂಬಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನೇ ಉನ್ನತೋನ್ನತನು. ಆತನು ಬಹು ಉನ್ನತವಾದ ಸ್ಥಳದಲ್ಲಿ ವಾಸಿಸುತ್ತಾನೆ. ಆತನು ಚೀಯೋನನ್ನು ನ್ಯಾಯನೀತಿಗಳಿಂದ ತುಂಬಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ಉನ್ನತೋನ್ನತನಾಗಿದ್ದಾನೆ. ಏಕೆಂದರೆ ಆತನು ಮೇಲಿನ ಲೋಕದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿ ಮತ್ತು ನ್ಯಾಯಗಳಿಂದ ತುಂಬಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:5
43 ತಿಳಿವುಗಳ ಹೋಲಿಕೆ  

ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ ಬಿಡಿಸುವವನು “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು.


ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?


ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.


ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಹೀಗಿರುವುದರಿಂದ ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.”


ಯೆಹೋವನು ಹೀಗೆನ್ನುತ್ತಾನೆ, “ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.


ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.


ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ, ಊರಬಾಗಿಲಲ್ಲಿ ಶತ್ರುಗಳನ್ನು ನಾಶಮಾಡುವವರಿಗೆ ಶೌರ್ಯವಾಗಿಯೂ ಪರಿಣಮಿಸುವನು.


ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.


ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಪರಲೋಕದಲ್ಲಿ ಆಸೀನನಾಗಿರುವಾತನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.


ಯೆಹೋವನ ಬಲಗೈ ಉನ್ನತವಾಗಿದೆ; ಯೆಹೋವನ ಬಲಗೈ ಪರಾಕ್ರಮವನ್ನು ನಡೆಸುತ್ತದೆ.


ಯೆಹೋವನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ, ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ” ಅಂದನು.


ಯೆಹೋವನೇ, ನಿನ್ನ ಬಲಗೈಯಲ್ಲಿರುವ ಶಕ್ತಿ ಎಷ್ಟೋ ಮಹಿಮೆಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಬಲಗೈ ಶತ್ರುಗಳನ್ನು ಪುಡಿಪುಡಿಮಾಡಿಬಿಡುತ್ತದೆ.


ಆಗ ಮೋಶೆಯೂ, ಇಸ್ರಾಯೇಲರೂ ಯೆಹೋವನನ್ನು ಸ್ತುತಿಸುವುದಕ್ಕಾಗಿ ಈ ಕೀರ್ತನೆಯನ್ನು ಹಾಡಿದರು: “ಯೆಹೋವನಿಗೆ ಸ್ತೋತ್ರ ಗಾನಮಾಡೋಣ; ಆತನು ಮಹಾಜಯಶಾಲಿಯಾದವನು. ಕುದುರೆಗಳನ್ನು ಮತ್ತು ರಾಹುತರನ್ನು ಸಮುದ್ರದಲ್ಲಿ ಕೆಡವಿ ನಾಶಮಾಡಿದ್ದಾನೆ.


ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.


ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವುದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು. ಪರಿಶುದ್ಧನಾದ ದೇವರು ಧರ್ಮವನ್ನು ನಡೆಸುವುದರಲ್ಲಿ ಪರಿಶುದ್ಧನು ಎಂದು ಅನಿಸಿಕೊಳ್ಳುವನು.


ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು, “ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.


ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ನಿಮ್ಮ ಕೊಳ್ಳೆಯು ಮಿಡತೆಗಳು ಕೂಡಿಸುವ ಹಾಗೆ ಕೂಡಿಸಲ್ಪಡುವುದು, ಮಿಡತೆಗಳು ಓಡಾಡುವ ಹಾಗೆ ಮನುಷ್ಯರು ಅದರ ಮೇಲೆ ಓಡಾಡುವರು.


ಯೆಹೋವನು ಹೀಗೆನ್ನುತ್ತಾನೆ, “ನ್ಯಾಯವನ್ನು ಅನುಸರಿಸಿ, ಧರ್ಮವನ್ನು ಆಚರಿಸಿರಿ; ಏಕೆಂದರೆ ನನ್ನ ವಿಮೋಚನಕ್ರಿಯೆಯು ಬೇಗನೆ ಬರುವುದು, ನನ್ನ ರಕ್ಷಣಾಧರ್ಮದ ಕಾರ್ಯವು ಶೀಘ್ರವಾಗಿ ವ್ಯಕ್ತವಾಗುವುದು.


ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.


ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ’ ಎಂದು ಮತ್ತೆ ಮಾತನಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು