Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 34:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ಕಾಡಿನ ಪಕ್ಷಿಗಳು, ಪ್ರಾಣಿಗಳು ಅಲ್ಲಿ ವಾಸಿಸುವವು. ಗೂಬೆ ಮತ್ತು ಕಾಗೆಗಳು ಅಲ್ಲಿ ವಾಸಿಸುವವು; ಯೆಹೋವನು ಅದರ ಮೇಲೆ ನಾಶ ಎಂಬ ನೂಲನ್ನೂ ಪಾಳು ಎಂಬ ಮಟ್ಟಗೋಲನ್ನೂ ಎಳೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದು ಹದ್ದುಗಳ, ಮುಳ್ಳುಹಂದಿಗಳ ಸ್ವಾಧೀನವಾಗುವುದು. ಕಾಗೆಗೂಗೆಗಳಿಗೆ ಅದು ಗೂಡಾಗುವುದು. ಸರ್ವೇಶ್ವರ ಹಾಳುಪಾಳನ್ನೇ ಅದರ ಅಳತೆಗೋಲನ್ನಾಗಿಯೂ ಅಸ್ತವ್ಯಸ್ತತೆಯನ್ನೇ ಅದರ ಮಟ್ಟಗೋಲನ್ನಾಗಿಯೂ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದು ಕೊಕ್ಕರೆ ಮುಳ್ಳುಹಂದಿಗಳ ಹಕ್ಕು ಆಗುವದು; ಕಾಗೆಗೂಗೆಗಳು ಅಲ್ಲಿ ವಾಸಿಸುವವು; ಯೆಹೋವನು ಅದರ ಮೇಲೆ ಹಾಳೆಂಬ ನೂಲನ್ನೂ ಪಾಳೆಂಬ ಮಟ್ಟಗೋಲನ್ನೂ ಎಳೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪಕ್ಷಿಗಳು ಮತ್ತು ಚಿಕ್ಕಪ್ರಾಣಿಗಳೂ ಅದರಲ್ಲಿ ವಾಸಿಸುವವು. ಗೂಬೆಗಳೂ ಕಾಗೆಗಳೂ ಅಲ್ಲಿ ವಾಸಿಸುವವು. ಅದು “ಬೆಂಗಾಡಿನ ಮರುಭೂಮಿ” ಎಂದು ಕರೆಯಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಬಕಪಕ್ಷಿಯು ಮತ್ತು ಮುಳ್ಳುಹಂದಿಯು ಅದನ್ನು ಆವರಿಸಿಕೊಳ್ಳುವುವು. ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವುವು. ಗಲಿಬಿಲಿ ಎಂಬ ನೂಲನ್ನು, ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 34:11
14 ತಿಳಿವುಗಳ ಹೋಲಿಕೆ  

ಯೆಹೋವನು ಚೀಯೋನ್ ನಗರಿಯ ಕೋಟೆಯನ್ನು ನಾಶಪಡಿಸಬೇಕೆಂದು ನೂಲನ್ನು ಎಳೆದಿದ್ದಾನೆ; ಹಾಳು ಮಾಡುತ್ತಿರುವ ತನ್ನ ಕೈಯನ್ನು ಹಿಂದೆಗೆಯದೆ ಪೌಳಿಗೋಡೆಯೂ ಮತ್ತು ಕೋಟೆಯೂ ಮೊರೆಯುವಂತೆ ಮಾಡಿದ್ದಾನೆ; ಅವೆರಡೂ ಕುಸಿದುಹೋಗಿವೆ.


ನೂಲು ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರ್ಯವನ್ನೂ, ಅಹಾಬನ ಮನೆಯನ್ನೂ ನೆಲಸಮಮಾಡಿದಂತೆ, ಯೆರೂಸಲೇಮನ್ನೂ ಅದರಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿ ಬೋರಲು ಹಾಕುವೆನು.


ಜನಾಂಗಗಳ ಪಶುಗಳೆಲ್ಲಾ ಮಂದೆಮಂದೆಯಾಗಿ ಅದರ ಮಧ್ಯದಲ್ಲಿ ಮಲಗಿಕೊಳ್ಳುವವು; ಕೊಕ್ಕರೆಯೂ, ಮುಳ್ಳುಹಂದಿಯೂ ಹಟ್ಟಿಗಳಲ್ಲಿ ವಾಸಮಾಡಿಕೊಳ್ಳುವವು. ಗೂಬೆಯು ಕಿಟಕಿಗಳಲ್ಲಿ ಮನೆಕಂಬಗಳ ಮೇಲೆ ಚಿಲಿಪಿಲಿ ಗಾನವು ತಂಗುವವು; ಕಾಗೆಗಳ ಕೂಗು ಹೊಸ್ತಿಲುಗಳಲ್ಲಿ ಕೇಳುವುದು; ದೇವದಾರು ಹಲಿಗೆಯ ಹೊದಿಕೆಯು ಕೀಳಲ್ಪಡುವುದು.


ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು.


“ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು. ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.


ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ, ಅವರನ್ನು ನೆಲಕ್ಕೆ ಉರುಳಿಸಿ, ಹಗ್ಗದಿಂದ ಅಳತೆಮಾಡಿಸಿ, ಪ್ರತಿ ಮೂರನೆಯ ಎರಡು ಭಾಗದ ಜನರನ್ನು ಕೊಲ್ಲಿಸಿ, ಮೂರನೆ ಭಾಗದ ಜನರನ್ನು ಉಳಿಸಿದನು. ಉಳಿದ ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.


ಹಾಳುಪಟ್ಟಣವು ಬಿದ್ದುಹೋಗಿದೆ, ಯಾರೂ ಹೋಗದಂತೆ ಪ್ರತಿಯೊಂದು ಮನೆಯೂ ಮುಚ್ಚಿದೆ.


ಅಡವಿಯ ಬಕಪಕ್ಷಿಯಂತಿದ್ದೇನೆ; ಹಾಳೂರಿನ ಗೂಬೆಯಂತಿದ್ದೇನೆ.


ಆತನೇ ಇವುಗಳಿಗೆ ಪಾಲು ಮಾಡಿಕೊಟ್ಟಿದ್ದಾನೆ. ಆತನ ಕೈಯೇ ಗೆರೆ ಹಾಕಿ ದೇಶವನ್ನು ಹಂಚಿಕೊಟ್ಟಿದೆ. ಅದು ಇವುಗಳಿಗೆ ನಿತ್ಯ ಸ್ವಾಸ್ತ್ಯವಾಗುವುದು, ಅವು ತಲಾತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.


ಯೆಹೋವನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು ನಾನು, “ಒಂದು ನೂಲುಗುಂಡು” ಎಂದು ಉತ್ತರ ಕೊಟ್ಟೆನು. ಆಗ ಕರ್ತನು, “ಇಗೋ, ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನೂಲುಗುಂಡನ್ನು ಇಡುತ್ತೇನೆ. ಇನ್ನು ಅವರನ್ನು ಕಂಡುಕಾಣದಂತೆ ದಂಡಿಸುವೆನು.


ಸಕಲವಿಧವಾದ ಕಾಗೆ, ಉಷ್ಟ್ರಪಕ್ಷಿ, ಉಲೂಕ, ಕಡಲಹಕ್ಕಿ, ಸಕಲವಿಧವಾದ ಡೇಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು