Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 35:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಚಂಚಲ ಹೃದಯರಿಗೆ ಹೀಗೆಂದು ಹೇಳಿ : “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಭಯಭ್ರಾಂತಹೃದಯರಿಗೆ - ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ದೈವಿಕ ಪ್ರತಿಫಲವನ್ನು ಕೊಡುವದಕ್ಕೂ ಬರುವನು; ತಾನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಜನರು ಭಯದಿಂದ ಗಲಿಬಿಲಿಗೊಂಡಿದ್ದಾರೆ. ಅವರಿಗೆ ಹೀಗೆ ಹೇಳು, “ಧೈರ್ಯಗೊಳ್ಳಿರಿ, ಭಯಪಡಬೇಡಿ.” ಇಗೋ, ನಿಮ್ಮ ದೇವರು ಬಂದು ನಿಮ್ಮ ವೈರಿಗಳನ್ನು ಶಿಕ್ಷಿಸುವನು. ಆತನು ಬಂದು ನಿಮಗೆ ಪ್ರತಿಫಲವನ್ನು ಕೊಡುವನು. ಯೆಹೋವನು ನಿಮ್ಮನ್ನು ಕಾಪಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಭಯಭ್ರಾಂತ ಹೃದಯವುಳ್ಳವರಿಗೆ ಬಲಗೊಳ್ಳಿರಿ, ಹೆದರಬೇಡಿರಿ. ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವುದಕ್ಕೂ, ದೇವರು ಪ್ರತಿಫಲವನ್ನು ಕೊಡುವುದಕ್ಕೂ ತಾವೇ ಬಂದು ನಿಮ್ಮನ್ನು ರಕ್ಷಿಸುವರು, ಎಂದು ಅವರಿಗೆ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 35:4
52 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲನೇ ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.


ಏಕೆಂದರೆ ಅದು ಯೆಹೋವನು ಮುಯ್ಯಿತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರ್ಷವು ಒದಗಿದೆ.


ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.


ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು.


ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ,


ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ.


ಆದರೆ ಇವು ಸಂಭವಿಸುವುದಕ್ಕೆ ತೊಡಗುವಾಗ, ನಿಮ್ಮ ತಲೆಯೆತ್ತಿರಿ, ಏಕೆಂದರೆ ನಿಮ್ಮ ಬಿಡುಗಡೆಯು ಸಮೀಪವಾಗಿದೆ” ಅಂದನು.


ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು.


ಆ ಮೇಲೆ ಆ ಪುರುಷನು ನನಗೆ, “ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು, “ಎನ್ನೊಡೆಯನೇ, ಮಾತನಾಡು; ನನ್ನನ್ನು ಬಲಗೊಳಿಸಿದ್ದೀ”


ನಿನ್ನನ್ನು ನಿರ್ಮಾಣಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ!


ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, “ಹೌದು ನಾನು ನಿಜವಾಗಿ ಬೇಗನೇ ಬರುತ್ತೇನೆ!” ಎಂದು ಹೇಳುತ್ತಾನೆ. ಆಮೆನ್. ಕರ್ತನಾದ ಯೇಸುವೇ ಬಾ.


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಆತುರಗಾರರ ಹೃದಯವು ತಿಳಿವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆಯು ಸ್ವಚ್ಛವಾಗಿಯೂ, ಶೀಘ್ರವಾಗಿಯೂ ಮಾತನಾಡುವುದು.


ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.


ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.


ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು. ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತರ, ಮೂಲಕವಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು” ಅಂದನು.


ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು.


ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.


“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.


ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.


“ಮನುಷ್ಯರೆಲ್ಲಾ ಸುಳ್ಳುಗಾರರು” ಎಂದು ಭ್ರಾಂತಿಯಿಂದ ಹೇಳಿದಾಗಲೂ, ಭರವಸವುಳ್ಳವನಾಗಿಯೇ ಇದ್ದೆನು.


ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.


ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ಯೆಹೋವನೇ, ಮುಯ್ಯಿತೀರಿಸುವ ದೇವರೇ, ಮುಯ್ಯಿತೀರಿಸುವ ದೇವರೇ, ಕೋಪವನ್ನು ತೋರ್ಪಡಿಸು.


ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.


‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.’”


“ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ಕೇಳಿದ್ದೀ, ಅವುಗಳಿಗೆ ನೀನು ಹೆದರಬೇಡ.


ಹೀಗಿರುವುದರಿಂದ ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.”


ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ; ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.


ನಿನ್ನ ಬೆತ್ತಲೆತನವು ಬಯಲಿಗೆ ಬಂದು, ನೀನು ನಾಚಿಕೆಗೀಡಾಗುವಿ, ನಾನು ಯಾರನ್ನೂ ಕರುಣಿಸದೆ ಮುಯ್ಯಿತೀರಿಸುವೆನು.


ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ಉಪಯೋಗಮಾಡಿದ್ದು ಹಾಳೇ, ಬರಿ ಗಾಳಿಯೇ. ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ. ನನಗೆ ಲಾಭವು ನನ್ನ ದೇವರಿಂದಲೇ ಆಗುವುದು” ಎಂದು ಅಂದುಕೊಂಡೆನು.


ಯೆಹೋವನು ಹೀಗೆನ್ನುತ್ತಾನೆ, “ಶೂರನ ಸೆರೆಯವರೂ ಅಪಹರಿಸಲ್ಪಡುವರು. ಭಯಂಕರನ ಕೊಳ್ಳೆಯೂ ತೆಗೆಯಲ್ಪಡುವುದು. ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.


ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ, ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ, ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯಲ್ಲಿರುವವರಿಗೂ ತಕ್ಕ ಪ್ರತಿಫಲವನ್ನು ನೀಡುವನು.


ಏಕೆಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರ್ಷವು ಒದಗಿತ್ತು.


ಮನುಷ್ಯ ಸದೃಶನು ಪುನಃ ನನ್ನನ್ನು ಮುಟ್ಟಿ ಬಲಪಡಿಸಿದನು.


ದಾವೀದನಿಗೆ, “ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವುದಿಲ್ಲ. ನೀನು ಇಸ್ರಾಯೇಲ್ಯರ ಅರಸನಾಗುವಿ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವುದೆಂದು ನನ್ನ ತಂದೆಯಾದ ಸೌಲನೂ ತಿಳಿದುಕೊಂಡಿದ್ದಾನೆ” ಎಂದು ಹೇಳಿ, ದೇವರಲ್ಲಿ ಅವನನ್ನು ಬಲಪಡಿಸಿದನು.


ಹಾರುವ ಪಕ್ಷಿಯಂತೆ ಸೇನಾಧೀಶ್ವರನಾದ ಯೆಹೋವನು ಯೆರೂಸಲೇಮನ್ನು ಕಾಪಾಡುವನು. ಅದನ್ನು ರಕ್ಷಿಸಿ ಕಾಯುವನು ಮತ್ತು ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು