Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 35:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕುರುಡರ ಕಣ್ಣು ಕಾಣುವುದಾಗ ಕಿವುಡರ ಕಿವಿ ತೆರೆಯುವುದಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಕುರುಡರ ಕಣ್ಣು ಕಾಣುವದು, ಕಿವುಡರ ಕಿವಿ ಕೇಳುವದು, ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಕುರುಡರಿಗೆ ದೃಷ್ಟಿ ಬರುವದು. ಅವರ ಕಣ್ಣುಗಳು ತೆರೆಯಲ್ಪಡುವವು. ಆಗ ಕಿವುಡರು ಕೇಳಿಸಿಕೊಳ್ಳುವರು. ಅವರ ಕಿವಿಗಳು ತೆರೆಯಲ್ಪಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ, ಕುರುಡರ ಕಣ್ಣು ಕಾಣುವುದು. ಕಿವುಡರ ಕಿವಿಗಳು ಕೇಳಿಸುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 35:5
31 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು.


ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.


ಆಗ ಯೇಸುವು, “ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು” ಎಂದನು.


ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ. ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ.


ದೆವ್ವ ಹಿಡಿದ ಕುರುಡನೂ, ಮೂಕನೂ ಆಗಿರುವ ಒಬ್ಬನನ್ನು ಯೇಸುವಿನ ಬಳಿಗೆ ಕರೆತಂದರು. ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಮಾತು ಹಾಗೂ ದೃಷ್ಟಿ ಎರಡೂ ಬಂದವು.


ಆಗ ಅಲ್ಲಿದ್ದ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಆತನು ಅವರನ್ನು ಸ್ವಸ್ಥಮಾಡಿದನು.


“ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ


ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು, ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ.


ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.


ಕಣ್ಣಿದ್ದರೂ ಕುರುಡಾದ, ಕಿವಿಯಿದ್ದರೂ ಕಿವುಡಾದ ಜನರನ್ನು ಕರೆ.


ಕೇಳುವ ಕಿವಿ, ನೋಡುವ ಕಣ್ಣು, ಇವೆರಡನ್ನೂ ಯೆಹೋವನು ನಿರ್ಮಿಸಿದ್ದಾನೆ.


ಅದಕ್ಕೆ ಯೆಹೋವನು ಅವನಿಗೆ, “ಮನುಷ್ಯರಿಗೆ ಬಾಯಿಕೊಟ್ಟವನು ಯಾರು? ಒಬ್ಬನನ್ನು ಮೂಕನಾಗಿ, ಕಿವುಡನಾಗಿ, ದೃಷ್ಠಿಯುಳ್ಳವನಾಗಿ ಹಾಗೂ ಕುರುಡನಾಗಿ ಉಂಟುಮಾಡಿದವನಾರು? ಯೆಹೋವನಾದ ನಾನೇ ಅಲ್ಲವೇ?


ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ಅವರಲ್ಲಿ ಕೆಲವರು, “ಈತನು ಆ ಕುರುಡನಿಗೆ ಕಣ್ಣು ಕೊಟ್ಟನಲ್ಲಾ, ಈ ಮನುಷ್ಯನನ್ನು ಸಾಯದ ಹಾಗೆ ಮಾಡಬಹುದಿತ್ತಲ್ಲಾ?” ಎಂದರು.


ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ.


ಅವರ ಕಿವಿಗಳನ್ನು ತೆರೆದು, ಅವರಿಗೆ ಶಿಕ್ಷಾವಚನವನ್ನು ಉಪದೇಶಿಸಿ ಅದಕ್ಕೆ ಮುದ್ರೆ ಹಾಕುವನು.


ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ. ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.


ಕಿವುಡರೇ, ಕೇಳಿರಿ! ಕುರುಡರೇ, ನೀವು ಕಣ್ಣಿಟ್ಟು ನೋಡಿರಿ!


ಕರ್ತನಾದ ಯೆಹೋವನು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು