Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 35:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು, ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಜಿಗಿಯುವನು ಕುಂಟನು ಜಿಂಕೆಯಂತೆ ಹಾಡುವುದು ಮೂಕನ ನಾಲಿಗೆ ಹರ್ಷಗೀತೆ. ಒರತೆಗಳು ಒಡೆಯುವುವು ಅರಣ್ಯದಲಿ ನದಿಗಳು ಹುಟ್ಟಿಹರಿಯುವುವು ಒಣನೆಲದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅರಣ್ಯದಲ್ಲಿ ಒರತೆಗಳು ಒಡೆಯುವವು, ಒಣ ನೆಲದಲ್ಲಿ ನದಿಗಳು ಹುಟ್ಟಿ ಹರಿಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕುಂಟರು ಜಿಂಕೆಯಂತೆ ಜಿಗಿದಾಡುವರು. ಮಾತನಾಡಲು ಸಾಧ್ಯವಾಗದ ಜನರು ಆಗ ಹರ್ಷಗಾನವನ್ನು ಹಾಡುವರು. ಯಾವಾಗ ಮರುಭೂಮಿಯಲ್ಲಿ ತೊರೆಯ ನೀರು ಹರಿಯುವದೋ ಆಗ ಇವೆಲ್ಲಾ ಜರಗುವವು. ಒಣಭೂಮಿಯಲ್ಲಿ ಒರತೆಯ ನೀರು ಹರಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯೂ ಹರ್ಷದಿಂದ ಹಾಡುವುದು. ಏಕೆಂದರೆ ಮರುಭೂಮಿಯಲ್ಲಿ ನೀರೂ, ಮರುಭೂಮಿಯಲ್ಲಿ ಒರತೆಗಳೂ ಒಡೆಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 35:6
41 ತಿಳಿವುಗಳ ಹೋಲಿಕೆ  

ಒಮ್ಮೆ ಯೇಸು ಮೂಗದೆವ್ವವನ್ನು ಬಿಡಿಸುತ್ತಿದ್ದನು. ಆ ದೆವ್ವವು ಬಿಟ್ಟು ಹೋದ ಮೇಲೆ ಮೂಕನು ಮಾತನಾಡಿದನು; ಅದನ್ನು ನೋಡಿದ ಜನರು ಆಶ್ಚರ್ಯಪಟ್ಟರು.


ಆತುರಗಾರರ ಹೃದಯವು ತಿಳಿವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆಯು ಸ್ವಚ್ಛವಾಗಿಯೂ, ಶೀಘ್ರವಾಗಿಯೂ ಮಾತನಾಡುವುದು.


ದೆವ್ವ ಹಿಡಿದ ಕುರುಡನೂ, ಮೂಕನೂ ಆಗಿರುವ ಒಬ್ಬನನ್ನು ಯೇಸುವಿನ ಬಳಿಗೆ ಕರೆತಂದರು. ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಮಾತು ಹಾಗೂ ದೃಷ್ಟಿ ಎರಡೂ ಬಂದವು.


ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.


ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.


ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.


ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು.


ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು.


ಕೂಡಲೆ ಅವನ ಬಾಯಿ ತೆರೆಯಲ್ಪಟ್ಟು, ನಾಲಿಗೆ ಸಡಿಲವಾಯಿತು, ಅವನು ಮಾತನಾಡುವವನಾಗಿ ದೇವರನ್ನು ಕೊಂಡಾಡಿದನು.


ಆಗ ಅಲ್ಲಿದ್ದ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಆತನು ಅವರನ್ನು ಸ್ವಸ್ಥಮಾಡಿದನು.


ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.


ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇಮಿನೊಳಗಿಂದ ಹೊರಡುವುದು; ಅರ್ಧಭಾಗವು ಪೂರ್ವಸಮುದ್ರಕ್ಕೂ, ಅರ್ಧಭಾಗವು ಪಶ್ಚಿಮ ಸಮುದ್ರಕ್ಕೂ ಹರಿಯುವುದು; ಬೇಸಿಗೆಕಾಲದಲ್ಲಿಯೂ, ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವುದು.


ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು.


ಅರಣ್ಯವೂ, ಮರುಭೂಮಿಯೂ ಆನಂದಿಸುವವು; ಒಣನೆಲವು ಹರ್ಷಿಸಿ ತಾವರೆಯಂತೆ ಕಳಕಳಿಸುವುದು.


ಒಂದು ನದಿ ಇದೆ; ಅದರ ಕಾಲುವೆಗಳು, ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, ದೇವರ ನಗರವನ್ನು ಸಂತೋಷಪಡಿಸುತ್ತವೆ.


ಅವರಿಗೆ ಹಸಿವಾದಾಗ ಪರಲೋಕದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ, ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದೆ.


ಆಗ ಮೋಶೆ ತನ್ನ ಕೈಯನ್ನು ಮೇಲಕ್ಕೆ ಎತ್ತಿ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ನೀರು ಪ್ರವಾಹವಾಗಿ ಹೊರಟಿತು. ಸಮೂಹದವರೂ ಮತ್ತು ಅವರ ಪಶುಗಳೂ ನೀರು ಕುಡಿದರು.


ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನಗೆದುರಾಗಿ ನಿಂತುಕೊಳ್ಳುವೆನು. ನೀನು ಆ ಬಂಡೆಯನ್ನು ಹೊಡೆದಾಗ, ಜನರು ಕುಡಿಯುವಂತೆ ನೀರು ಹೊರಗೆ ಬರುವುದು” ಎಂದನು. ಮೋಶೆ ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.


ಗೋಪುರಗಳು ಬಿದ್ದು ಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು, ನೀರಿನ ಕಾಲುವೆಗಳು ಹರಿಯುತ್ತಿರುವವು.


ಆಗ ಪ್ರತಿ ಮನುಷ್ಯನು ಗಾಳಿಯಲ್ಲಿ ಅಡಗಿಕೊಳ್ಳುವಂತೆಯೂ, ಅತಿವೃಷ್ಟಿಯಲ್ಲಿ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿನ ನೀರಿನ ಕಾಲುವೆಗಳ ಹಾಗೂ, ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.


ನಿನ್ನ ಹಗ್ಗಗಳು ಸಡಿಲವಾಗಿ ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು, ಹಾಯಿಯನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವುದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆ ಮಾಡಿದರು.


ಅರಣ್ಯವೂ, ಅಲ್ಲಿನ ಊರುಗಳೂ, ಕೇದಾರಿನವರು ವಾಸಿಸುವ ಗ್ರಾಮಗಳೂ ಆರ್ಭಟಿಸಲಿ, ಸೆಲ ಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಜಯಘೋಷ ಮಾಡಿರಿ.


ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು.


ಆ ದಿನದಲ್ಲಿ, ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವುದು, ಗುಡ್ಡಗಳಿಂದ ಹಾಲು ಹರಿಯುವುದು, ಯೆಹೂದದ ಹಳ್ಳಗಳಲ್ಲೆಲ್ಲಾ ನೀರು ತುಂಬಿರುವುದು, ಯೆಹೋವನ ಆಲಯದೊಳಗೆ ಬುಗ್ಗೆಯು ಉಕ್ಕಿ ಬಂದು, ಶಿಟ್ಟೀಮಿನ ಹಳ್ಳವನ್ನು ತಂಪುಮಾಡುವುದು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.


ಅರಣ್ಯವನ್ನು ಕೆರೆಯಾಗಿಯೂ, ಒಣನೆಲವನ್ನು ಬುಗ್ಗೆಗಳಾಗಿಯೂ ಮಾಡಿ,


ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು