Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 36:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಕಾಪಾಡುವನೋ? ಎನ್ನುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯಾವ ರಾಷ್ಟ್ರದ ದೇವರುಗಳೂ ತಮ್ಮ ನಾಡನ್ನು ನನ್ನ ಅರಸನ ಕೈಯಿಂದ ಬಿಡಿಸಲಾರದೆ ಹೋದಮೇಲೆ ಸರ್ವೇಶ್ವರ ಜೆರುಸಲೇಮನ್ನು ಆತನ ಕೈಯಿಂದ ಬಿಡಿಸಿ ಕಾಪಾಡಲು ಸಾಧ್ಯವೋ?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಕಾಪಾಡುವನೋ ಅನ್ನುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಬೇರೆ ಯಾವ ದೇಶದ ದೇವರುಗಳು ನನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಿ ಕಾಪಾಡಿದರು? ಹೀಗಿರಲು ಯೆಹೋವನು ಜೆರುಸಲೇಮನ್ನು ನನ್ನಿಂದ ರಕ್ಷಿಸುವನೋ? ಇಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಈ ದೇಶಗಳ ಸಮಸ್ತ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ, ಯೆಹೋವ ದೇವರು ಯೆರೂಸಲೇಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 36:20
17 ತಿಳಿವುಗಳ ಹೋಲಿಕೆ  

ಯೆರೂಸಲೇಮಿನ ದೇವರಾದ ಯೆಹೋವನು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನನು ಎಂದು ಅನ್ಯದೇವರುಗಳಿಗೆ ಹೋಲಿಸಿ ಮಾತನಾಡಿದರು.


“ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು.


ತಾವು ಮೇಲುಲೋಕದವರೋ ಎಂಬಂತೆ ದೊಡ್ಡ ಬಾಯಿಮಾಡುತ್ತಾರೆ. ಭೂಲೋಕದಲ್ಲೆಲ್ಲಾ ಅವರ ಮಾತೇ ಮುಂದು.


ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.


ನೀವು ಹಿಜ್ಕೀಯನಿಂದ ಮರುಳಾಗಿ ಈ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಬಲ್ಲನೇ?” ಎಂದು ಹೇಳಿಸಿದನು.


ಅರಾಮ್ಯರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ, “ಇಸ್ರಾಯೇಲ್ ದೇವರು ಬೆಟ್ಟಗಳ ದೇವರಾಗಿರುವುದರಿಂದ ಅವರು ನಮ್ಮನ್ನು ಸೋಲಿಸಿದರು. ನಾವು ಅವರೊಡನೆ ಬಯಲಿನಲ್ಲಿ ಯುದ್ಧಮಾಡುವುದಾದರೆ ಹೇಗೂ ಜಯಹೊಂದುವೆವು.


ಅದಕ್ಕೆ ಫರೋಹನು, “ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ” ಅಂದನು.


ಆಗ ದೇವರ ಮನುಷ್ಯನು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಯೆಹೋವನು ಹೀಗೆನ್ನುತ್ತಾನೆ, ಯೆಹೋವನು ತಗ್ಗುಗಳ ದೇವರಲ್ಲ. ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾ ಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು. ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವುದು” ಎಂದು ಹೇಳಿದನು.


ಹಿಜ್ಕೀಯನು ನಿಮಗೆ, ‘ಯೆಹೋವನನ್ನು ನಂಬಿರಿ; ಆತನು ನಮ್ಮನ್ನು ಹೇಗೋ ರಕ್ಷಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವುದಿಲ್ಲ’” ಎಂಬುದಾಗಿ ಹೇಳಿದರೆ,


ನಿನ್ನವರು ಬಾಯಿ ತೆರೆದು, ನನ್ನ ವಿರುದ್ಧವಾಗಿ ಆಡಿದ ಮಾತುಗಳನ್ನು ಕೇಳಿದ್ದೇನೆ.”


ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು’” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು