Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನನ್ನ ತಂದೆತಾತಂದಿರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನನ್ನ ತಂದೆ ತಾತಂದಿರು ಗೋಜಾನ್, ಹಾರನ್, ರೆಚೆಪ್ ಎಂಬ ನಗರಗಳ ಜನರನ್ನು ಮತ್ತು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನು ನಾಶಮಾಡಿದರು. ಆಗ ಅವರ ದೇವರುಗಳು ಅವರನ್ನು ರಕ್ಷಿಸಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನ ತಂದೆತಾತಂದಿರು ಗೋಜಾನ್, ಖಾರಾನ್, ರೆಚೆಫ್, ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರ ದೇವರುಗಳು ಅವರನ್ನು ರಕ್ಷಿಸಿದರೋ? ಇಲ್ಲ! ನನ್ನ ಪೂರ್ವಿಕರು ಅವರನ್ನು ಸಂಪೂರ್ಣವಾಗಿ ನಾಶಮಾಡಿದರು. ಅವರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್‌ನಲ್ಲಿ ವಾಸವಾಗಿದ್ದ ಎದೆನಿನ ಜನರನ್ನೂ ನಾಶಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:12
19 ತಿಳಿವುಗಳ ಹೋಲಿಕೆ  

ತೆರಹನು ತನ್ನ ಮಗನಾದ ಅಬ್ರಾಮನನ್ನೂ, ತನಗೆ ಮೊಮ್ಮಗನೂ, ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ, ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟು ಅವರು ಹಾರಾನ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.


ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;


ನನ್ನ ಪೂರ್ವಿಕರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?


ಅಶ್ಶೂರದ ಅರಸನು ಇಸ್ರಾಯೇಲರನ್ನು ಸೆರೆಹಿಡಿದು ಅವರನ್ನು ಹಲಹು, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯ, ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.


ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ನಾನು ದಮಸ್ಕದ ಹೆಬ್ಬಾಗಿಲುಗಳನ್ನು ಮುರಿಯುವೆನು ಮತ್ತು ಆವೆನ್ ತಗ್ಗಿನೊಳಗಿನಿಂದ ನಿವಾಸಿಗಳನ್ನು ಮತ್ತು ಬೇತ್ ಎದೆನ್ ಪಟ್ಟಣದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು; ಅರಾಮ್ಯರು ಕೀರ್ ಪಟ್ಟಣಕ್ಕೆ ಸೆರೆಯಾಗಿ ಹೋಗುವರು.” ಇದು ಯೆಹೋವನ ನುಡಿ.


ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ಫಟಿಕ, ಚಿನ್ನ ಈ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ಈ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.


ಹಾರಾನ್, ಕನ್ನೆ, ಎದೆನ್ ಸ್ಥಳಗಳವರೂ, ಶೆಬ, ಅಶ್ಶೂರ್ ಕಿಲ್ಮದ್ ಪ್ರಾಂತ್ಯಗಳವರೂ ನಿನ್ನ ವರ್ತಕರಾಗಿದ್ದರು.


ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಕಾಪಾಡುವನೋ? ಎನ್ನುತ್ತಾನೆ” ಎಂದು ಹೇಳಿದನು.


ಯಾಕೋಬನು ಅವರಿಗೆ, “ಅಣ್ಣಂದಿರೇ, ನೀವು ಎಲ್ಲಿಯವರು?” ಎಂದು ಕೇಳಲು ಅವರು, “ನಾವು ಖಾರಾನ್ ಊರಿನವರು” ಎಂದರು.


ಆಗ ಯಾಕೋಬನು ಹಾರಾನಿಗೆ ಹೋಗಬೇಕೆಂದು ಬೇರ್ಷೆಬದಿಂದ ಹೊರಟನು.


ಅಬ್ರಾಮನು ಐಗುಪ್ತ ದೇಶಕ್ಕೆ ಬಂದಾಗ ಐಗುಪ್ತರು ಅವನ ಸಂಗಡ ಇದ್ದ ಸ್ತ್ರೀಯನ್ನು ನೋಡಿ ಬಹು ಸುಂದರಿ ಎಂದು ಅಂದುಕೊಂಡರು.


ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು.


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ” ಎಂಬುದಾಗಿ ದೂತರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.


ತೆರಹನು ಇನ್ನೂರ ಐದು ವರ್ಷ ಬದುಕಿ ನಂತರ ಹಾರಾನಿನಲ್ಲಿ ಸತ್ತನು.


“ಯೆಹೋವನು ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಹುಟ್ಟಿಸಾನು ನೋಡಿಕೊಳ್ಳಿರಿ. ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ಕಾಪಾಡಿತು?


ಹಮಾತ್, ಅರ್ಪಾದ್, ಸೆಫರ್ವಯಿಮ್ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಯಿಂದ ತಪ್ಪಿಸಿದವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು