Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ” ಎಂಬುದಾಗಿ ದೂತರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ್ ಮತ್ತು ಇವ್ವಾ ಎಂಬ ನಗರಗಳ ಅರಸರ ಗತಿ ಏನಾಯಿತು?” ಎಂದು ಪತ್ರ ಬರೆದು ದೂತರ ಸಮೇತ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬೀ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ದೂತರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹಮಾತಿನ ಅರಸನೆಲ್ಲಿ? ಅರ್ಪಾದಿನ ಅರಸನೆಲ್ಲಿ? ಸೆಫರ್ವಯಿಮ್ ನಗರದ ಅರಸನೆಲ್ಲಿ? ಹೇನ, ಇವ್ವಾ ಎಂಬ ಪಟ್ಟಣಗಳ ಅರಸರೆಲ್ಲಿ? ಅವರೆಲ್ಲರೂ ಹತರಾಗಿದ್ದಾರೆ. ಎಲ್ಲಾ ನಾಶವಾಗಿ ಹೋದರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ,” ಎಂದು ಪತ್ರ ಬರೆದು ದೂತರ ಮುಖಾಂತರ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:13
10 ತಿಳಿವುಗಳ ಹೋಲಿಕೆ  

ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.


ಹಮಾತ್, ಅರ್ಪಾದ್, ಸೆಫರ್ವಯಿಮ್ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಯಿಂದ ತಪ್ಪಿಸಿದವೋ?


ಕರ್ಕೆಮೀಷಿನ ಗತಿಯು ಕಲ್ನೋವಿಗೆ ಆಯಿತಲ್ಲವೇ? ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಲ್ಲವೇ? ದಮಸ್ಕದ ಗತಿಯು ಸಮಾರ್ಯಕ್ಕೂ ಸಂಭವಿಸಿತಲ್ಲವೇ?


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು? ಎಂದು ನಿನಗೆ ತಿಳಿಯದೋ ಎಂದು ಪತ್ರವನ್ನು ದೂತರ ಮೂಲಕ ಕಳುಹಿಸಿದ.’”


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ ಮತ್ತು ಇವ್ವಾ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಲು ಸಾಧ್ಯವಾಯಿತೇ?


ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.


ನನ್ನ ತಂದೆತಾತಂದಿರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?


ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.


ಅವರು ಅರಸರನ್ನು ಧಿಕ್ಕರಿಸಿ ಅಪಹಾಸ್ಯ ಮಾಡುವರು. ಸರದಾರರು ಅಧಿಪತಿಗಳು ಅವರ ಪರಿಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ಆಕ್ರಮಿಸಿ ಧೂಳಿಪಟ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು