Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲ್ ದೇವರಾದ ಯೆಹೋವನ ಈ ಮಾತುಗಳನ್ನು ಕೇಳು, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳನ್ನು ಕೇಳಿದೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ಆಮೋಚನ ಮಗ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ : “ಇಸ್ರಯೇಲಿನ ದೇವರಾದ ಸರ್ವೇಶ್ವರ ಸ್ವಾಮಿಯ ಈ ಮಾತುಗಳನ್ನು ಕೇಳು : ನೀನು ಅಸ್ಸೀರಿಯದ ಅರಸ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳು ಸರ್ವೇಶ್ವರ ಸ್ವಾಮಿಗೆ ಮುಟ್ಟಿವೆ. ಅವರು ಅವನಿಗೆ ವಿರುದ್ಧ ಹೀಗೆಂದಿದ್ದಾರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ - ಇಸ್ರಾಯೇಲ್ ದೇವರಾದ ಯೆಹೋವನ ಈ ಮಾತುಗಳನ್ನು ಕೇಳು; ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳನ್ನು ಯೆಹೋವನು ಕೇಳಿ ಅವನನ್ನು ಕುರಿತು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಈ ಸಂದೇಶವನ್ನು ಕಳುಹಿಸಿದನು: “ಇಸ್ರೇಲರ ದೇವರಾದ ಯೆಹೋವನು ಹೇಳುವುದೇನೆಂದರೆ: ‘ಅಶ್ಶೂರದ ಅರಸನಾದ ಸನ್ಹೇರೀಬನ ಪತ್ರದ ವಿಷಯವಾಗಿ ನೀನು ಪ್ರಾರ್ಥಿಸುವದನ್ನು ನಾನು ಕೇಳಿದೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನೆಂದರೆ, “ನೀನು ಅಸ್ಸೀರಿಯದ ಅರಸನಾದ ಸನ್ಹೇರೀಬನನ್ನು ಕುರಿತು, ಇಸ್ರಾಯೇಲಿನ ಯೆಹೋವ ದೇವರಿಗೆ ಪ್ರಾರ್ಥನೆ ಮಾಡಿದ್ದನ್ನು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:21
12 ತಿಳಿವುಗಳ ಹೋಲಿಕೆ  

ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.


ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.


ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ, “ಇಗೋ, ಇದ್ದೇನೆ” ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನು, ಇನ್ನೊಬ್ಬರನ್ನು ದೂಷಣೆಗೆ ಗುರಿಮಾಡಿ ತೋರುವ ಬೆರಳನ್ನು, ಕೆಡುಕಿನ ನುಡಿಯನ್ನು ಬಿಟ್ಟು,


ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ” ಎಂದು ಆಜ್ಞಾಪಿಸಿದನು.


ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;


ನೀನು ಪ್ರಾರ್ಥಿಸುವಿ, ಆತನು ಲಾಲಿಸುವನು, ಆತನಿಗೆ ಹರಕೆಗಳನ್ನು ಒಪ್ಪಿಸುವಿ.


ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು.


ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು