Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇದನ್ನು ನೀನು ಕೇಳಲಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು. ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತು ಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳು ದಿಬ್ಬಗಳನ್ನಾಗಿಸಿದೆ, ಆದರೆ ಸಾಧ್ಯವಾಯಿತಿದು ನನ್ನಿಂದಲೇ, ನಿನಗಿದು ತಿಳಿಯದೆಹೋಯಿತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇದನ್ನು ನೀನು ಕೇಳಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು; ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಆದರೆ ದೇವರು ಏನು ಹೇಳುತ್ತಾನೆಂದು ಕೇಳಿದೆಯಾ? ಬಹುಕಾಲದ ಹಿಂದೆ ನಾನು ಯೋಜನೆಯನ್ನು ಮಾಡಿದ್ದೆನು. ಪ್ರಾಚೀನ ಕಾಲದಿಂದ ಅದರ ವಿಷಯವಾಗಿ ಆಲೋಚನೆ ಮಾಡಿದ್ದೆನು. ಈಗ ಅದು ನೆರವೇರುವಂತೆ ಮಾಡಿದ್ದೇನೆ. ಬಲಿಷ್ಠವಾದ ನಗರಗಳನ್ನು ನಾಶಮಾಡಿ ಅವುಗಳನ್ನು ಕಲ್ಲಿನ ರಾಶಿಗಳನ್ನಾಗಿ ಮಾಡಲು ನಿನ್ನನ್ನು ಬಿಟ್ಟಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:26
17 ತಿಳಿವುಗಳ ಹೋಲಿಕೆ  

ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.


ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ.


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.


ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.


ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?


ನಾನು ಬೆಳಕನ್ನು, ಕತ್ತಲನ್ನು ನಿರ್ಮಿಸಿದವನು, ಮೇಲನ್ನೂ, ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.


ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು; ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು.


ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು.


ದಮಸ್ಕದ ವಿಷಯವಾದ ದೈವೋಕ್ತಿ. “ಆಹಾ, ದಮಸ್ಕವು ಇನ್ನು ಪಟ್ಟಣವಾಗಿರದೇ ಹಾಳು ದಿಬ್ಬವಾಗಿರುವುದು.


ನಿಮಗೆ ತಿಳಿದಿಲ್ಲವೋ? ನೀವು ಕೇಳಲಿಲ್ಲವೋ? ಆದಿಯಿಂದಲೇ ನಿಮಗೆ ಉಪದೇಶವಾಗಿ ಬಂದಿಲ್ಲವೋ? ಭೂಮಿಯು ನಿರ್ಮಾಣವಾದ ದಿನದಿಂದ ನೀವು ಗ್ರಹಿಸುತ್ತಿಲ್ಲವೋ?


ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ. ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.


ಎರಡು ಗೋಡೆಗಳ ನಡುವೆ ಹಳೆಯ ಕೊಳದ ನೀರಿಗಾಗಿ ತೊಟ್ಟಿಯನ್ನು ಮಾಡಿದ್ದೀರಿ; ಆದರೆ ಇದನ್ನೆಲ್ಲಾ ನಡೆಸಿದಾತನ ಕಡೆಗೆ ನೀವು ದೃಷ್ಟಿಯಿಡಲಿಲ್ಲ, ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು