Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅಳಿದುಳಿದ ಯೆಹೂದ್ಯರು ನಾಡಿನಲ್ಲಿ ಬೇರೂರಿ ನೆಲೆಗೊಳ್ಳುವರು; ಬೆಳೆದು ಅಭಿವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ತಪ್ಪಿಸಿಕೊಂಡುಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಯೆಹೂದ ಕುಲದವರಲ್ಲಿ ತಪ್ಪಿಸಿಕೊಂಡು ಜೀವಂತವಾಗಿ ಉಳಿದವರು ಮತ್ತೆ ಅಭಿವೃದ್ಧಿಯಾಗುವರು. ತಮ್ಮ ಬೇರುಗಳನ್ನು ಆಳವಾಗಿ ಇಳಿಯಬಿಟ್ಟು ಹಣ್ಣುಗಳನ್ನು ಬಿಡುವ ಗಿಡಗಳಂತೆ ಅವರಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯೆಹೂದದ ಮನೆತನದಲ್ಲಿ ತಪ್ಪಿಸಿಕೊಂಡು ಉಳಿದವರು ತಿರುಗಿ, ದೇಶದಲ್ಲಿ ಬೇರೂರಿ ನೆಲೆಗೊಂಡು ಅಭಿವೃದ್ಧಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:31
18 ತಿಳಿವುಗಳ ಹೋಲಿಕೆ  

ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು, ಇಸ್ರಾಯೇಲು ಹೂಬಿಟ್ಟು ಚಿಗುರುವುದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವುದು.”


ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ, ಅದು ಬೇರುಬಿಟ್ಟು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.


ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ಒಂದು ಭಾಗವು ಉಳಿದಿದ್ದಾರೆ.


ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.


ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.


ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.


ಖಡ್ಗಕ್ಕೆ ತಪ್ಪಿಸಿಕೊಂಡವರು ಸ್ವಲ್ಪ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದದ ಉಳಿದ ಜನರೆಲ್ಲರೂ ನನ್ನ ಮಾತು ನಡೆಯುವುದೋ ಅಥವಾ ತಮ್ಮ ಮಾತು ನಡೆಯುವುದೋ ಎಂದು ತಿಳಿದುಕೊಳ್ಳುವರು.


ಅವುಗಳೊಳಗಿಂದ ಸ್ತೋತ್ರವೂ ಮತ್ತು ಸಂತೋಷದಿಂದ ನಲಿಯುವ ಧ್ವನಿಯೂ ಕೇಳಿಸುವವು. ನಾನು ಆ ಜನರನ್ನು ಹೆಚ್ಚಿಸುವೆನು, ಅವರು ಇನ್ನು ಅಲ್ಪರಾಗಿರರು, ಅವರನ್ನು ಘನಪಡಿಸುವೆನು, ಅವರು ಇನ್ನು ಹೀನರಾಗಿರರು.


ಯಾಕೋಬಿನಿಂದ ಸಂತಾನವನ್ನು ಹುಟ್ಟಿಸುವೆನು, ಯೆಹೂದ ವಂಶದಿಂದ ನನ್ನ ಪರ್ವತಗಳ ಸ್ವತ್ತಿನ ಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವತ್ತನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.


ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.


ಮುಪ್ಪಿನಲ್ಲಿಯೂ ಫಲಿಸುವರು; ಪುಷ್ಟಿಯಾಗಿದ್ದು ಶೋಭಿಸುವರು.


ಆ ದಿನದಲ್ಲಿ ಯೆಹೋವನು ದಯಪಾಲಿಸಿದ ಬೆಳೆಯಿಂದ ಇಸ್ರಾಯೇಲರಲ್ಲಿ ಉಳಿದವರಿಗೆ ಸೌಂದರ್ಯವೂ, ಮಹಿಮೆಯೂ ಉಂಟಾಗುವವು. ದೇಶದಿಂದ ಫಲವೂ, ಉನ್ನತಿಯೂ, ಭೂಷಣವೂ ಲಭಿಸುವುದು.


ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.


ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು’” ಎಂದು ಹೇಳಿದರು.


ಯೆಹೋವನು ಇಂತೆನ್ನುತ್ತಾನೆ, “ಯಾಕೋಬಿನ ನಿಮಿತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ. ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ.


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು