Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆಗ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲಾ ಹೆಣಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆ ರಾತ್ರಿ, ಯೆಹೋವನ ದೂತನು ಹೊರಟುಹೋಗಿ ಅಶ್ಶೂರದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಸಂಹರಿಸಿದನು. ಜನರು ಬೆಳಿಗ್ಗೆ ಎದ್ದಾಗ ಸುತ್ತಲೂ ಹೆಣಗಳು ಬಿದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:36
29 ತಿಳಿವುಗಳ ಹೋಲಿಕೆ  

ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”


ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡಿದಾಗ ಪಾಳೆಯದ ತುಂಬಾ ಹೆಣಗಳು ಬಿದ್ದಿದ್ದವು.


ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು. ಅದು ಮನುಷ್ಯರ ಕತ್ತಿಯಲ್ಲ, ಖಡ್ಗವು ಅವರನ್ನು ನುಂಗುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಯಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಬಿಟ್ಟಿಯಾಗಿ ಹಿಡಿಯಲ್ಪಡುವರು.


ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, “ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ಅವರು ಉನ್ನತಿಗೆ ಬರುವರು; ಸ್ವಲ್ಪ ಕಾಲದ ಮೇಲೆ ಅವರು ಎಲ್ಲಿಯೋ? ಸರ್ವ ಮನುಷ್ಯರೊಂದಿಗೆ ಸುಗ್ಗಿಯ ತೆನೆಗಳಂತೆ ಕೊಯ್ಯಲ್ಪಟ್ಟು ಕೆಳಕ್ಕೆ ಬಿದ್ದು ಕೂಡಿಸಲ್ಪಡುವರು.


ದಾವೀದನು ಕಣ್ಣೆತ್ತಿ ನೋಡಿ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ, ಚಾಚಿದ ಕೈಯಲ್ಲಿ ಯೆರೂಸಲೇಮಿಗೆ ವಿರುದ್ಧವಾಗಿ ಹಿರಿದ ಕತ್ತಿಯಿರುವುದನ್ನೂ ಕಂಡಾಗ ಅವನೂ, ಹಿರಿಯರೂ ಗೋಣಿತಟ್ಟನ್ನು ಹೊದ್ದುಕೊಂಡು ಬೋರಲು ಬಿದ್ದರು.


‘ಮೂರು ವರ್ಷಗಳ ವರೆಗೆ ಬರಗಾಲ ಉಂಟಾಗಬೇಕೋ, ಇಲ್ಲವೆ ನೀನು ಮೂರು ತಿಂಗಳು ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ, ಇಲ್ಲವೆ ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ ಯೆಹೋವನು ಕಳುಹಿಸಿದ ಸಂಹಾರದೂತನಿಂದ ಉಂಟಾಗುವ ಮೂರು ದಿನಗಳ ಘೋರವ್ಯಾಧಿಯ ರೂಪವಾದ ಯೆಹೋವನ ಶಿಕ್ಷೆ ಬೇಕೋ, ಈ ಮೂರರಲ್ಲಿ ಒಂದನ್ನು ಆರಿಸಿಕೊ’ ಎಂಬುದೇ. ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು ಆಲೋಚಿಸಿ ಹೇಳು” ಎಂದು ಹೇಳಿದನು.


ಆ ರಾತ್ರಿಯಲ್ಲಿ ಫರೋಹನೂ, ಅವನ ಪರಿವಾರದವರೂ, ಐಗುಪ್ತ್ಯರೆಲ್ಲರೂ ಎದ್ದು ನೋಡಲಾಗಿ ಸಾವಿಲ್ಲದ ಮನೆ ಒಂದೂ ಇರಲಿಲ್ಲ. ಐಗುಪ್ತ ದೇಶದಲ್ಲಿ ದೊಡ್ಡ ಗೋಳಾಟವಾಯಿತು.


ಯೆಹೋವನು ಐಗುಪ್ತ್ಯರನ್ನು ಹತಮಾಡುವುದಕ್ಕೆ ದೇಶದ ನಡುವೆ ಹಾದುಹೋಗುವನು. ಆಗ ನಿಮ್ಮ ನಿಮ್ಮ ಮನೆಬಾಗಿಲಿನ ಮೇಲಣ ಪಟ್ಟಿಯಲ್ಲಿಯೂ, ಎರಡು ನಿಲುವು ಪಟ್ಟಿಗಳಲ್ಲಿಯೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿ ಹೋಗುವನು. ನಿಮ್ಮ ಪ್ರಾಣ ತೆಗೆಯುವುದಕ್ಕೆ ಸಂಹಾರಕನು ನಿಮ್ಮ ಮನೆಗಳಲ್ಲಿ ಬರುವುದೇ ಇಲ್ಲ.


ಸೇನಾಧೀಶ್ವರನಾದ ಯೆಹೋವನು ಓರೇಬ ಬಂಡೆಯ ಹತ್ತಿರ ಮಿದ್ಯಾನ್ಯರನ್ನು ಹತಮಾಡಿದಂತೆ, ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತರ ಮೇಲೆ ಎತ್ತಿದಂತೆ ಎತ್ತುವನು.


ಯೆಹೋವನು ಬೇರೆ ದೇಶಗಳನ್ನು ಹೊಡೆದಂತೆ ತನ್ನ ಪ್ರಜೆಯಾದ ಯಾಕೋಬ ಮತ್ತು ಇಸ್ರಾಯೇಲರನ್ನು ಹೊಡೆದನೋ? ಇತರ ದೇಶದವರು ಸಂಹರಿಸಲ್ಪಟ್ಟಂತೆ ಯಾಕೋಬ ಮತ್ತು ಇಸ್ರಾಯೇಲರು ಸಂಹರಿಸಲ್ಪಟ್ಟರೋ?


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.


ಅವರ ಶಸ್ತ್ರಾಸ್ತ್ರಗಳು ಅಶ್ಶೂರ ದೇಶವನ್ನು ಧ್ವಂಸಮಾಡುವುದು. ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಪ್ರಾಂತ್ಯವನ್ನು ತುಳಿದುಹಾಕುವಾಗ ಆ ಸಮಾಧಾನಪ್ರದನು ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು.


ರಾಹುತರ ರಭಸ, ಥಳಥಳಿಸುವ ಕತ್ತಿ, ಮಿಂಚುವ ಈಟಿ, ಅಸಂಖ್ಯಾತವಾಗಿ ಹತರಾದ ಸೈನಿಕರ ಶವಗಳ ಮಹಾರಾಶಿ, ಸತ್ತವರು ಲೆಕ್ಕವೇ ಇಲ್ಲ, ನುಗ್ಗುವವರು ಅವರ ಹೆಣಗಳನ್ನು ಎಡವುತ್ತಾರೆ.


ಕ್ಷಣ ಮಾತ್ರದೊಳಗೆ ಸಾಯುವರು; ಮಧ್ಯರಾತ್ರಿಯಲ್ಲೇ ಪ್ರಜೆಗಳು ಕದಲಿ ಇಲ್ಲವಾಗುವರು, ಮನುಷ್ಯನ ಕೈ ಸೋಕದೆ ಬಲಿಷ್ಠರೂ ಅಪಹರಿಸಲ್ಪಡುವರು.


ಇನ್ನು ಸ್ವಲ್ಪ ಕಾಲದೊಳಗೆ ನಿಮ್ಮ ಮೇಲಿನ ಉಗ್ರವು ತೀರಿ, ನನ್ನ ಕೋಪವು ಅವರ ನಾಶನಕ್ಕಾಗುವುದು.”


ಗುಂಪು ಗುಂಪಾಗಿ ಕೂಡಿರುವ ನಿನ್ನ ಶತ್ರುಗಳು ಸೂಕ್ಷ್ಮವಾದ ಧೂಳಿನಂತೆಯೂ, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನಂತೆಯೂ ಇರುವರು; ಅವರು ಕ್ಷಣ ಮಾತ್ರದಲ್ಲಿ ಲಯಹೊಂದುವರು.


ಯೆಹೋವನು ಇಂತೆನ್ನುತ್ತಾನೆ, “ನಿನ್ನ ಶತ್ರುಗಳು ಎಷ್ಟು ಪ್ರಬಲವಾಗಿದ್ದರೂ, ಅವರ ಸಂಖ್ಯೆ ಎಷ್ಟು ಹೆಚ್ಚಿದ್ದರೂ ಅವರು ಕಡಿಯಲ್ಪಡುವರು. ಆ ದುರಾಲೋಚಕನು ಇಲ್ಲವಾಗುವನು. ನಿನ್ನನ್ನು ಬಾಧಿಸಿದ್ದೇನೆ, ಆದರೆ ಇನ್ನು ಬಾಧಿಸೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು