Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಆದ್ದರಿಂದ ಅಸ್ಸೀರಿಯರ ಅರಸನಾದ ಸನ್ಹೇರೀಬನು ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅಶ್ಶೂರದ ಅರಸನಾದ ಸನ್ಹೇರೀಬನು ನಿನೆವೆಗೆ ಹಿಂದಿರುಗಿ ಅಲ್ಲಿಯೇ ಉಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆಗ ಅಸ್ಸೀರಿಯದ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:37
15 ತಿಳಿವುಗಳ ಹೋಲಿಕೆ  

ಆಗ ಯೋನನು ಎದ್ದು ಯೆಹೋವನ ಅಪ್ಪಣೆಯಂತೆ ನಿನೆವೆಗೆ ಹೋದನು. ನಿನೆವೆಯು ಮೂರು ದಿನದ ಪ್ರಯಾಣದಷ್ಟು ಅತಿ ವಿಸ್ತಾರವಾದ ಮಹಾದೊಡ್ಡ ಪಟ್ಟಣವಾಗಿತ್ತು.


“ನೀನು ಇಲ್ಲಿಂದ ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದನ್ನು ಕಟುವಾಗಿ ಖಂಡಿಸಿ ಹೇಳು, ಏಕೆಂದರೆ ಅಲ್ಲಿರುವ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ” ಎಂದು ಅಪ್ಪಣೆಮಾಡಿದನು.


ನಿನೆವೆ ಪಟ್ಟಣದವರು ಯೋನನು ಸಾರಿದ ವಾಕ್ಯವನ್ನು ಕೇಳಿ ಮಾನಸಾಂತರಪಟ್ಟರು. ಇಗೋ, ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ. ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವರು.


ನಿನವೆ ಪಟ್ಟಣದ ಬಗ್ಗೆ ದೈವೋಕ್ತಿ. ಎಲ್ಕೋಷ್ ಊರಿನ ನಹೂಮ ಎಂಬ ಪ್ರವಾದಿಗೆ ಆದ ದೈವದರ್ಶನದ ಗ್ರಂಥ.


ಇಂಥ ಗಿಡಕ್ಕಾಗಿ ನೀನು ಕನಿಕರಪಡುವಾಗ ಎಡಗೈ ಬಲಗೈ ತಿಳಿಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು, ಅಪಾರ ಪಶುಪ್ರಾಣಿಗಳೂ ಇರುವ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ?” ಎಂದನು.


ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.


ಇಗೋ, ನಾನು ಅವನ ಮೇಲೆ ಭಯದ ಆತ್ಮವನ್ನು ಬರ ಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ, ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಯೆಹೋವನ ಮಾತನ್ನು ನಿಮ್ಮ ಯಜಮಾನನಿಗೆ ಹೇಳಿರಿ” ಎಂಬುದಾಗಿ ಉತ್ತರಕೊಟ್ಟನು.


ಅವರು ಭಯದಿಂದ ತಮ್ಮ ಭರವಸೆಯನ್ನು ಕಳೆದುಕೊಳ್ಳುವರು. ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು” ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ.


ಅವರ ಶಸ್ತ್ರಾಸ್ತ್ರಗಳು ಅಶ್ಶೂರ ದೇಶವನ್ನು ಧ್ವಂಸಮಾಡುವುದು. ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಪ್ರಾಂತ್ಯವನ್ನು ತುಳಿದುಹಾಕುವಾಗ ಆ ಸಮಾಧಾನಪ್ರದನು ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು.


ಯೆಹೋವನು ಉತ್ತರಕ್ಕೆ ಕೈಚಾಚಿ ಅಶ್ಶೂರವನ್ನು ಧ್ವಂಸ ಮಾಡುವನು; ನಿನವೆಯನ್ನು ಹಾಳುಮಾಡಿ ನೀರಿಲ್ಲದ ಮರುಭೂಮಿಯಂತೆ ಒಣಗಿಸಿಬಿಡುವನು.


ಅರಸನಾದ ಹಿಜ್ಕೀಯನು ಅದನ್ನು ಕೇಳಿ, ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.


ಈ ಭಕ್ತಿ ಕಾರ್ಯಗಳಾದ ನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿ ಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆ ಹಾಕಿದನು.


ಆಗ ಅಶ್ಶೂರ್ಯರು ಕತ್ತಿಯಿಂದ ಬೀಳುವರು. ಅದು ಮನುಷ್ಯರ ಕತ್ತಿಯಲ್ಲ, ಖಡ್ಗವು ಅವರನ್ನು ನುಂಗುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಯಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಬಿಟ್ಟಿಯಾಗಿ ಹಿಡಿಯಲ್ಪಡುವರು.


ನಿಮಗೆ ತಿಳಿಯದ ಅನ್ಯಭಾಷೆಯನ್ನೂ, ನೀವು ಗ್ರಹಿಸಲಾರದ ತೊದಲು ಮಾತುಗಳನ್ನೂ ಆಡುವ ಆ ಕ್ರೂರ ಜನರನ್ನು ಇನ್ನು ಮುಂದೆ ನೋಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು