Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 39:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಶಾಯನು ತಿರುಗಿ ಹಿಜ್ಕೀಯನಿಗೆ, “ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಅವನು, “ಅರಮನೆಯಲ್ಲಿರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ವಸ್ತು ಒಂದೂ ಇರುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯೆಶಾಯನು ಮತ್ತೆ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನೇನನ್ನು ನೋಡಿದರು?” ಎಂದು ಕೇಳಲು ಹಿಜ್ಕೀಯನು, “ಅರಮನೆಯಲ್ಲಿ ಇರುವುದೆಲ್ಲವನ್ನು ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದ ಒಡವೆ ವಸ್ತು ಒಂದೂ ಇಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಶಾಯನು ತಿರಿಗಿ ಅವನನ್ನು - ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು ಎಂದು ಕೇಳಲು ಅವನು - ಅರಮನೆಯಲ್ಲಿರುವದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ನಿನ್ನ ಮನೆಯಲ್ಲಿ ಅವರು ಏನು ನೋಡಿದರು?” ಎಂದು ತಿರುಗಿ ಯೆಶಾಯನು ಪ್ರಶ್ನಿಸಿದನು. “ಅವರು ನನ್ನ ಅರಮನೆಯಲ್ಲಿರುವದನ್ನೆಲ್ಲಾ ನೋಡಿದರು. ನಾನು ನನ್ನ ಐಶ್ವರ್ಯವನ್ನೆಲ್ಲಾ ಅವರಿಗೆ ತೋರಿಸಿದೆನು” ಎಂದು ಹಿಜ್ಕೀಯನು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅದಕ್ಕೆ ಯೆಶಾಯನು ಪುನಃ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನನ್ನು ನೋಡಿದರು?” ಎಂದು ಕೇಳಿದನು. ಹಿಜ್ಕೀಯನು, “ನನ್ನ ಅರಮನೆಯಲ್ಲಿ ಇರುವುದೆಲ್ಲವನ್ನು ಅವರು ನೋಡಿದರು, ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇಲ್ಲ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 39:4
8 ತಿಳಿವುಗಳ ಹೋಲಿಕೆ  

ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.


ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.


ಮನುಷ್ಯನು ಜನ ಸಮುದಾಯಕ್ಕೆ ಹೆದರಿದ್ದರಿಂದಾಗಲಿ, ಕುಲೀನರ ತಿರಸ್ಕಾರವು ನನಗೆ ಭಯ ಹುಟ್ಟಿಸಿದ್ದರಿಂದಾಗಲಿ,


ಆಗ ಯೆಹೋಶುವನು ಆಕಾನನಿಗೆ “ನನ್ನ ಮಗನೇ, ನೀನು ಇಸ್ರಾಯೇಲರ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವುದನ್ನೂ ಮುಚ್ಚಿಡಬೇಡ” ಅಂದನು.


ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?” ಎಂದು ಕೇಳಲು ಅವನು, “ಅವರು ಬಹುದೂರ ದೇಶದಿಂದ ಬಾಬೆಲಿನಿಂದ ನನ್ನ ಬಳಿಗೆ ಬಂದವರು” ಎಂದು ಉತ್ತರಕೊಟ್ಟನು.


ಆಗ ಪ್ರವಾದಿಯಾದ ಯೆಶಾಯನು ಹಿಜ್ಕೀಯನಿಗೆ, “ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳು.


ಬಯಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತ್ಯಗಳಲ್ಲಿ ನೀವು ಮಾಡಿದ ಪಾಪದ ನಿಮಿತ್ತ, ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನು ಹಾಗು ಪೂಜಾಸ್ಥಳಗಳನ್ನು ಸೂರೆಗೆ ಈಡು ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು