Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ನನ್ನ ಸಂತೈಸಿರಿ, ಸಂತೈಸಿರಿ” ಎಂದು ನಿಮ್ಮ ದೇವರು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಿಮ್ಮ ದೇವರು ಇಂತೆನ್ನುತ್ತಾರೆ : “ಸಂತೈಸಿ, ನನ್ನ ಜನರನ್ನು ಸಂತೈಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಿನ್ನ ದೇವರು ಹೇಳುವುದೇನೆಂದರೆ: “ನನ್ನ ಜನರನ್ನು ಸಂತೈಸು, ಸಂತೈಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:1
29 ತಿಳಿವುಗಳ ಹೋಲಿಕೆ  

ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ.


ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು.


ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿಕೊಳ್ಳಿರಿ.


ನನ್ನೊಂದಿಗೆ ಮಾತನಾಡಿದ ದೂತನಿಗೆ, ಯೆಹೋವನು ಕರುಣೆ ಹಾಗೂ ಒಳ್ಳೆಯ ಮಾತುಗಳಿಂದ ಉತ್ತರಕೊಟ್ಟನು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.


ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.


ಯೆರೂಸಲೇಮಿನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ! ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ.


ನಾನು ಮೊದಲನೆಯವನಾಗಿ ಚೀಯೋನಿಗೆ, “ಇಗೋ, ಅವರನ್ನು ನೋಡು” ಎಂದು ಹೇಳಿ ಶುಭಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.


ನಿಮ್ಮೊಳಗೆ ಯಾರು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವರು? ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.


ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.


ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ.


ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು.


ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ,


ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸಲು, ನನ್ನ ರೋಷವು ನಿನ್ನ ಕಡೆಯಿಂದ ತೊಲಗಿ ಬಿಡುವುದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.


ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ; ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ.


ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ,


ಮತ್ತೊಮ್ಮೆ ಹೀಗೆ ಸಾರಿ ಹೇಳು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ನನ್ನ ಪಟ್ಟಣಗಳಲ್ಲಿ ಶುಭವು ತುಂಬಿ ತುಳುಕುವುದು; ಯೆಹೋವನು ಇನ್ನು ಚೀಯೋನನ್ನು ಸಂತೈಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು