Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಭೂಮಂಡಲ ನಿವಾಸಿಗಳು ಮಿಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ; ಆಕಾಶಮಂಡಲವನ್ನು ನಾರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿ ಕಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಸೀನನಾಗಿಹನು ಆತ ಭೂಮಂಡಲಕ್ಕಿಂತ ಮೇಲೆ ಭೂನಿವಾಸಿಗಳು ಕಾಣುತಿಹರು ಆತನಿಗೆ ಮಿಡತೆಗಳಂತೆ ಹರಡಿಹನು ಆಕಾಶಮಂಡಲವನು ನವಿರು ಬಟ್ಟೆಯಂತೆ ಮೇಲೆತ್ತಿಕಟ್ಟಿಹನು ಅದನ್ನು ನಿವಾಸದ ಗುಡಾರದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಭೂಮಂಡಲನಿವಾಸಿಗಳು ವಿುಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ; ಆಕಾಶಮಂಡಲವನ್ನು ನವರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿಕಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೋವನು ಸತ್ಯವಾದ ದೇವರು. ಆತನು ಉನ್ನತವಾದ ಆಕಾಶದಲ್ಲಿ ಕುಳಿತುಕೊಳ್ಳುವನು. ಆತನಿಗೆ ಹೋಲಿಸಿದರೆ ಜನರು ಮಿಡತೆಗಳಂತಿರುವರು. ಆತನು ಬಟ್ಟೆಯಂತೆ ಆಕಾಶಮಂಡಲವನ್ನು ಸುರುಳಿಯಾಗಿ ಸುತ್ತುವನು. ಆಕಾಶಮಂಡಲವನ್ನು ಆತನು ಎಳೆದು ಗುಡಾರದಂತೆ ಅಗಲಮಾಡಿ ಅದರಡಿಯಲ್ಲಿ ಕುಳಿತುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಕಾಶಮಂಡಲವನ್ನು ತೆರೆಯಂತೆ ವಿಸ್ತರಿಸಿ, ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ, ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:22
28 ತಿಳಿವುಗಳ ಹೋಲಿಕೆ  

ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿರುವೆ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿರುವೆ.


ಆಕಾಶಮಂಡಲವನ್ನು ಉಂಟುಮಾಡಿ ಹರಡಿ ಭೂಮಂಡಲವನ್ನೂ, ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಜನರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗೆನ್ನುತ್ತಾನೆ,


ಆತನು ಸಾಗರದ ಮೇಲೆ ಚಕ್ರಾಕಾರವಾದ ಗೆರೆಯನ್ನು ಎಳೆದು, ಆಕಾಶಮಂಡಲವನ್ನು ಸ್ಥಾಪಿಸುವಾಗ ಅಲ್ಲಿದ್ದೆನು.


ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?


ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ.


ಸಕಲ ಜನಾಂಗಗಳು ಆತನ ದೃಷ್ಟಿಯಲ್ಲಿ ಏನೂ ಇಲ್ಲದಂತಿವೆ, ಅವು ಆತನ ಎಣಿಕೆಯಲ್ಲಿ ಶುದ್ಧಶೂನ್ಯವೇ.


ಅನಾದಿಕಾಲದಿಂದಿರುವ ಮಹೋನ್ನತಾಕಾಶದಲ್ಲಿ ವಾಹನಾರೂಢನಾಗಿ ಇರುವಾತನನ್ನು ಸ್ತುತಿಸಿರಿ. ಕೇಳಿರಿ; ಆತನ ಗರ್ಜನೆಯು ಮಹಾಘೋರವಾದದ್ದು.


ದಟ್ಟವಾದ ಮೋಡಗಳು ಆತನಿಗೆ ಪರದೆಯ ಹಾಗಿರುವುದರಿಂದ ನೋಡಲಾರನು; ಆಕಾಶಮಂಡಲದ ಮೇಲೆ ನಡೆದಾಡುತ್ತಾನೆ’ ಎಂದು ಹೇಳಿಕೊಂಡೆಯಲ್ಲವೇ.


ಆಕಾಶಮಂಡಲವನ್ನು ವಿಶಾಲಪಡಿಸಿದವನು ಆತನೊಬ್ಬನೇ. ಅಲ್ಲಕಲ್ಲೋಲವಾದ ಸಮುದ್ರದ ಮೇಲೆ ನಡೆಯುತ್ತಾನೆ.


ಆಕಾಶಮಂಡಲವನ್ನು ಹರಡಿ, ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟೆಯಾ? ನಾಶಮಾಡಬೇಕೆಂದು ಬಾಣವನ್ನು ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ? ಆ ಹಿಂಸಕನ ಕ್ರೋಧವು ಎಲ್ಲಿ ಇದೆ?


ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ, “ಸರ್ವವನ್ನು ಉಂಟುಮಾಡಿದ ಕರ್ತನಾದ ಯೆಹೋವನು ನಾನೇ, ನಾನೊಬ್ಬನೇ ಗಗನಮಂಡಲವನ್ನು ಹರಡಿ, ಭೂಮಂಡಲವನ್ನು ವಿಸ್ತರಿಸಿದ್ದೇನೆ.


ಆಹಾ, ಆತನ ಗಣನೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದುರುವ ತುಂತುರಿನಂತೆಯೂ, ತಕ್ಕಡಿಯಲ್ಲಿನ ಧೂಳಿನ ಹಾಗೂ ಇರುತ್ತವೆ. ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಎತ್ತುತ್ತಾನೆ.


ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.


ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳಂತೆ ಇದ್ದೇವೆ ಎಂದು ತಿಳಿದುಕೊಂಡೆವು. ಅವರಿಗೂ ನಾವು ಹಾಗೆಯೇ ಕಾಣಿಸಿದೆವು” ಎಂದು ಹೇಳಿದರು.


ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶ ಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ, ಮನುಷ್ಯರೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ,


ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು; ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು.


ಆಹಾ, ಮೇಘಗಳ ಹರಡುವಿಕೆಯನ್ನೂ, ಆತನ ಗುಡಾರದಲ್ಲಿನ ಗರ್ಜನೆಗಳನ್ನೂ ಯಾರು ಗ್ರಹಿಸಬಲ್ಲರು?


ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.


ತಗಡು ಬಡಿದ ಎರಕದ ದರ್ಪಣದಷ್ಟು ಗಟ್ಟಿಯಾಗಿರುವ ಆಕಾಶಮಂಡಲವನ್ನು ಆತನ ಹಾಗೆ ನಿರ್ಮಿಸಬಹುದೇ?


ಬಳಿಕ ದೇವರು “ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ” ಅಂದನು.


ಕತ್ತಲನ್ನು ತನ್ನ ಸುತ್ತಲು ಗುಡಾರದಂತೆ ಕವಿಸಿಕೊಂಡು, ಜಲಮಯವಾಗಿರುವ ನೀಲಮೇಘಗಳ ಮಧ್ಯದಲ್ಲಿ ಮರೆಯಾದನು.


ಆದರೂ ಅವುಗಳ ಪ್ರಭುತ್ವವು ಭೂಮಿಯಲ್ಲೆಲ್ಲಾ ಪ್ರಸರಿಸಿದೆ; ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ. ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ.


“ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್ ದೇವರೇ, ಸೇನಾಧೀಶ್ವರನಾದ ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕ ಭೂಲೋಕಗಳನ್ನು ಉಂಟುಮಾಡಿದವನು ನೀನೇ.


ಆತನು ಶೂನ್ಯದ ಮೇಲೆ ಆಕಾಶದ ಉತ್ತರ ದಿಕ್ಕನ್ನು ವಿಸ್ತರಿಸಿ, ಭೂಲೋಕವನ್ನು ಯಾವ ಆಧಾರವೂ ಇಲ್ಲದೆ ತೂಗು ಹಾಕಿದ್ದಾನೆ.


ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ, ಜಜ್ಜಿಹೋಗದೆಯೂ ತನ್ನ ಕಾರ್ಯದಲ್ಲಿ ನಿರತನಾಗಿರುವನು. ದ್ವೀಪಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು