Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ದಯಪಾಲಿಸುವನಾತ ಬಲಾಭಿವೃದ್ಧಿಯನ್ನು ಬಳಲಿದವನಿಗೆ ಅನುಗ್ರಹಿಸುವನಾತ ಚೈತನ್ಯವನು ನಿತ್ರಾಣನಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ ನಿರ್ಬಲನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಬಳಲಿಹೋದವರನ್ನು ಆತನು ಬಲಶಾಲಿಗಳನ್ನಾಗಿ ಮಾಡುತ್ತಾನೆ. ಬಲಹೀನರನ್ನು ಶಕ್ತಿವಂತರನ್ನಾಗಿ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆತನು ದಣಿದವನಿಗೆ ಶಕ್ತಿಯನ್ನೂ, ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:29
17 ತಿಳಿವುಗಳ ಹೋಲಿಕೆ  

ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ಆತನ ಮಹಿಮಾ ಶಕ್ತಿಯ ಪ್ರಕಾರ ಎಲ್ಲಾ ಸಾಮರ್ಥ್ಯದಲ್ಲಿ ಬಲಹೊಂದಿ, ಎಲ್ಲವನ್ನೂ ತಾಳ್ಮೆಯಿಂದಲೂ, ದೀರ್ಘಶಾಂತಿಯಿಂದಲೂ ಸಹಿಸಿಕೊಳ್ಳುವವರಾಗಿರಬೇಕೆಂತಲೂ,


ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ.


ನಾನು ಬಳಲಿದವರನ್ನು ತಂಪುಗೊಳಿಸಿ, ಕುಂದಿದವರೆಲ್ಲರನ್ನೂ ತೃಪ್ತಿಪಡಿಸುವೆನಷ್ಟೆ” ಎಂಬುದೇ.


ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.


ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ. ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ.


ನಿಮ್ಮ ಕೋಟೆಯ ಬಾಗಿಲುಗಳಿಗೆ ಕಬ್ಬಿಣದ ಮತ್ತು ತಾಮ್ರದ ಅಗುಳಿಗಳು ಇರಲಿ; ನೀವು ಇರುವವರೆಗೂ ನಿಮಗೆ ಬಲವಿರಲಿ” ಎಂದು ಹೇಳಿದನು.


ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು.


ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರಮಿಯ ಭುಜಬಲದಿಂದಲೂ, ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನಿಂದಲೂ ಅವನ ಕೈಗಳ ಬಿಲ್ಲು ಸ್ಥಿರವಾಗಿ ನಿಂತಿರುವುದು. ಅವನ ಕೈಗಳು ಯಾಕೋಬನ ಒಡೆಯನಿಂದ ಬಲಗೊಂಡಿವೆ.


ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ.


ಆತನು ಲೇಹಿಯಲ್ಲಿ ಒರಳಬಂಡೆಯನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಲು ಅವನು ಅದನ್ನು ಕುಡಿದು ಪುನಃ ಚೈತನ್ಯಹೊಂದಿದನು. ಆದ್ದರಿಂದ ಅದಕ್ಕೆ ಏನ್ ಹಕ್ಕೋರೇ ಎಂದು ಹೆಸರಾಯಿತು; ಅದು ಇಂದಿನ ವರೆಗೂ ಲೆಹೀಯಲ್ಲಿರುತ್ತದೆ.


ದೇವರೇ, ಪರಿಶುದ್ಧಾಲಯದಲ್ಲಿರುವ ನೀನು ಮಹಾಭಯಂಕರನು. ಇಸ್ರಾಯೇಲರ ದೇವರು ತನ್ನ ಪ್ರಜೆಗೆ ಬಲಪರಾಕ್ರಮಗಳನ್ನು ದಯಪಾಲಿಸುವನು. ದೇವರಿಗೆ ಸ್ತೋತ್ರ.


“ಶೂರರ ಬಿಲ್ಲುಗಳು ಮುರಿಯಲ್ಪಟ್ಟಿವೆ, ಎಡವಿದವರು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡಿದ್ದಾರೆ.


ಹೀಗೆ ಎಲ್ಲರೂ, “ಇವರ ಕೈಗಳು ಜೋಲು ಬಿದ್ದು ಕೆಲಸವನ್ನು ಮುಗಿಸದೆ ಇರಲಿ” ಎಂದು ನಮ್ಮನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದರು. ಆದರೆ ನನ್ನ ದೇವರೇ, ನನ್ನ ಕೈಗಳನ್ನು ಬಲಗೊಳಿಸಿ ನನ್ನನ್ನು ಧೈರ್ಯಪಡಿಸು ಎಂದು ಪ್ರಾರ್ಥಿಸಿದೆನು


ನಿನ್ನ ಪ್ರಜಾಮಂಡಲಿಯು ಅದರಲ್ಲಿ ವಾಸಮಾಡಿತು. ದೇವರೇ, ನೀನು ದಯಾಪರನಾಗಿ ದರಿದ್ರರಿಗೆ ಬೇಕಾದದ್ದೆಲ್ಲವನ್ನು ಒದಗಿಸಿಕೊಟ್ಟಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು