Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನ ಶ್ವಾಸವು ಅದರ ಮೇಲೆ ಬೀಸುವುದರಿಂದ ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು. ನಿಶ್ಚಯವಾಗಿ ಜನರು ಹುಲ್ಲೇ ಹುಲ್ಲು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪ್ರಭುವಿನ ಶ್ವಾಸ ಬೀಸಲು ಒಣಗಿ ಹೋಗುವುದಾ ಹುಲ್ಲು ಬಾಡಿ ಹೋಗುವುದಾ ಹೂವು ಮಾನವರೆಲ್ಲ ಹುಲ್ಲೇ ಹುಲ್ಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನ ಶ್ವಾಸವು ಅದರ ಮೇಲೆ ಬೀಸುವದರಿಂದ ಹುಲ್ಲು ಒಣಗಿಹೋಗುವದು, ಹೂವು ಬಾಡಿ ಹೋಗುವದು. ಜನವು ಹುಲ್ಲೇ ಹುಲ್ಲು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನ ಕಡೆಯಿಂದ ಒಂದು ಬಲವಾದ ಗಾಳಿಯು ಹುಲ್ಲಿನ ಮೇಲೆ ಬೀಸಿತು. ಆ ಹುಲ್ಲು ಒಣಗಿಹೋಯಿತು. ಕಾಡಿನ ಪುಷ್ಪವು ಬಾಡಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರ ಶ್ವಾಸವು ಅದರ ಮೇಲೆ ಬೀಸುವುದರಿಂದ, ಹುಲ್ಲು ಒಣಗಿಹೋಗುವುದು. ಹೂವು ಉದುರಿ ಹೋಗುವುದು. ಮಾನವರೆಲ್ಲರೂ ಹುಲ್ಲೇ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:7
15 ತಿಳಿವುಗಳ ಹೋಲಿಕೆ  

ಅದರ ಉಸಿರೇ ಇದ್ದಲನ್ನು ಹೊತ್ತಿಸುವುದು, ಜ್ವಾಲೆಯು ಬಾಯಿಂದೇಳುವುದು.


ಐಶ್ವರ್ಯವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಏಕೆಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.


ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು.


ದೇವರ ಶ್ವಾಸದಿಂದ ನಾಶವಾಗುತ್ತಾರೆ. ಆತನ ಸಿಟ್ಟೆಂಬ ಗಾಳಿಯಿಂದ ಹಾಳಾಗುತ್ತಾರೆ.


ಹೂವಿನ ಹಾಗೆ ಅರಳಿ ಬಾಡುವನು, ನೆರಳಿನಂತೆ ನಿಲ್ಲದೆ ಓಡಿಹೋಗುವನು.


ನೀನು ಮನುಷ್ಯರನ್ನು ಪ್ರವಾಹದಿಂದ ಬಡಿದುಕೊಂಡು ಹೋಗುತ್ತೀ; ಅವರು ನಿದ್ರೆಗೆ ಸಮಾನರೇ. ಅವರು ಹೊತ್ತಾರೆಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ.


ಅದು ಮುಂಜಾನೆಯಲ್ಲಿ ಬೆಳೆದು ಹೂಬಿಡುತ್ತದೆ; ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗಿಹೋಗುತ್ತದೆ.


ನನ್ನ ಹೃದಯವು ಬಿಸಿಲಿನಿಂದ ಬಾಡಿಹೋದ ಹುಲ್ಲಿನಂತಿದೆ; ಊಟವನ್ನು ಮರೆತೆನು.


ಗಾಳಿ ಬಡಿಯುತ್ತಲೇ ಅದು ಹೋಗುವುದು; ಅದರ ಸ್ಥಳವು ಅದನ್ನು ತಿರುಗಿ ಕಾಣುವುದಿಲ್ಲ.


ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.


ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು. ಅವರು ಹೊಲದ ಗಿಡಕ್ಕೂ, ಹಸಿರು ಹುಲ್ಲಿಗೂ, ಮಾಳಿಗೆಯ ಮೇಲಣ ಹುಲ್ಲಿಗೂ, ಹೊಡೆಯುವುದಕ್ಕಿಂತ ಮೊದಲೇ ಒಣಗಿ ಹೋದ ಪೈರಿಗೂ ಸಮಾನರಾದರು.


ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವುದು.


ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ನೀವು ಬಹು ಬೆಳೆಯನ್ನು ನಿರೀಕ್ಷಿಸಿದಿರಿ, ಆದರೆ, ಸ್ವಲ್ಪ ಮಾತ್ರ ಮನೆಗೆ ಸಾಗಿಸಲು ಸಾಧ್ಯವಾಯಿತು; ಯಾಕೆಂದರೆ ನಾನು ಅದನ್ನು ಫಲಿಸಲು ಬಿಡಲಿಲ್ಲ. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇದಕ್ಕೆಲ್ಲಾ ಕಾರಣವೇನು? ನನ್ನ ಆಲಯವು ಪಾಳು ಬಿದ್ದಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಮನೆಯ ಕೆಲಸಕ್ಕೆ ತವಕಪಡುತ್ತಿದ್ದಾನೆ, ಇದೇ ಕಾರಣ.”


ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ; ಅವನು ಅಡವಿಯ ಹೂವಿನ ಹಾಗೆ ಶೋಭಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು