ಯೆಶಾಯ 41:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಮೂಡಣದಿಂದ ಒಬ್ಬನನ್ನು ಎಬ್ಬಿಸಿ, ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು, ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು, ಅವನನ್ನು ರಾಜರ ಮೇಲೆ ಆಳುವಂತೆ ಮಾಡಿ, ಅವರ ಕತ್ತಿಯನ್ನು ಧೂಳನ್ನಾಗಿಯೂ, ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಹುಲ್ಲನ್ನಾಗಿಯೂ ಅವರನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಕರೆತಂದವರಾರು ಆ ಪರಾಕ್ರಮಿಯನ್ನು ಪೂರ್ವದಿಂದ? ಅವನು ಗೆದ್ದುಬರುವಂತೆ ಮಾಡಿದವರಾರು ದಿಗ್ವಿಜಯದಿಂದ? ರಾಷ್ಟ್ರಗಳನ್ನು, ರಾಜರುಗಳನ್ನು ಸೋಲಿಸಿದವರಾರು ಅವನ ಕೈಯಿಂದ? ಧೂಳು ಧೂಳಾಗಿಸುತ್ತಾನೆ ಅವರನ್ನು ಅವನ ಖಡ್ಗದಿಂದ ಗಾಳಿಗೆ ತೂರಿಹೋಗುವ ಹುಲ್ಲನ್ನಾಗಿಸುತ್ತಾನೆ ಅವನ ಬಿಲ್ಲಿನಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಮೂಡಲಲ್ಲಿ ಒಬ್ಬನನ್ನು ಎಬ್ಬಿಸಿ ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು ಅವನನ್ನು ರಾಜರ ಮೇಲೆ ಆಳಗೊಡಿಸಿ ಅವರ ಕತ್ತಿಯನ್ನು ದೂಳನ್ನಾಗಿಯೂ ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಒಣಹುಲ್ಲನ್ನಾಗಿಯೂ ಮಾಡಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಈ ಪ್ರಶ್ನೆಗಳಿಗೆ ಉತ್ತರಿಸಿರಿ: ಪೂರ್ವದಿಕ್ಕಿನಿಂದ ಬರುವ ಮನುಷ್ಯನನ್ನು ಎಚ್ಚರಿಸಿದವರು ಯಾರು? ಅವನು ಒಳ್ಳೆಯತನವನ್ನು ತನ್ನೊಂದಿಗಿರಲು ಕೇಳುತ್ತಾನೆ. ತನ್ನ ಖಡ್ಗವನ್ನು ಉಪಯೋಗಿಸಿ ಜನಾಂಗಗಳನ್ನು ಸೋಲಿಸುವನು. ಅವರನ್ನು ಧೂಳಿನಂತೆ ಮಾಡುವನು. ತನ್ನ ಬಿಲ್ಲನ್ನು ಉಪಯೋಗಿಸಿ ರಾಜರನ್ನು ವಶಪಡಿಸಿಕೊಳ್ಳುತ್ತಾನೆ. ಅವರು ಗಾಳಿಯಲ್ಲಿ ತೂರಾಡುವ ಹುಲ್ಲಿನಂತೆ ಓಡಿಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಪೂರ್ವದಿಂದ ನೀತಿವಂತನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು, ರಾಷ್ಟ್ರಗಳನ್ನು ಅವನ ಮುಂದೆ ಕೊಟ್ಟುಬಿಟ್ಟು, ಅವನನ್ನು ರಾಜರ ಮೇಲೆ ಆಳುವುದಕ್ಕೆ ಮಾಡಿದವನು ಯಾರು? ಅವನ ಖಡ್ಗವನ್ನು ಧೂಳನ್ನಾಗಿಯೂ, ಅವನ ಬಿಲ್ಲನ್ನು ಹಾರಿಹೋಗುವ ಹೊಟ್ಟಿನಂತೆಯೂ ಅವರನ್ನು ಕೊಟ್ಟನು. ಅಧ್ಯಾಯವನ್ನು ನೋಡಿ |
ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ, “ಪರಲೋಕದ ದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಪ್ರಯಾಣ ಬೆಳೆಸಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು” ಎಂದು ಪ್ರಕಟಿಸಿದನು.