Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲಸ್ವಾಮಿಯೇ ಸೃಷ್ಟಿಸಿದ್ದಾನೆ” ಎಂದು ಎಲ್ಲರೂ ಕಂಡು ತಿಳಿದು ಮನಸ್ಸಿಗೆ ತಂದು ಗ್ರಹಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇದನು ಕಂಡರಿತು ಗ್ರಹಿಸಿಕೊಳ್ಳುವರು ಜನರು ಮನಸಾರೆ, ನುಡಿವರಾಗ, ‘ಇದನ್ನು ಮಾಡಿದ ಹಸ್ತವು ಸರ್ವೇಶ್ವರ ಸ್ವಾಮಿಯದೇ, ಇದನ್ನು ಸೃಷ್ಟಿಸಿದಾತ ಇಸ್ರಯೇಲಿನ ಪರಮಪಾವನ ಸ್ವಾಮಿಯೇ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲ ಸ್ವಾವಿುಯೇ ಸೃಷ್ಟಿಸಿದ್ದಾನೆ ಎಂದು ಎಲ್ಲರೂ ಕಂಡು ತಿಳಿದು ಮನಮುಟ್ಟಿ ಗ್ರಹಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಜನರು ಇವುಗಳನ್ನು ನೋಡಿ, ಇವು ಯೆಹೋವನ ಶಕ್ತಿಯಿಂದ ಆದವು ಎಂದು ತಿಳಿದುಕೊಳ್ಳುವರು. ಜನರು ಈ ಸಂಗತಿಗಳನ್ನು ನೋಡಿ ಇಸ್ರೇಲರ ಪರಿಶುದ್ಧನಾದ ಯೆಹೋವನೇ ಇವುಗಳನ್ನು ಮಾಡಿದನೆಂದು ತಿಳಿದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಯೆಹೋವ ದೇವರ ಹಸ್ತವು ಇದನ್ನು ಮಾಡಿದೆ ಎಂದೂ, ಇಸ್ರಾಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ಕಂಡು ತಿಳಿದು, ಮನಸ್ಸಿಗೆ ಗ್ರಹಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:20
20 ತಿಳಿವುಗಳ ಹೋಲಿಕೆ  

ಈ ಎಲ್ಲವುಗಳ ಸಾಕ್ಷಿಯಿಂದ ಯೆಹೋವನ ಕೈಯೇ ಸಕಲ ಕಾರ್ಯಗಳನ್ನು ಮಾಡುತ್ತದೆ ಎಂದು ಯಾರಿಗೆ ತಾನೇ ಗೊತ್ತಾಗುವುದಿಲ್ಲ?


ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.


ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ಸೃಷ್ಟಿಸಿಕೊಂಡಿದ್ದೇನೆ.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.


ಆ ದಿನದಲ್ಲಿ ಆತನು ಬರುವಾಗ ತನ್ನ ಪರಿಶುದ್ಧ ಜನರಿಂದ ಮಹಿಮೆ ಹೊಂದಿದವನಾಗಿಯೂ ಮತ್ತು ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವನು.


ಆಗ ಅವರು ಇದು ನಿನ್ನ ಕೈಕೆಲಸವೆಂದೂ, ಯೆಹೋವನಾದ ನೀನೇ ಇದನ್ನು ಮಾಡಿದೆ ಎಂದು ತಿಳಿದುಕೊಳ್ಳುವರು.


“ಅವರ ಕೃತ್ಯಗಳಿಗೂ, ಆಲೋಚನೆಗಳಿಗೂ ತಕ್ಕದ್ದನ್ನು ಮಾಡುವೆನು; ನಾನು ಇನ್ನು ಮುಂದೆ ಸಮಸ್ತ ಜನಾಂಗಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.


ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ, ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ. ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು. ‘ದೇವರು ಮಾಡುವ ಕೆಲಸವನ್ನು ನೋಡಿರಿ!’


ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.


ತಪ್ಪಿದ ಹೃದಯವುಳ್ಳವರೆಲ್ಲರೂ ವಿವೇಕಿಗಳಾಗುವರು, ಗುಣಗುಟ್ಟುವವರು ಉಪದೇಶವನ್ನು ಕೇಳಿ ನಡೆಯುವರು” ಎಂದು ಹೇಳುತ್ತಾನೆ.


ಯೆಹೋವನ ಮಹಿಮೆಯು ಗೋಚರವಾಗುವುದು. ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ.


ನಾನು ಯೆಹೋವನು, ನಿಮ್ಮ ಸದಮಲಸ್ವಾಮಿಯು, ಇಸ್ರಾಯೇಲನ್ನು ಸೃಷ್ಟಿಸಿದವನು, ನಿಮ್ಮ ಅರಸನೂ ಆಗಿದ್ದೇನೆ.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು. ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳನ್ನು ನೆಕ್ಕುವರು. ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡುವುದಿಲ್ಲ” ಎಂದು ನಿನಗೆ ಗೊತ್ತಾಗುವುದು.


ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವುದು, ನಿಮ್ಮ ಎಲುಬುಗಳು ಹಸಿ ಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.


ಈ ವಿವೇಕವು ಸಹ ಅತಿಶಯವಾದ ಆಲೋಚನಾಪರನೂ, ಸುಜ್ಞಾನ ಶ್ರೇಷ್ಠನೂ ಆಗಿರುವ, ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ.


ಇದನ್ನೆಲ್ಲಾ ನಡೆಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ ಯೆಹೋವನೆಂಬ ನಾನೇ; ಹೌದು, ಆದಿಪುರುಷನೂ, ಅಂತ್ಯಕಾಲದವರ ಸಂಗಡಿಗನೂ ಆಗಿರುವ ನಾನೊಬ್ಬನೇ.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು