Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದನ್ನೆಲ್ಲಾ ನಡೆಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ ಯೆಹೋವನೆಂಬ ನಾನೇ; ಹೌದು, ಆದಿಪುರುಷನೂ, ಅಂತ್ಯಕಾಲದವರ ಸಂಗಡಿಗನೂ ಆಗಿರುವ ನಾನೊಬ್ಬನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವರು ಯಾರು? ಸರ್ವೇಶ್ವರನಾದ ನಾನೇ. ಹೌದು, ಆದಿಯಲ್ಲಿದ್ದವನು. ಅಂತ್ಯದಲ್ಲಿ ಇರುವವನು ಆದ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ ಯೆಹೋವನೆಂಬ ನಾನೇ; ಹೌದು, ಆದಿಪುರುಷನೂ ಅಂತ್ಯಕಾಲದವರ ಸಂಗಡಿಗನೂ ಆಗಿರುವ ನಾನೊಬ್ಬನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇವೆಲ್ಲಾ ನೆರವೇರುವಂತೆ ಮಾಡಿದವರು ಯಾರು? ಆದಿಯಿಂದ ಎಲ್ಲಾ ಜನರನ್ನು ಕರೆದವರು ಯಾರು? ಯೆಹೋವನೆಂಬ ನಾನೇ ಇವೆಲ್ಲವನ್ನು ಮಾಡಿದೆನು. ನಾನೇ ಮೊದಲನೆಯವನಾಗಿದ್ದೇನೆ. ಅನಾದಿಕಾಲಕ್ಕಿಂತ ಮೊದಲು ನಾನಿದ್ದೆನು. ಎಲ್ಲವೂ ಅಂತ್ಯವಾಗುವ ತನಕ ನಾನು ಇರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನೂ ಆದಿಯಿಂದ ತಲತಲಾಂತರಗಳನ್ನು ಬರಮಾಡಿದವನು ಯಾರು? ಯೆಹೋವ ಎಂಬ ನಾನೇ ಮೊದಲನೆಯವನು, ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:4
26 ತಿಳಿವುಗಳ ಹೋಲಿಕೆ  

ನಾನೇ ಆದಿಯೂ, ಅಂತ್ಯವೂ, ಮೊದಲನೆಯವನೂ, ಕಡೆಯವನೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ.


ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ನಾನೇ ಪರಮಾತ್ಮನು, ನಾನೇ ಆದಿಯೂ, ನಾನೇ ಅಂತ್ಯ


ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ, ನಾನು ಮೊದಲನೆಯವನೂ, ಕಡೆಯವನೂ,


ಕಾರ್ಯವು ನಡೆಯುವುದಕ್ಕೆ ಮೊದಲು ಇವರಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಸಮಯಕ್ಕೆ ಮೊದಲೇ “ಅವನು ಸತ್ಯವಂತನು” ಎಂದು ಯಾರು ಮುಂತಿಳಿಸಿದ್ದಾರೆ? ಯಾರೂ ಏನನ್ನೂ ತಿಳಿಸಬಲ್ಲವರಲ್ಲ, ಏನನ್ನೂ ಹೇಳತಕ್ಕವರಲ್ಲ, ನಿಮ್ಮ ಮಾತುಗಳು ಯಾರ ಕಿವಿಗೂ ಬೀಳುವುದಿಲ್ಲ.


ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.


ಯೆಹೋವನ ಮಾತೇನೆಂದರೆ, ‘ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು. ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು. ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ.


ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,


“ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.


ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಕೊಟ್ಟವನು ಯಾರು? ಯಾರ ವಿರುದ್ಧವಾಗಿ ನಾವು ದ್ರೋಹಮಾಡಿದೆವೋ ಆ ಯೆಹೋವನಲ್ಲವೆ. ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ಉಪದೇಶವನ್ನು ಕೇಳಲಿಲ್ಲ


“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು, ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂ ಹೇಳುವುದೇನಂದರೆ,


ಅದು, “ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು” ಎಂದು ನುಡಿಯಿತು.


ಯಾರು ಸಾಗರ ಸಮುದ್ರಗಳನ್ನು ಬರಿದಾದ ಕೈಯಿಂದ ಅಳತೆಮಾಡಿದವನು? ಯಾರು ಆಕಾಶಮಂಡಲದ ವ್ಯಾಪ್ತಿಯನ್ನು ಗೇಣಿನಿಂದ ನಿರ್ಣಯಿಸಿದವನು? ಭೂಲೋಕದ ಮಣ್ಣನ್ನೆಲ್ಲಾ ಕೊಳಗಕ್ಕೆ ತುಂಬಿದವನು ಯಾರು? ಬೆಟ್ಟಗಳನ್ನು ತ್ರಾಸಿನಿಂದಲೂ, ಗುಡ್ಡಗಳನ್ನು ತಕ್ಕಡಿಯಿಂದಲೂ ತೂಗಿದವನು ಯಾರು?


ಅನಾದಿಕಾಲದಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ’ ಎಂದು ಬರೆದದೆ.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದುವರಿಸುತ್ತಾನೆ. ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ; ಆತನು ಅತಿ ಬಲಾಢ್ಯನೂ, ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು.


ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.


ನೀನಾದರೋ ಏಕರೀತಿಯಾಗಿರುತ್ತಿ; ನಿನ್ನ ವರ್ಷಗಳು ಮುಗಿದುಹೋಗುವುದಿಲ್ಲ.


ತಾನು ಎಂದೂ ಹೆಜ್ಜೆಯಿಡದ ಮಾರ್ಗದಲ್ಲಿ ಸುರಕ್ಷಿತವಾಗಿ ಮುಂದೆ ಹಾದು ಹೋಗುವಂತೆ ಅವರನ್ನು ಹಿಂದಟ್ಟುತ್ತಾ ಹೋದನು.


ಹೌದು, ಇಂದಿನಿಂದ ನಾನೇ ದೇವರು. ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ. ನನ್ನ ಕೆಲಸಕ್ಕೆ ಯಾರು ಅಡ್ಡಿ ಬರುವರು?’” ಎಂಬುದೇ ಯೆಹೋವನ ಮಾತು.


ನಿನ್ನ ಸೇವಕರ ಮಕ್ಕಳು ಬಾಳುವರು. ಅವರ ಸಂತತಿಯವರು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರುವರು” ಎಂದು ಮೊರೆಯಿಡುತ್ತೇನೆ.


ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲಸ್ವಾಮಿಯೇ ಸೃಷ್ಟಿಸಿದ್ದಾನೆ” ಎಂದು ಎಲ್ಲರೂ ಕಂಡು ತಿಳಿದು ಮನಸ್ಸಿಗೆ ತಂದು ಗ್ರಹಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು