Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ, ಇವನ ಕಿವಿ ತೆರೆದಿದ್ದರೂ ಕೇಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೀವು ಗಮನಿಸುವುದಿಲ್ಲ ಹಲವಿಷಯಗಳನ್ನು ಕಂಡಿದ್ದರೂ ನೀವು ಕೇಳುವುದಿಲ್ಲ ನಿಮ್ಮ ಕಿವಿಗಳು ತೆರೆದಿದ್ದರೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಇವನ ಕಿವಿ ತೆರೆದಿದ್ದರೂ ಕೇಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ತಾನು ಮಾಡತಕ್ಕದ್ದನ್ನು ಕಣ್ಣಾರೆ ಕಂಡರೂ ಅವನು ನನಗೆ ವಿಧೇಯನಾಗುವುದಿಲ್ಲ. ಅವನು ಕಿವಿಯಾರೆ ಕೇಳಿದರೂ ನನ್ನ ಮಾತುಗಳಿಗೆ ವಿಧೇಯನಾಗುವದಿಲ್ಲ; ಅದನ್ನು ಕೇಳಿಸಿಕೊಳ್ಳುವದೂ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ, ನಿನಗೆ ಗಮನವಿಲ್ಲ. ಅವನ ಕಿವಿಗಳು ತೆರೆದಿದ್ದರೂ, ಕೇಳನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:20
20 ತಿಳಿವುಗಳ ಹೋಲಿಕೆ  

ಮತ್ತೊಬ್ಬನಿಗೆ ಉಪದೇಶ ಮಾಡುವ ನಿನಗೆ ನೀನೇ ಉಪದೇಶಮಾಡಿಕೊಳ್ಳದೆ ಇದ್ದೀಯೋ? ಕದಿಯಬಾರದೆಂದು ಬೋಧಿಸುವ ನೀನೇ ಕಳ್ಳತನ ಮಾಡುತ್ತಿಯೇನು?


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.


ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ. ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.


ಅವರಂತು ದಿನದಿನವೂ ನನ್ನ ದರ್ಶನಕ್ಕಾಗಿ ಬಂದು, ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ, ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.


ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.


ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ, ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.


ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.


ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ


ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತನಾಡುವುದಕ್ಕೆ ಕಾರಣವೇನೆಂದರೆ, ಅವರು ಕಂಡರೂ ಕಾಣುವುದಿಲ್ಲ. ಅವರು ಕೇಳಿದರೂ ನಿಜವಾಗಿಯೂ ಆಲಿಸುವುದಿಲ್ಲ ಮತ್ತು ತಿಳಿದುಕೊಳ್ಳುವುದಿಲ್ಲ.


ಅದಕ್ಕೆ ಆತನು, “ನೀನು ಈ ಜನರ ಬಳಿಗೆ ಹೋಗಿ, ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ,


ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ, ಮಧುರ ಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು