Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯಾರು ರಥಗಳನ್ನು, ಕುದರೆಗಳನ್ನು, ಸೈನ್ಯಗಳನ್ನು, ಪರಾಕ್ರಮಶಾಲಿಗಳನ್ನು ಹೊರಡಿಸಿ, ಅವು ಬಿದ್ದು ಏಳಲಾರದಂತೆಯೂ, ದೀಪದೋಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿದವನು” ಯೆಹೋವನು ಹೀಗೆನ್ನುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಶ್ವರಥಭಟಸೈನ್ಯಗಳನ್ನು ಹೊರಡಿಸಿದವನಾರೋ, ಅವು ಬಿದ್ದು ಏಳಲಾಗದೆ, ಬತ್ತಿಕರಗಿಹೋಗುವಂತೆ ಮಾಡಿದವನಾರೋ, ಆ ಸ್ವಾಮಿ ಸರ್ವೇಶ್ವರ ನುಡಿದ ಮಾತಿದೋ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯಾವನು ಅಶ್ವರಥಭಟಸೈನ್ಯಗಳನ್ನು ಹೊರಡಿಸಿ ಅವು ಬಿದ್ದು ಏಳಲಾರದಂತೆಯೂ ದೀಪದೋಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿದನೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ನನ್ನ ವಿರುದ್ಧವಾಗಿ ಯುದ್ಧಮಾಡುವ ಅಶ್ವದಳ, ರಥಬಲ ಮತ್ತು ಭೂದಳವು ಸೋತುಹೋಗುವವು. ಮತ್ತೆ ಅವರು ಏಳುವದೇ ಇಲ್ಲ. ಅವರೆಲ್ಲರೂ ನಾಶವಾಗುವರು. ಮೇಣದ ಬತ್ತಿಯ ಬೆಂಕಿಯು ಆರಿಸಲ್ಪಡುವಂತೆಯೇ ಅವರು ನಂದಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ರಥಗಳನ್ನು, ಕುದುರೆಗಳನ್ನು, ದಂಡನ್ನು, ಪರಾಕ್ರಮಶಾಲಿಗಳನ್ನು ಹೊರಡಿಸಿ, ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ, ದೀಪದ ಬತ್ತಿ ನಂದಿ ಆರಿಹೋಗುವಂತೆಯೂ ಮಾಡಿದಾತನು ಇಂತೆನ್ನುತ್ತಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:17
16 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.”


ಅವರು ಜೇನು ನೊಣಗಳಂತೆ ನನ್ನನ್ನು ಕವಿದರೂ; ಮುಳ್ಳಿನ ಬೆಂಕಿಯಂತೆ ಕ್ಷಣದಲ್ಲಿ ಅಳಿದುಹೋಗುವರು. ಯೆಹೋವನ ಹೆಸರಿನಿಂದ ಅವರನ್ನು ಸಂಹರಿಸುವೆನು.


ಆತನು ಫರೋಹನ ರಥಗಳನ್ನೂ, ಸ್ಯೆನಿಕರನ್ನೂ ಸಮುದ್ರದಲ್ಲಿ ಕೆಡವಿಹಾಕಿದನು. ಫರೋಹನ ಶ್ರೇಷ್ಠ ವೀರರನ್ನು ಕೆಂಪುಸಮುದ್ರದಲ್ಲಿ ಮುಳುಗಿಸಿ ಬಿಟ್ಟನು.


ನ್ಯಾಯಕ್ಕೆ ಜಯ ದೊರೆಯುವವರೆಗೂ ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ಇರುವನು.


ಫರೋಹನ ಕುದುರೆಗಳು, ರಥಗಳೂ, ರಾಹುತರೂ ಸಮುದ್ರದೊಳಗೆ ಬಂದಾಗ ಯೆಹೋವನು ಸಮುದ್ರದ ನೀರನ್ನು ಅವರ ಮೇಲೆ ತಿರುಗಿ ಬರಮಾಡಿ ಮುಳುಗಿಸಿಬಿಟ್ಟನು. ಆದರೆ ಇಸ್ರಾಯೇಲರಾದರೋ ಸಮುದ್ರದ ಮಧ್ಯದಲ್ಲಿನ ಒಣ ನೆಲದ ಮೇಲೆ ದಾಟಿ ಹೋದರು.


ನಿನ್ನಿಂದ ರಾಜ್ಯಗಳನ್ನು ಅಳಿಸುತ್ತೇನೆ; ನಿನ್ನಿಂದ ಕುದುರೆಯನ್ನೂ ಮತ್ತು ಸವಾರನನ್ನೂ ಅಳಿಸಿಬಿಡುತ್ತೇನೆ; ನಿನ್ನಿಂದ ರಥವನ್ನೂ, ಸಾರಥಿಯನ್ನೂ ನಾಶಮಾಡುತ್ತೇನೆ;


ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕಿ, ನಿನ್ನ ಎಲ್ಲಾ ಸೈನ್ಯವನ್ನೂ, ಕುದರೆಗಳನ್ನೂ ಮತ್ತು ಕುದರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯ ಮತ್ತು ಗುರಾಣಿಗಳುಳ್ಳ ಮಹಾಸಮೂಹವನ್ನು ತರುವೆನು. ಇವರೆಲ್ಲರೂ ಖಡ್ಗವನ್ನು ಹಿಡಿದಿರುವರು.


ಬಾರಾಕನು ಅವನ ಸೈನ್ಯರಥಗಳನ್ನು ಅನ್ಯಜನರ ಹರೋಷೆತಿನ ವರೆಗೂ ಹಿಂದಟ್ಟಿದನು. ಸೀಸೆರನ ಸೈನ್ಯದವರೆಲ್ಲರೂ ಕತ್ತಿಯಿಂದ ಹತರಾದರು; ಒಬ್ಬನೂ ಉಳಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು