Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ಯಾಕೋಬೇ, ನೀನಾದರೋ ನನ್ನನ್ನು ಪ್ರಾರ್ಥಿಸಲಿಲ್ಲ, ಇಸ್ರಾಯೇಲೇ, ನೀನು ನನ್ನ ವಿಷಯದಲ್ಲಿ ಬೇಸರಗೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಯಕೋಬೇ, ನೀನೆನ್ನ ನಾಮಸ್ಮರಣೆ ಮಾಡದೆಹೋದೆ; ಇಸ್ರಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯಾಕೋಬೇ, ನೀನಾದರೋ ನನ್ನನ್ನು ಪ್ರಾರ್ಥಿಸಲಿಲ್ಲ, ಇಸ್ರಾಯೇಲೇ, ನೀನು ನನ್ನ ವಿಷಯದಲ್ಲಿ ಬೇಸರಗೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಯಾಕೋಬೇ, ನೀನು ನನಗೆ ಪ್ರಾರ್ಥಿಸಲಿಲ್ಲ. ಇಸ್ರೇಲೇ, ನೀನು ನನ್ನ ವಿಷಯದಲ್ಲಿ ಆಯಾಸಗೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಆದರೂ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ. ಇಸ್ರಾಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡಿದ್ದೀ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:22
19 ತಿಳಿವುಗಳ ಹೋಲಿಕೆ  

“ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆನು? ನಿನ್ನನ್ನು ಯಾವ ವಿಷಯದಲ್ಲಿ ಬೇಸರಗೊಳಿಸಿದೆನು? ನನ್ನ ಮೇಲೆ ಸಾಕ್ಷಿಹೇಳು.


ನೀವು “ದೇವರನ್ನು ಸೇವಿಸುವುದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರನಾದ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದ್ದರಿಂದ ಆದ ಲಾಭವೇನು?


ಅಯ್ಯೋ, ಈ ಸೇವೆಯು ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ತಾತ್ಸಾರ ಮಾಡುತ್ತೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಕಳವಾದ ಪಶುವನ್ನೂ, ಊನವಾದದ್ದನ್ನೂ, ರೋಗ ಹಿಡಿದ ಪ್ರಾಣಿಯನ್ನು ತಂದೊಪ್ಪಿಸುತ್ತೀರಿ. ನಾನು ನಿಮ್ಮ ಕೈಯಿಂದ ಸ್ವೀಕರಿಸುವುದಿಲ್ಲ” ಇದು ಯೆಹೋವನ ನುಡಿ.


ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.


ಮೋಶೆಯ ಧರ್ಮನಿಯಮಗಳಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.


ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡು, ವ್ಯರ್ಥಾಚರಣೆಯನ್ನು ಅನುಸರಿಸಿ ತಾವೇ ಅಯೋಗ್ಯರಾಗಿ ನನ್ನನ್ನು ಬಿಟ್ಟು ದೂರವಾದರು?


ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.


ನಿನ್ನನ್ನು ಅರಿಯದ ಮ್ಲೇಚ್ಛರ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ರಾಜ್ಯಗಳ ಮೇಲೆಯೂ, ನಿನ್ನ ರೌದ್ರವನ್ನು ಸುರಿದುಬಿಡು.


ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವುದಿಲ್ಲ.


ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ. “ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು. ಅವರೇ ಆತನಿಗೆ ಇಷ್ಟ. ನ್ಯಾಯತೀರಿಸುವ ದೇವರು ಎಲ್ಲಿದ್ದಾನೆ?” ಎಂದು ನೀವು ಕೇಳುವುದರಿಂದ ಆತನ ಗಮನದಲ್ಲಿ ಇದ್ದೀರಿ.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು