Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಿನ್ನ ಮೂಲಪಿತೃ ಪಾಪಮಾಡಿದ್ದಾನೆ, ನಿನ್ನ ಬೋಧಕರು ನನಗೆ ದ್ರೋಹಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಪಾಪಿಷ್ಟನಾಗಿದ್ದನು ನಿನ್ನ ಮೂಲಪಿತೃವು ನನಗೆ ದ್ರೋಹಿಗಳಾಗಿದ್ದರು ನಿನ್ನ ಪರವಾದಿಗಳು ನನ್ನ ಪವಿತ್ರಾಲಯವನ್ನು ಹೊಲೆಮಾಡಿದರು ನಿನ್ನ ಅಧಿಪತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಿನ್ನ ಮೂಲಪಿತೃವು ಪಾಪಿಷ್ಠನು, ನಿನ್ನ ಮಧ್ಯಸ್ಥರು ನನಗೆ ದ್ರೋಹಮಾಡಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಿನ್ನ ಮೊದಲನೆ ತಂದೆಯು ಪಾಪದಲ್ಲಿ ಬಿದ್ದನು. ನಿನ್ನ ವಕೀಲರು ನನಗೆ ವಿರುದ್ಧವಾಗಿ ಕಾರ್ಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಿನ್ನ ಮೂಲಪಿತೃ ಪಾಪಮಾಡಿದ್ದಾನೆ. ನಿನ್ನ ಬೋಧಕರು ನನಗೆ ವಿರೋಧವಾಗಿ ದ್ರೋಹ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:27
32 ತಿಳಿವುಗಳ ಹೋಲಿಕೆ  

ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ.


ಕರ್ತನಾದ ಯೆಹೋವನು ಯೆರೂಸಲೇಮ್ ಎಂಬಾಕೆಗೆ ಈ ಮಾತನ್ನು ಹೇಳಿಕಳುಹಿಸಿದ್ದಾನೆ, ‘ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ, ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.


ಈ ವಿಷಯ ಹೇಗೆಂದರೆ ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು.


“ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.


ಅದೇ ರೀತಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.


ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು,


ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು” ಅಂದನು.


“ನಿಮ್ಮ ಪೂರ್ವಿಕರ ಕಾಲದಿಂದಲೂ ನೀವು ನನ್ನ ವಿಧಿಗಳನ್ನು ಅನುಸರಿಸಿ ನಡೆಯಲ್ಲಿಲ್ಲ. ನನ್ನ ಕಡೆಗೆ ಪುನಃ ತಿರುಗಿರಿ; ತಿರುಗಿದರೆ, ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಯಾವ ವಿಷಯದಲ್ಲಿ ತಿರುಗೋಣ?” ಎನ್ನುತ್ತೀರಿ.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.


ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.


ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ. ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ” ಎಂದು ಮೊರೆಯಿಡುತ್ತಾರೆ.


ನನ್ನ ಪ್ರಜೆಗಳನ್ನು ಬಾಲಕರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆಯತಕ್ಕ ದಾರಿಯನ್ನು ಹಾಳುಮಾಡಿದ್ದಾರೆ.


ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.


“ಈ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಿ.


ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು.


ಭೂಮಿಯು ಅಮಲೇರಿದವನ ಹಾಗೆ ಓಲಾಡುತ್ತದೆ, ಗುಡಿಸಲಂತೆ ತೂಗಾಡುತ್ತದೆ; ಅದರ ದ್ರೋಹವು ಅದಕ್ಕೆ ಭಾರವಾಗಿದೆ, ಅದು ಬಿದ್ದು ಹೋಗುತ್ತಿದೆ, ತಿರುಗಿ ಏಳುವುದೇ ಇಲ್ಲ.


ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.


ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


ನಿಮ್ಮ ಪಿತೃವಾದ ಅಬ್ರಹಾಮನನ್ನೂ, ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು, ಆಶೀರ್ವದಿಸಿ ಅವನ ಸಂತಾನವನ್ನು ಹೆಚ್ಚಿಸಿದೆನು.


ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.


ಹೀಗಿರಲು ‘ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ’ ಎಂದು ನೀವು ಅಂದುಕೊಳ್ಳುವುದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳಾಗಿ ಮಾಡಿದೆ.


ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು