Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು? ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವುದಕ್ಕೆ ಸಾಕ್ಷಿಗಳನ್ನು ಕರೆದುತರಲಿ. ಆ ಸಾಕ್ಷಿಗಳು ಇವರ ಮಾತನ್ನು ಕೇಳಿ ‘ಇದು ನಿಜ’ ಎಂದು ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬರಲಿ, ಎಲ್ಲಾ ಜನಾಂಗಗಳು ಒಟ್ಟಿಗೆ ನೆರೆಯಲಿ, ಸಕಲ ದೇಶಿಯರು ಇಲ್ಲಿಯೇ. ಅವರ ದೇವರುಗಳಲ್ಲಿ ಭವಿಷ್ಯವನ್ನು ನುಡಿಯಬಲ್ಲವರು ಯಾರು? ಗತಿಸಿದ ಘಟನೆಗಳನ್ನು ಮುಂತಿಳಿಸಿದವರಾರು? ಕರೆತರಲಿ, ಆ ದೇವರುಗಳು ಸಾಕ್ಷಿಗಳನು ಸ್ಥಾಪಿಸಿಕೊಳ್ಳಲಿ, ತಾವು ಸತ್ಯವಂತರೆಂಬುದನು; ರುಜುಪಡಿಸಲಿ ಕೇಳುವವರಿಗೆ ತಮ್ಮ ಮಾತು ನಿಜವೆಂಬುದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು? ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವದಕ್ಕೆ ಸಾಕ್ಷಿಗಳನ್ನು ಕರತರಲಿ; ಆ ಸಾಕ್ಷಿಗಳು [ಇವರ ಮಾತನ್ನು] ಕೇಳಿ ನಿಜವೆಂದು ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಎಲ್ಲಾ ಜನಾಂಗದವರೂ ಎಲ್ಲಾ ಜನರೂ ಒಟ್ಟುಗೂಡಬೇಕು. ಅವರ ಸುಳ್ಳುದೇವರಲ್ಲಿ ಒಬ್ಬನು ಆದಿಯಲ್ಲಿ ಸಂಭವಿಸಿದ್ದನ್ನು ಹೇಳುವದಾಗಿದ್ದರೆ ತನ್ನ ಸಾಕ್ಷಿಗಳನ್ನು ಕರೆದು ತರಲಿ. ಆ ಸಾಕ್ಷಿಗಳು ಸತ್ಯವನ್ನಾಡಲಿ. ಆಗ ಅವರು ಸತ್ಯವಂತರೋ ಇಲ್ಲವೋ ಎಂದು ಗೊತ್ತಾಗುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ. ಎಲ್ಲಾ ಜನರೂ ಸೇರಿಕೊಳ್ಳಲಿ. ಅವರ ದೇವರುಗಳಲ್ಲಿ ಭವಿಷ್ಯವನ್ನು ನುಡಿಯಬಲ್ಲವರು ಯಾರು? ಗತಿಸಿದ ಸಂಗತಿಗಳನ್ನು ಮುಂತಿಳಿಸುವವರು ಯಾರು? ನಾವು ನೀತಿವಂತರೆಂದು ಸ್ಥಾಪಿಸುವುದಕ್ಕೆ ಸಾಕ್ಷಿಗಳನ್ನು ಕರೆತರಲಿ. ಆ ಸಾಕ್ಷಿಗಳು ಇದನ್ನು ಕೇಳಿ, ನಿಜವೆಂದು ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:9
17 ತಿಳಿವುಗಳ ಹೋಲಿಕೆ  

ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.


ಸುತ್ತಮುತ್ತಲಿನ ಜನಾಂಗಗಳೇ, ತ್ವರೆಯಾಗಿ ಕೂಡಿಬನ್ನಿರಿ, ನೀವೆಲ್ಲರೂ ಒಟ್ಟಾಗಿ ಕೂಡಿಬನ್ನಿರಿ. ಯೆಹೋವನೇ, ನಿನ್ನ ಶೂರರನ್ನು ರಣರಂಗಕ್ಕೆ ಇಳಿಸು.


ನನಗೆ ನನ್ನ ಪಾಪಗಳನ್ನು ಜ್ಞಾಪಕಪಡಿಸು, ನಾವಿಬ್ಬರೂ ನಿನ್ನ ಅಪಾರಾಧ ಕುರಿತು ವಾದಿಸುವ, ನಿನ್ನ ಸದ್ಧರ್ಮವು ಗೊತ್ತಾಗುವಂತೆ ನಿನ್ನ ನ್ಯಾಯವನ್ನು ತೋರ್ಪಡಿಸು.


ದ್ವೀಪನಿವಾಸಿಗಳೇ, ನನ್ನ ಕಡೆಗೆ ತಿರುಗಿ ಮೌನದಿಂದಿರಿ. ಜನಾಂಗಗಳು ತಮ್ಮನ್ನು ಬಲಪಡಿಸಿಕೊಳ್ಳಲಿ; ಸಮೀಪಕ್ಕೆ ಬಂದು ಮಾತನಾಡಲಿ. ನ್ಯಾಯಸ್ಥಾನಕ್ಕೆ ಒಟ್ಟಿಗೆ ಹೋಗೋಣ.


ಬಲಿಷ್ಠ ದೇವರಾದ ಯೆಹೋವನು ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ.


ನೀವೆಲ್ಲರು ಕೂಡಿಕೊಂಡು ಕೇಳಿರಿ! ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವನು ಯಾರು? ಯೆಹೋವನ ಪ್ರೀತಿಪಾತ್ರನು, ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು. ಕಸ್ದೀಯರ ಮೇಲೆ ಕೈಮಾಡುವನು.


ಜನಾಂಗಗಳೇ, ಸಮೀಪಕ್ಕೆ ಬಂದು ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂಮಿಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವುದೆಲ್ಲವೂ ಆಲಿಸಲಿ.


ಯಾಕೋಬನ ಮನೆತನವೇ, ಕೇಳು, ಈವರೆಗೂ ನಡೆದ ಸಂಗತಿಗಳನ್ನು ಪುರಾತನಕಾಲದಲ್ಲಿಯೇ ತಿಳಿಸಿದೆನು. ಹೌದು, ನನ್ನ ಬಾಯಿಂದ ಹೊರಟವು, ನಾನು ಅವುಗಳನ್ನು ಪ್ರಕಟಿಸಿದೆನು. ನಾನು ತಟ್ಟನೆ ನಡೆಸಲು ಅವು ನೆರವೇರಿದವು.


ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು