Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೇವತೆಯನ್ನು ರೂಪಿಸುವವರೂ, ವ್ಯರ್ಥವಿಗ್ರಹವನ್ನು ಎರಕ ಹೊಯ್ಯುವವರೂ ಎಂಥವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದೇವತೆಯನ್ನು ರೂಪಿಸುವವರು ಹಾಗೂ ನಿರರ್ಥಕ ಬೊಂಬೆಗಳನ್ನು ಎರಕಹೊಯ್ಯುವವರು ನಿಷ್ಪ್ರಯೋಜಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇವತೆಯನ್ನು ರೂಪಿಸುವವರೂ ವ್ಯರ್ಥವಿಗ್ರಹವನ್ನು ಎರಕ ಹೊಯ್ಯುವವರೂ ಎಂಥವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈ ಸುಳ್ಳುದೇವರುಗಳನ್ನು ಮಾಡಿದವರ್ಯಾರು? ಇಂಥ ಉಪಯೋಗವಿಲ್ಲದ ವಿಗ್ರಹಗಳನ್ನು ಮಾಡಿದವರ್ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದೇವರನ್ನು ರೂಪಿಸಿದವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಎಂಥವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:10
12 ತಿಳಿವುಗಳ ಹೋಲಿಕೆ  

ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಮಾತನಾಡಲಾರವು; ಹೊತ್ತುಕೊಂಡು ಹೋಗಬೇಕು, ನಡೆಯಲಾರವು. ಅವುಗಳಿಗೆ ಹೆದರಬೇಡಿರಿ, ಕೇಡುಮಾಡಲಾರವು; ಒಳ್ಳೆಯದನ್ನು ಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ” ಎಂದು ಹೇಳುತ್ತಾನೆ


ವಿಗ್ರಹ ಕೆತ್ತುವವನ ವಿಗ್ರಹವಾಗಲಿ ಅಥವಾ ಎರಕದಿಂದ ಮಾಡಿದ ಗೊಂಬೆಗಳಿಂದಾಗಲಿ ಲಾಭವೇನು? ಹಾಗೆ ದೇವರುಗಳನ್ನು ರೂಪಿಸುವವರು ಸುಳ್ಳನ್ನು ಬಿತ್ತುವವರು; ಏಕೆಂದರೆ, ಆ ನಿರ್ಜೀವ ವಿಗ್ರಹವನ್ನು ನಿರ್ಮಿಸಿದವನು ತನ್ನ ಕೈಕೆಲಸದ ಮೇಲೆಯೇ ಭರವಸೆ ಇಟ್ಟಿದ್ದಾನೆ.’


ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಹೆಚ್ಚುಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ನೋಡುತ್ತಿದ್ದೀರಿ, ಕೇಳುತ್ತಿದ್ದೀರಿ.


ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು “ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು.


ಹಾಗೆ ಅವರನ್ನು ಹಿಡಿದು ತರಲು ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ, ನೀವು ನನ್ನ ದೇವರನ್ನು ಸೇವಿಸದೆ, ನಾನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸದೆ ಇರುವುದು ಬೇಕೆಂದೇ ಮಾಡಿದ್ದೋ?


ರಾಜನಾದ ನೆಬೂಕದ್ನೆಚ್ಚರನು ಅರುವತ್ತು ಮೊಳ ಎತ್ತರದ, ಆರು ಮೊಳ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬೆಲ್ ಸಂಸ್ಥಾನದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.


ಆಹಾ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ವ್ಯರ್ಥವೇ, ಅವರ ಎರಕದ ಬೊಂಬೆಗಳು ಗಾಳಿ ಮತ್ತು ಶೂನ್ಯವೇ.


ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.


ಅವರ ವಿಗ್ರಹಗಳೋ ಬೆಳ್ಳಿ ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.


ವಿಗ್ರಹವಾದರೋ, ಶಿಲ್ಪಿಯು ಅದನ್ನು ಎರಕಹೊಯ್ಯುವನು, ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ, ಬೆಳ್ಳಿಯ ಸರಪಣಿಗಳನ್ನು ಹಾಕುವನು.


ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.


ತಪ್ಪಿಸಿಕೊಂಡ ಅನ್ಯಜನರೇ, ಕೂಡಿಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ವಿಗ್ರಹಗಳನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು