Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕಮ್ಮಾರನು ತನ್ನ ಸಲಕರಣೆಗಳನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ, ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು. ಅವನು ಹಸಿದು ಬಳಲುವನು, ನೀರಿಲ್ಲದೆ ದಣಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕಮ್ಮಾರನು ಮುಟ್ಟನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸ ಮಾಡುತ್ತಾನೆ; ಬಲವಾದ ತೋಳಿನಿಂದ ಚಮಟಿಕೆ ಹಿಡಿದು ಬಡಿದು ವಿಗ್ರಹವನ್ನು ರೂಪಿಸುತ್ತಾನೆ; ಹಸಿದು ಬಳಲುತ್ತಾನೆ, ಬಾಯಾರಿ ಸೊರಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕಮ್ಮಾರನು ಮುಟ್ಟನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು; ಅವನೂ ಹಸಿದು ಬಳಲುವನು, ನೀರಿಲ್ಲದೆ ಕಂಗೆಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಒಬ್ಬನು ಕುಲಿಮೆಯ ಬೆಂಕಿಯ ಮೇಲೆ ಕಬ್ಬಿಣವನ್ನು ಕಾಯಿಸುತ್ತಾನೆ. ಅವನು ತನ್ನ ಸುತ್ತಿಗೆಯಿಂದ ಆ ಲೋಹವನ್ನು ವಿಗ್ರಹವನ್ನಾಗಿ ಮಾಡುತ್ತಾನೆ. ಅವನು ಅದನ್ನು ತನ್ನ ತೋಳ್ಬಲದಿಂದ ಮಾಡುತ್ತಾನೆ. ಆದರೆ ಅವನು ಹಸಿದಾಗ ಅವನ ಶಕ್ತಿಯು ಕಡಿಮೆಯಾಗುತ್ತದೆ. ಆ ಮನುಷ್ಯನು ನೀರನ್ನು ಕುಡಿಯದಿದ್ದರೆ ಅವನು ಬಲಹೀನನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕಮ್ಮಾರನು ಸಲಕರಣೆಯನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸ ಮಾಡುತ್ತಾನೆ; ಅವನು ಸುತ್ತಿಗೆ ಹಿಡಿದು ತನ್ನ ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುತ್ತಾನೆ; ಅವನು ಹಸಿದು ಬಲಹೀನನಾಗಿದ್ದರೂ, ನೀರು ಕುಡಿಯದೇ ದಣಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:12
11 ತಿಳಿವುಗಳ ಹೋಲಿಕೆ  

ವಿಗ್ರಹವಾದರೋ, ಶಿಲ್ಪಿಯು ಅದನ್ನು ಎರಕಹೊಯ್ಯುವನು, ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ, ಬೆಳ್ಳಿಯ ಸರಪಣಿಗಳನ್ನು ಹಾಕುವನು.


ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು, ಈ ರೀತಿಯಾಗಿ ಜನರು ಪಟ್ಟ ಪರಿಶ್ರಮವು ವ್ಯರ್ಥವಾಗುವುದು ಎಂದು ಯೆಹೋವನು ನುಡಿದ್ದರಿಂದಲೇ ಅಲ್ಲವೇ; ಇದೆಲ್ಲ ಸೇನಾಧೀಶ್ವರನ ಚಿತ್ತವಷ್ಟೇ.


ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು.


ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯ್ಯಿಸಿದನು. ಆಗ ಅವರು “ಇಸ್ರಾಯೇಲರೇ ನೋಡಿರಿ, ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು” ಎಂದು ಹೇಳಿದರು.


ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.


(ಇಂಥದನ್ನು ದೇವರಿಗೆ) ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು, ಹುಳಿತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ಮಾಡಿಸಲು ಶಿಲ್ಪಿಯನ್ನು ವಿಚಾರಿಸಿಕೊಳ್ಳುವನು.


ವಿಗ್ರಹ ಕೆತ್ತುವವನ ವಿಗ್ರಹವಾಗಲಿ ಅಥವಾ ಎರಕದಿಂದ ಮಾಡಿದ ಗೊಂಬೆಗಳಿಂದಾಗಲಿ ಲಾಭವೇನು? ಹಾಗೆ ದೇವರುಗಳನ್ನು ರೂಪಿಸುವವರು ಸುಳ್ಳನ್ನು ಬಿತ್ತುವವರು; ಏಕೆಂದರೆ, ಆ ನಿರ್ಜೀವ ವಿಗ್ರಹವನ್ನು ನಿರ್ಮಿಸಿದವನು ತನ್ನ ಕೈಕೆಲಸದ ಮೇಲೆಯೇ ಭರವಸೆ ಇಟ್ಟಿದ್ದಾನೆ.’


ಅನಂತರ ಯೆಹೋವನು ನನಗೆ ನಾಲ್ಕು ಮಂದಿ ಕಮ್ಮಾರರನ್ನು ತೋರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು