Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಬಡಗಿಯು ಮರಕ್ಕೆ ನೂಲು ಹಾಕಿ ಮೊಳೆಯಿಂದ ಗೆರೆಯೆಳೆದು ಬಾಚಿಗಳಿಂದ ಕೆತ್ತಿ, ಕೈವಾರದಿಂದ ಗುರುತಿಸಿ, ಅದು ಮನೆಯಲ್ಲಿ ವಾಸಿಸತಕ್ಕದ್ದಾಗಲೆಂದು ಮನುಷ್ಯನ ಆಕಾರಕ್ಕೆ ತಂದು ಮನುಷ್ಯನ ಅಂದದಂತೆ ರೂಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಡಗಿಯು ಮರಕ್ಕೆ ನೂಲು ಹಿಡಿದು, ಮೊಳೆಯಿಂದ ಗೆರೆ ಎಳೆಯುತ್ತಾನೆ; ಕೈವಾರದಿಂದ ಗುರುತಿಸುತ್ತಾನೆ, ಉಳಿ ಬಾಚಿಗಳಿಂದ ಕೆತ್ತುತ್ತಾನೆ; ಸುಂದರವಾದ ನರನಂತೆ ರೂಪಿಸಿ ಮಂದಿರದಲ್ಲಿ ಇಡಲು ಯೋಗ್ಯವಾಗುವಂತೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಬಡಗಿಯು [ಮರಕ್ಕೆ] ನೂಲು ಹಾಕಿ ಮೊಳೆಯಿಂದ ಗೆರೆಯೆಳೆದು ಉಳಿಬಾಚಿಗಳಿಂದ ಕೆತ್ತಿ ಕೈವಾರದಿಂದ ಗುರುತಿಸಿ ಅದು ಮನೆಯಲ್ಲಿ ವಾಸಿಸತಕ್ಕದ್ದಾಗಲೆಂದು ಮನುಷ್ಯನ ಆಕಾರಕ್ಕೆ ತಂದು ನರನ ಅಂದದಂತೆ ರೂಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇನ್ನೊಬ್ಬ ಕುಶಲಕರ್ಮಿಯು ತನ್ನ ನೂಲಿನಿಂದಲೂ ಅಡಿಕೋಲುಗಳಿಂದಲೂ ಮರದ ಮೇಲೆ ಗುರುತು ಮಾಡುವನು. ತಾನು ಎಲ್ಲಿ ಮರವನ್ನು ತುಂಡುಮಾಡಬೇಕೆಂದು ಇದರಿಂದ ಗೊತ್ತುಪಡಿಸಿಕೊಳ್ಳುತ್ತಾನೆ. ಅವನು ತನ್ನ ಉಳಿಗಳಿಂದ ಒಂದು ವಿಗ್ರಹವನ್ನು ಮನುಷ್ಯಾಕಾರದಲ್ಲಿ ಕೆತ್ತುತ್ತಾನೆ. ಈ ವಿಗ್ರಹವು ಬೇರೆ ಏನೂ ಮಾಡದೆ ಮನೆಯೊಳಗೆ ಇಟ್ಟ ಸ್ಥಳದಲ್ಲಿಯೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬಡಗಿಯು ಮರಕ್ಕೆ ನೂಲನ್ನು ಹಿಡಿದು, ಮೊಳೆಯಿಂದ ಗೆರೆ ಎಳೆಯುತ್ತಾನೆ. ಉಳಿಬಾಚಿಗಳಿಂದ ಕೆತ್ತುತ್ತಾನೆ. ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾರಕ್ಕೆ ತಂದು, ಮಂದಿರದಲ್ಲಿ ಇಡಲು ಮನುಷ್ಯನ ಅಂದದಂತೆ ರೂಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:13
18 ತಿಳಿವುಗಳ ಹೋಲಿಕೆ  

ಲಯವಿಲ್ಲದ ದೇವರ ಮಹಿಮೆಯನ್ನು ಅವರು ನಾಶವಾಗುವ ಮನುಷ್ಯ, ಪಶು, ಪಕ್ಷಿ, ಸರಿಸೃಪಗಳು ಇತ್ಯಾದಿಗಳ ರೂಪಗಳೊಂದಿಗೆ ಬದಲಿಸಿಕೊಂಡರು.


“ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು.


ಆಗ ಆತನು ನನಗೆ, “ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟ ತಮ್ಮ ತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವನು ನಮ್ಮನ್ನು ನೋಡುವುದಿಲ್ಲ, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ಮಾತನಾಡಿಕೊಳ್ಳುತ್ತಾರಷ್ಟೆ” ಎಂಬುದಾಗಿ ಹೇಳಿದನು.


ಹಾಗೆಯೇ ಶಿಲ್ಪಿಯು ಎರಕದವನನ್ನೂ, ಸುತ್ತಿಗೆಯಿಂದ ಸಮಮಾಡುವವನು ಅಡಿಗಲ್ಲಿನ ಮೇಲೆ ಕುಟ್ಟುವವನನ್ನೂ ಪ್ರೋತ್ಸಾಹಗೊಳಿಸಿದರು. “ಬೆಸಿಗೆ ಚೆನ್ನಾಗಿದೆ” ಎಂದು ಹೇಳಿ ವಿಗ್ರಹವನ್ನು ಕದಲದಂತೆ ಮೊಳೆಗಳಿಂದ ಜಡಿದರು.


ಅವನು, “ನೀವು ಯಾಜಕನನ್ನೂ ನಾವು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವುದು ಹೇಗೆ?” ಅಂದನು.


‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.


ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.


ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ “ನಿಮ್ಮ ಮಧ್ಯಲ್ಲಿರುವ ಅನ್ಯ ದೇವರುಗಳನ್ನು ತೆಗೆದುಹಾಕಿ ನಿಮ್ಮನ್ನು ಶುದ್ಧಪಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿರಿ,


ನಿನ್ನ ದೇವರುಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವರು ಸಾಯಲಿ. ನಮ್ಮ ಬಂಧುಗಳ ಮುಂದೆಯೇ ನನ್ನ ಆಸ್ತಿಯನ್ನು ಪರೀಕ್ಷಿಸಬಹುದು. ಅದರಲ್ಲಿ ನಿನ್ನದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೋ” ಎಂದು ಹೇಳಿದನು. ರಾಹೇಲಳು ಆ ದೇವರುಗಳನ್ನು ಕದ್ದದ್ದು ಯಾಕೋಬನಿಗೆ ತಿಳಿದಿರಲಿಲ್ಲ.


ಆದರೆ ತಂದೆಯ ಮನೆಗೆ ಹೋಗುವುದಕ್ಕೆ ನಿನಗೆ ಬಹಳ ಆಶೆಯಿರುವುದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದು ಕೇಳಿದನು.


ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.


ಅವನು ತನ್ನ ಕೆಲಸಕ್ಕಾಗಿ ದೇವದಾರುಗಳನ್ನು ಕಡಿಯುವನು, ತುರಾಯಿ, ಅಲ್ಲೋನ್ ಮರಗಳನ್ನು ತೆಗೆದುಕೊಳ್ಳುವನು. ವನವೃಕ್ಷಗಳನ್ನು ತನಗೋಸ್ಕರ ಬೆಳೆಯುವನು. ಅವನು ಪೀತದಾರವನ್ನು ನೆಡಲು, ಮಳೆಯು ಅದನ್ನು ಬೆಳೆಸುವುದು.


ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ, ಅಸಹ್ಯ ಮೃಗಗಳೂ ಮತ್ತು ಇಸ್ರಾಯೇಲ್ ವಂಶದವರು ಪೂಜಿಸುವ ಸಕಲ ಮೂರ್ತಿಗಳೂ ಆ ಗೋಡೆಯ ಸುತ್ತಲೂ ಚಿತ್ರಿಸಲ್ಪಟ್ಟಿದ್ದವು.


ಇಸ್ರಾಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಮತ್ತು ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು