Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಯಾರ ಕೈಹಿಡಿದು, ಯಾರ ಎದುರಿಗೆ ಜನಾಂಗಗಳನ್ನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಯಾರ ಮುಂದೆ ಹೆಬ್ಬಾಗಿಲುಗಳನ್ನು ತೆರೆದು, ಮುಚ್ಚಲ್ಲಿಲ್ಲವೋ, ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಂತೆಂದರು ಸರ್ವೇಶ್ವರ ತಾನು ಅಭಿಷೇಕಿಸಿದ ಕೋರೆಷನಿಗೆ “ರಾಷ್ಟ್ರಗಳನ್ನು ನೀ ಸದೆಬಡಿಯುವಂತೆ ರಾಜಮಹಾರಾಜರನು ನಿಶ್ಯಸ್ತ್ರರನ್ನಾಗಿ ಮಾಡುವಂತೆ ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯುವಂತೆ ನಾ ನಿನ್ನ ಕೈಹಿಡಿದು ನಡೆಸುವೆನು ಮುಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಯಾವನ ಕೈಹಿಡಿದು ಯಾವನೆದುರಿಗೆ ಜನಾಂಗಗಳನ್ನು ತುಳಿದು ರಾಜರ ನಡುಕಟ್ಟನ್ನು ಬಿಚ್ಚಿ ಯಾವನ ಮುಂದೆ ಬಾಗಿಲುಹೆಬ್ಬಾಗಿಲುಗಳನ್ನು ತೆರೆದು ಮುಚ್ಚಲೀಸನೋ ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತಾನು ಆರಿಸಿರುವ ಅರಸನಾದ ಸೈರಸನಿಗೆ ಯೆಹೋವನು ಹೇಳುವುದೇನೆಂದರೆ: “ನಾನು ಸೈರಸನ ಬಲಗೈಯನ್ನು ಹಿಡಿಯುವೆನು. ಅರಸರುಗಳಿಂದ ಅವರ ಅಧಿಕಾರವನ್ನು ತೆಗೆದುಬಿಡುವಂತೆ ಅವನಿಗೆ ಸಹಾಯ ಮಾಡುವೆನು. ನಗರದ್ವಾರಗಳು ಅವನ ಮುನ್ನುಗ್ಗುವಿಕೆಯನ್ನು ನಿಲ್ಲಿಸದು. ನಗರದ್ವಾರವನ್ನು ತೆರೆದು ಸೈರಸನು ಒಳಗೆ ಪ್ರವೇಶಿಸುವಂತೆ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಯೆಹೋವ ದೇವರು ತಾವೇ ಅಭಿಷೇಕಿಸಿದ ಕೋರೆಷನಿಗೆ ಹೇಳುವುದೇನೆಂದರೆ: ರಾಷ್ಟ್ರಗಳನ್ನು ನೀನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯಲು ನಾನು ನಿನ್ನ ಬಲಗೈಯನ್ನು ಹಿಡಿದು ನಡೆಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:1
31 ತಿಳಿವುಗಳ ಹೋಲಿಕೆ  

ಕೋರೆಷನ ವಿಷಯವಾಗಿ, ‘ಅವನು ನನ್ನ ಮಂದೆಯನ್ನು ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ’ ಎಂದು ಹೇಳಿ, ‘ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು’” ಎಂಬುದಾಗಿ ಮಾತನಾಡುವವನು ನಾನೇ.


“ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪಾನುಸಾರವಾಗಿ ನಿನ್ನನ್ನು ಕೈಹಿಡಿದು, ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.


ಆದರೂ ಸದಾ ನಿನ್ನ ಸನ್ನಿಧಿಯಲ್ಲಿಯೇ ಇದ್ದೇನೆ. ನೀನು ನನ್ನ ಬಲಗೈಯನ್ನು ಹಿಡಿದು,


ಏಕೆಂದರೆ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನೆ. “ಭಯಪಡಬೇಡ, ನಿನಗೆ ಸಹಾಯಮಾಡುತ್ತೇನೆ.


ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ. ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ; ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ!


ಯೆಹೋವನು ಇಂತೆನ್ನುತ್ತಾನೆ, “ಖಡ್ಗವು ಕಸ್ದೀಯರ ಮೇಲೆ ಬೀಳಲಿ! ಬಾಬೆಲಿನ ಸಾಮಾನ್ಯ ಜನರು, ಪ್ರಧಾನರು, ಪಂಡಿತರು, ಇವರನ್ನೆಲ್ಲಾ ಹತಿಸಲಿ!


ನಾನೇ ಯೆಹೋವನು, ಇನ್ನು ಯಾರೂ ಇಲ್ಲ, ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.


ಪರ್ಷಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪರ್ಷಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದನು.


ನದಿ ದ್ವಾರಗಳು ತೆರೆಯಲ್ಪಟ್ಟಿವೆ; ಅರಮನೆಯ ಗೋಡೆ ಕುಸಿದುಬಿದ್ದಿದೆ.


ಆಹಾ, ಇನ್ನೊಂದು ಮೃಗ ಎರಡನೆಯದು; ಅದು ಕರಡಿಯ ಹಾಗಿತ್ತು, ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು; ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು ಎಂದು ಅದಕ್ಕೆ ಹೇಳೋಣವಾಯಿತು.


ನಾನು ಆರಿಸಿಕೊಂಡ ಪರಿಶುದ್ಧರಿಗೆ ಅಪ್ಪಣೆ ಕೊಟ್ಟಿದ್ದೇನೆ. ಹೌದು, ನನ್ನ ಜಯದಲ್ಲಿ ಹೆಮ್ಮೆಪಡುವವರು, ನನ್ನ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆದಿದ್ದೇನೆ.


ಪ್ರಭುಗಳಿಗೆ ಅವಮಾನವನ್ನು ಉಂಟುಮಾಡಿ ಬಲಿಷ್ಠರ ನಡುಕಟ್ಟನ್ನು ಸಡಿಲಿಸುವನು.


ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲವಾಯಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ.


ಮೂಡಣದಿಂದ ಒಬ್ಬನನ್ನು ಎಬ್ಬಿಸಿ, ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು, ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು, ಅವನನ್ನು ರಾಜರ ಮೇಲೆ ಆಳುವಂತೆ ಮಾಡಿ, ಅವರ ಕತ್ತಿಯನ್ನು ಧೂಳನ್ನಾಗಿಯೂ, ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಹುಲ್ಲನ್ನಾಗಿಯೂ ಅವರನ್ನು ಮಾಡಿದನು.


ಆಗ ಯೆಹೋವನು ಅವನಿಗೆ, “ನೀನು ಬಂದ ದಾರಿಯಿಂದ ಹಿಂದಿರುಗಿ ದಮಸ್ಕದ ಅರಣ್ಯಕ್ಕೆ ಹೋಗು, ಅಲ್ಲಿಂದ ಪಟ್ಟಣದೊಳಗೆ ಪ್ರವೇಶಿಸಿ ಹಜಾಯೇಲನನ್ನು ಅರಾಮ್ಯರ ಅರಸನನ್ನಾಗಿ ಅಭಿಷೇಕಿಸು.


ನಾನು ಕಣ್ಣೆತ್ತಿ ನೋಡಲು ಇಗೋ, ಎರಡು ಕೊಂಬಿನ ಒಂದು ಟಗರು ಕಾಲುವೆಯ ಹತ್ತಿರ ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ದೊಡ್ಡದಾಗಿತ್ತು. ಆ ದೊಡ್ಡದು ಮೊಳೆತದ್ದು ಚಿಕ್ಕ ಕೊಂಬು ಮೊಳೆತ ಮೇಲೆ.


ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬಾಬೆಲಿನ ಮೇಲೆ ಬರುತ್ತಿದೆ, ಅದು ಬಾಬೆಲ್ ದೇಶವನ್ನು ಹಾಳುಮಾಡುವುದು, ಅಲ್ಲಿ ಯಾರೂ ವಾಸಿಸರು, ಪಶುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.


ನಾನು ಉತ್ತರ ದಿಕ್ಕಿನಿಂದ ಒಬ್ಬನನ್ನು ಎಬ್ಬಿಸಿ ಕರೆದು ತಂದಿದ್ದೇನೆ, ನನ್ನ ನಾಮವನ್ನು ಪ್ರಚುರಪಡಿಸತಕ್ಕವನು ಮೂಡಲಿನಿಂದ ಬಂದಿದ್ದಾನೆ. ಅವನು ಉಪರಾಜರನ್ನು ಮಣ್ಣೇ ಎಂದು ಭಾವಿಸಿ ಅವರ ಮೇಲೆ ಬಿದ್ದು ಕುಂಬಾರನು ಜೇಡಿಮಣ್ಣನ್ನು ತುಳಿಯುವ ಹಾಗೆ ತುಳಿಯುವನು.


ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, “ಪರ್ಷಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ. ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.


ಶತ್ರುಗಳು ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ, ಬೋಳು ಬೆಟ್ಟದ ಮೇಲೆ ಧ್ವಜವೆತ್ತಿ ಕೂಗಿರಿ, ಅವರನ್ನು ಕೈಬೀಸಿ ಕರೆಯಿರಿ.


ನಾನೇ, ನಾನೇ ಬಾಯಿಬಿಟ್ಟು ಅವನನ್ನು ಕರೆದು ಬರಮಾಡಿದ್ದೇನೆ. ಅವನ ಮಾರ್ಗವು ಸಾರ್ಥಕವಾಗುವುದು.


‘ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಬಾಬೆಲಿನ ಅರಸನೂ, ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಕರೆಯಿಸಿ, ನಾನು ಮರೆಮಾಡಿಸಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಹಾಕಿಸುವೆನು; ಅವನು ಈ ಕಲ್ಲುಗಳ ಮೇಲೆಯೇ ತನ್ನ ರತ್ನಗಂಬಳಿಯನ್ನು ಹಾಸುವನು.


ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಬಲಹೀನರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ, ಅವರ ಅಗುಳಿಗಳು ಮುರಿದುಹೋಗಿವೆ.


ಸೇನಾಧೀಶ್ವರನಾದ ಯೆಹೋವನು, “ಬಾಬೆಲಿನ ಗಾತ್ರವಾದ ಪೌಳಿಗೋಡೆಯು ಸಂಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು” ಎಂದು ನುಡಿಯುತ್ತಾನೆ.


ಅವನು ಸೈನ್ಯ ಸಮೇತನಾಗಿ ನನಗೋಸ್ಕರ ಸೇವೆ ಮಾಡಿದ್ದರಿಂದ ಅವನು ಪಟ್ಟ ಶ್ರಮಕ್ಕೆ ಪ್ರತಿಫಲವಾಗಿ ನಾನು ಐಗುಪ್ತ ದೇಶವನ್ನು ಅವನಿಗೆ ಕೊಟ್ಟಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.


ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಹಾರಾಡುತ್ತಿತ್ತು. ಯಾವ ಜಂತುವೂ ಅದರೆದುರಿಗೆ ನಿಲ್ಲಲಾರದೆ ಹೋಯಿತು. ಅದರಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ. ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು.


ಆಹಾ! ನಿನ್ನಲ್ಲಿನ ಜನರು ಹೆಣ್ಣಿಗರು; ನಿನ್ನ ದೇಶದ ಬಾಗಿಲುಗಳು ನಿನ್ನ ಶತ್ರುಗಳಿಗೆ ತೆರೆದು ಹಾಕಿವೆ; ಬೆಂಕಿಯು ನಿನ್ನ ಅಗುಳಿಗಳನ್ನು ನುಂಗಿಬಿಟ್ಟಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು