Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೂ ಇಸ್ರಾಯೇಲರ ಸದಮಲಸ್ವಾಮಿಯೂ, ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ, ‘ಭವಿಷ್ಯತ್ತಿನ ವಿಷಯವಾಗಿ ನನ್ನನ್ನು ವಿಚಾರಿಸಿರಿ. ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ ಇಸ್ರಯೇಲಿನ ಪರಮಪಾವನ ಸ್ವಾಮಿ, ಅದರ ಸೃಷ್ಟಿಕರ್ತ. ಆ ಸರ್ವೇಶ್ವರನ ನುಡಿಯಿದು : “ನನ್ನ ಮಕ್ಕಳ ಬಗ್ಗೆ ನೀ ಕೇಳುವುದೆಂತು? ನನ್ನ ಕೈಯ ಕೃತಿಗಳ ಬಗ್ಗೆ ನೀ ವಿಧಿಸುವುದೆಂತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 [ಆದರೂ] ಇಸ್ರಾಯೇಲ್ಯರ ಸದಮಲಸ್ವಾವಿುಯೂ ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ - ಭವಿಷ್ಯತ್ತುಗಳ ವಿಷಯವಾಗಿ ನನ್ನನ್ನು ವಿಚಾರಿಸಿರಿ, ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರಾದ ಯೆಹೋವನು ಇಸ್ರೇಲರ ಪರಿಶುದ್ಧನಾಗಿದ್ದಾನೆ. ಆತನು ಇಸ್ರೇಲನ್ನು ಸೃಷ್ಟಿಸಿದನು. ಯೆಹೋವನು ಹೇಳುವುದೇನೆಂದರೆ, “ನಾನು ಕೈಯಾರೆ ಮಾಡಿದ ಮಕ್ಕಳ ಬಗ್ಗೆ ನೀನು ಪ್ರಶ್ನಿಸುವಿಯಾ? ನಾನು ಏನು ಮಾಡಬೇಕೆಂದು ನೀನು ನನಗೆ ಆಜ್ಞಾಪಿಸುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಇಸ್ರಾಯೇಲಿನ ಪರಿಶುದ್ಧನೂ, ಅದನ್ನು ರೂಪಿಸಿದವನೂ ಆಗಿರುವ ಯೆಹೋವ ದೇವರು, ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ, ನನ್ನ ಕೈಕೆಲಸದ ವಿಷಯವಾಗಿಯೂ ನೀವು ನನಗೆ ಆಜ್ಞಾಪಿಸುವುದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:11
34 ತಿಳಿವುಗಳ ಹೋಲಿಕೆ  

ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು.


ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.


‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡೆಸುವ ಕೆಲಸವನ್ನು ನೋಡಿ, ನನ್ನ ನಾಮವೇ ಆರಾಧನೆಗೆ ಅರ್ಹವೆಂದು ಪ್ರತಿಷ್ಠಿಸುವರು; ಹೌದು, ಯಾಕೋಬ್ಯರ ಸದಮಲಸ್ವಾಮಿಯನ್ನು ಪ್ರತಿಷ್ಠೆಪಡಿಸಿ ಇಸ್ರಾಯೇಲರ ದೇವರಿಗೆ ನಡುಗುವರು.


ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.


ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ಸೃಷ್ಟಿಸಿಕೊಂಡಿದ್ದೇನೆ.


ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಲ್ಲಿ ಒಂದು ವಿಜ್ಞಾಪನೆ ಮಾಡಿಕೊಂಡನು. “ಸೂರ್ಯನೇ, ನೀನು ಗಿಬ್ಯೋನಿನಲ್ಲೇ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲೇ ನಿಲ್ಲು” ಎಂದು ಇಸ್ರಾಯೇಲ್ಯರ ಸಮಕ್ಷಮದಲ್ಲಿ ಆಜ್ಞಾಪಿಸಿದನು.


ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು. ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯು ಕಂಡು ಅಲ್ಲಿ ಅವನೊಡನೆ ಮಾತನಾಡಿದನು.


ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.


ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.


ನಾನು ಯೆಹೋವನು, ನಿಮ್ಮ ಸದಮಲಸ್ವಾಮಿಯು, ಇಸ್ರಾಯೇಲನ್ನು ಸೃಷ್ಟಿಸಿದವನು, ನಿಮ್ಮ ಅರಸನೂ ಆಗಿದ್ದೇನೆ.


ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.


ಏಕೆಂದರೆ ಯೆಹೋವನೆಂಬ ನಾನು ನಿನ್ನ ದೇವರು, ಇಸ್ರಾಯೇಲರ ಸದಮಲಸ್ವಾಮಿಯಾದ ನಾನು ನಿನ್ನ ರಕ್ಷಕನು. ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ. ನಿನ್ನ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.


ಆ ಪುರುಷನು, “ನನ್ನನ್ನು ಬಿಡು, ಬೆಳಗಾಗುತ್ತಿದೆ” ಎನ್ನಲು, ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡುವುದಿಲ್ಲ” ಎಂದನು.


ಇದಲ್ಲದೆ, “ನಾನು ನಿಮ್ಮನ್ನು ಸ್ವೀಕರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ, ಕುಮಾರಿಯರು ಆಗಿರುವಿರೆಂದು” ಸರ್ವಶಕ್ತನಾದ ಕರ್ತನು ಹೇಳುತ್ತಾನೆ.


“ದಾನಿಯೇಲನು ಆ ಸಮಾಚಾರವನ್ನು ತಿಳಿಸಿ, ನಾವು ಬಾಬೆಲಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರಿಸಲು ಆತನನ್ನು ಬೇಡಿಕೊಳ್ಳೋಣ” ಎಂದನು.


“ನಾನು ನನ್ನ ಪವಿತ್ರ ನಾಮವನ್ನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ವ್ಯಕ್ತಗೊಳಿಸುವೆನು. ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗದ ಹಾಗೆ ಮಾಡುತ್ತೇನೆ. ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾಮಿ ಎಂದು ಅನ್ಯ ಜನಾಂಗಗಳಿಗೆ ಗೊತ್ತಾಗುವುದು.”


“ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ‘ತಂದೆ’ ಎನ್ನುವಿ ಅಂದುಕೊಂಡೆನು.


“ನನ್ನ ಪ್ರಜೆಯಾದ ಐಗುಪ್ತಕ್ಕೂ, ನನ್ನ ಕೈಯಿಂದ ಸೃಷ್ಟಿಸಲ್ಪಟ್ಟ ಅಶ್ಶೂರಕ್ಕೂ, ನನ್ನ ಸ್ವತ್ತಾದ ಇಸ್ರಾಯೇಲಿಗೂ ಶುಭವಾಗಲಿ” ಎಂದು ಸೇನಾಧೀಶ್ವರನಾದ ಯೆಹೋವನು ಅವುಗಳನ್ನು ಆಶೀರ್ವದಿಸುವನು.


ಯೆಹೋವನು, “ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳುತ್ತಾನೆ.


ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಯಜ್ಞವನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯ ಪ್ರಭುಗಳು ಒಟ್ಟಾಗಿ ಸೇರಿಬಂದರು.


“ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?


ನಿನ್ನನ್ನು ನಿರ್ಮಾಣಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ!


‘ನೀನು ಹುಟ್ಟಿಸುವುದೇನು’ ಎಂದು ತಂದೆಯನ್ನು ಕೇಳುವವನ ಪಾಡು ಪಾಡೇ! ‘ನೀನು ಹೆರುವುದೇನು’ ಎಂದು ಸ್ತ್ರೀಯನ್ನು ಕೇಳುವವನ ಗತಿ ಗತಿಯೇ!


“ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.


ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.


ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು