Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನ ಈ ಮಾತನ್ನು ಕೇಳಿರಿ, “ಐಗುಪ್ತದ ಆದಾಯವೂ, ಕೂಷಿನ ವ್ಯಾಪಾರವೂ, ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು, ‘ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕೇಳಿರಿ ಸರ್ವೇಶ್ವರನ ಈ ಮಾತನ್ನು : “ನಿಮ್ಮದಾಗುವುದು ಈಜಿಪ್ಟಿನ ಸಿರಿಯು, ಸುಡಾನಿನ ಸಂಪದವು. ನಿಮ್ಮನ್ನು ಸೇರಿ ನಿಮಗಧೀನರಾಗುವರು ಎತ್ತರದ ಸೆಬಾಯರು. ಬೇಡಿತೊಟ್ಟು ಅಡ್ಡಬೀಳುವರು ನಿಮ್ಮ ಮುಂದೆ ಅರಿಕೆಮಾಡಿಕೊಳ್ಳುವರು ಹೀಗೆಂದೆ : ‘ನಿಶ್ಚಯವಾಗಿ ನಿಮ್ಮಲ್ಲಿಹರು ದೇವರು ಅವರಲ್ಲದೆ ದೇವರಿಲ್ಲ ಬೇರೆಯಾರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನ ಈ ಮಾತನ್ನು ಕೇಳಿರಿ - ಐಗುಪ್ತದ ಆದಾಯವೂ ಕೂಷಿನ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು - ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರು ಹೇಳುವುದೇನೆಂದರೆ: “ಈಜಿಪ್ಟಿನ ಆದಾಯವೂ, ಇಥಿಯೋಪಿಯದ ವ್ಯಾಪಾರವೂ, ಎತ್ತರದ ಮನುಷ್ಯರಾದ ಶೆಬದವರೂ ನಿಮ್ಮಲ್ಲಿಗೆ ಸೇರಿ, ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು, ನಿಮ್ಮ ಮುಂದೆ ಅಡ್ಡಬಿದ್ದು, ‘ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊಬ್ಬನಿಲ್ಲ; ಬೇರೆ ದೇವರು ಇಲ್ಲವೇ ಇಲ್ಲ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:14
41 ತಿಳಿವುಗಳ ಹೋಲಿಕೆ  

ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು. ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳನ್ನು ನೆಕ್ಕುವರು. ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡುವುದಿಲ್ಲ” ಎಂದು ನಿನಗೆ ಗೊತ್ತಾಗುವುದು.


ಅವನ ಹೃದಯದ ರಹಸ್ಯಗಳು ಬಯಲಾಗುವವು; ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬುದನ್ನು ಘೋಷಿಸುವನು.


ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.


ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.


ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು, ಯೆಹೂದ್ಯರಿಗೆ ಮಾರುವೆನು. ಅವರು ಆ ಮಕ್ಕಳನ್ನು ದೂರದ ಜನಾಂಗವಾದ, ಶೆಬದವರಿಗೆ ಮಾರಿಬಿಡುವರು. ಯೆಹೋವನೇ ಇದನ್ನು ನುಡಿದಿದ್ದಾನೆ.


“ಅಲ್ಲಿ ವಿನೋದ ಪ್ರಿಯರ ದೊಡ್ಡ ಗುಂಪಿನ ಶಬ್ದವು ಇತ್ತು. ಮರುಭೂಮಿಯಿಂದ ಕುಡುಕರನ್ನೂ ಕರೆಯಿಸಿಕೊಂಡು ಅವರು ನಾಡಿನ ಜನರೊಂದಿಗೆ ಸೇರಿ, ನಿನ್ನ ಕೈಗೆ ಕಡಗವನ್ನು ತೊಡಿಸಿ, ತಲೆಗೆ ಸುಂದರ ಕಿರೀಟವನ್ನಿಟ್ಟರು.


ಏಕೆಂದರೆ ಯೆಹೋವನೆಂಬ ನಾನು ನಿನ್ನ ದೇವರು, ಇಸ್ರಾಯೇಲರ ಸದಮಲಸ್ವಾಮಿಯಾದ ನಾನು ನಿನ್ನ ರಕ್ಷಕನು. ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ. ನಿನ್ನ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.


ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವುದು. ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.


ಆ ಕಾಲದಲ್ಲಿ ಎತ್ತರವಾದವರೂ, ನುಣುಪಾದ ಚರ್ಮವುಳ್ಳವರೂ, ಸರ್ವದಾ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮ ಮಹತ್ವದ ಚೀಯೋನ್ ಪರ್ವತಕ್ಕೆ, ಆತನಿಗೋಸ್ಕರ ಕಾಣಿಕೆಯನ್ನು ತರುವರು.


ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು. ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು.


ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು; ಪ್ರಭುಗಳಿಗೆ ಕಬ್ಬಿಣದ ಬೇಡಿಗಳನ್ನು ಹಾಕುವರು.


ಆಗ ನಿನ್ನ ಪರಿವಾರದವರೆಲ್ಲರೂ, ನನ್ನ ಬಳಿಗೆ ಬಂದು ಅಡ್ಡಬಿದ್ದು, ‘ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟು ಹೋಗಬೇಕು’ ಎಂದು ಬೇಡುವರು. ಆ ಮೇಲೆ ನಾನು ಹೊರಟುಹೋಗುವೆನು” ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕೋಪಾವೇಶವುಳ್ಳವನಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.


ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ


ಆಹಾ, ಅಸ್ಸೀರಿಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವದಾರು ಆಗಿದೆ; ಅದರ ನೆರಳು ದಟ್ಟವಾಗಿದೆ, ಅದರ ಎತ್ತರವು ಬಹಳ, ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.


ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವುದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವುದು. ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.


ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು. ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು.


ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”


ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ, ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ.


ಶೆಬದವರು ಅವುಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು. ಇದಲ್ಲದೆ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು. ಈ ಸುದ್ದಿಯನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದು ಹೇಳಿದನು.


ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನ ಉಂಟಾಯಿತು; ಅವರು ಸಂತೋಷದಿಂದಲೂ, ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.


ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು ಅವನು ರೆಫಾಯನಿಗೆ ಹುಟ್ಟಿದವನಾಗಿದ್ದನು.


ಅದಲ್ಲದೆ ಇವರು ತಾವು ಸಂಚರಿಸಿ ನೋಡಿದ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿದ ದೇಶವು ತನ್ನಲ್ಲಿ ವಾಸಿಸುವವರನ್ನು ನುಂಗಿಬಿಡುತ್ತದೆ. ಅದಲ್ಲದೆ ನಾವು ಅದರಲ್ಲಿ ನೋಡಿದ ಜನರೆಲ್ಲರೂ ಬಹಳ ಎತ್ತರವಾದವರು.


ಜನಗಳು ನಿನ್ನನ್ನು ಆರಾಧಿಸಲಿ, ಜನಾಂಗಗಳು ನಿನಗೆ ಅಧೀನವಾಗಲಿ. ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ, ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ” ಎಂದನು.


ಮಲಗಿಕೊಂಡಾಗ ನಿನ್ನನ್ನು ಯಾರೂ ಹೆದರಿಸುವುದಿಲ್ಲ. ಅನೇಕರು ನಿನ್ನ ಮುಖ ಪ್ರಸನ್ನತೆಯನ್ನು ಅಪೇಕ್ಷಿಸುವರು.


ಓಹೋ, ಕೂಷಿನ ನದಿಗಳ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡು,


ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು ಮತ್ತು ಯಜ್ಞನೈವೇದ್ಯಗಳಿಂದ ಸೇವೆ ಮಾಡುವರು. ಹೌದು, ಯೆಹೋವನಿಗೆ ಪ್ರಮಾಣ ಮಾಡಿಕೊಂಡು ಅದನ್ನು ನೆರವೇರಿಸುವರು.


ಇದಲ್ಲದೆ ಯೆಹೋವನು ಐಗುಪ್ತವನ್ನು ಹೊಡೆಯುವನು. ಗಾಯಮಾಡಿ ವಾಸಿಮಾಡುವವನಾಗಿಯೇ ಹೊಡೆಯುವನು. ಅವರು ಯೆಹೋವನ ಕಡೆಗೆ ತಿರುಗಿಕೊಳ್ಳುವರು. ಆತನು ಅವರ ವಿಜ್ಞಾಪನೆಯನ್ನು ಲಾಲಿಸಿ ಅವರನ್ನು ಗುಣಪಡಿಸುವನು.


ನೀನು ಎಲ್ಲಾ ಕಡೆಗಳಲ್ಲಿಯೂ ಹಬ್ಬಿಕೊಳ್ಳುವಿ; ನಿನ್ನ ಸಂತಾನದವರು ಜನಾಂಗಗಳನ್ನು ವಶಮಾಡಿಕೊಂಡು ಹಾಳು ಪಟ್ಟಣಗಳನ್ನು ಜನಭರಿತವಾಗುವಂತೆ ಮಾಡುವರು.


ಎಲೈ, ಇಸ್ರಾಯೇಲೇ, ಅವನಂತೆ ನೀನೂ ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾಮಿ ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವುದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವುದು.


ಜನಾಂಗಗಳು ನಿನ್ನ ಬೆಳಕಿಗೆ ನೆರೆದು ಬರುವವು, ಅರಸರೂ ನಿನ್ನಲ್ಲಿನ ಉದಯಪ್ರಕಾಶಕ್ಕೆ ಸೇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು