Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 46:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ, ಅವುಗಳ ವಿಗ್ರಹಗಳು ಪಶುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳು ಬಳಲಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತಗ್ಗಿದೆ ಬೇಲ್ ದೇವತೆ ಕುಗ್ಗಿದೆ ನೆಬೋ ದೇವತೆ ಅವುಗಳ ಪ್ರತಿಮೆಗಳನು ಕತ್ತೆಗಳು ಹೊತ್ತಿವೆ. ನೀವು ಮೆರವಣಿಗೆಯಾಗಿ ಹೊರುತ್ತಿದ್ದ ಆ ಬೊಂಬೆಗಳೆ, ಭಾರವಾದ ಹೊರೆಯಾಗಿವೆ, ಬಳಲಿದಾ ಪಶುಗಳಿಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬೇಲ್ ದೇವತೆಯು ಬೊಗ್ಗಿದೆ, ನೆಬೋದೇವತೆಯು ಕುಗ್ಗಿದೆ, ಅವುಗಳ ಬೊಂಬೆಗಳು ದನ ಮೊದಲಾದವುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳನ್ನು ಬಳಲಿಸಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬೇಲ್ ಮತ್ತು ನೆಬೋ ನನ್ನ ಮುಂದೆ ಅಡ್ಡಬೀಳುವವು. ಒಡೆಯನು ಹೀಗೆನ್ನುತ್ತಾನೆ, “ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳೇ. ಜನರು ಭಾರವಾದ ವಿಗ್ರಹಗಳನ್ನು ಪಶುಗಳ ಮೇಲೆ ಹೊರಿಸುವರು. ಅವು ಕೇವಲ ಹೊತ್ತುಕೊಂಡು ಹೋಗಬೇಕಾದ ಹೊರೆಗಳಾಗಿವೆ. ಆ ಸುಳ್ಳುದೇವರುಗಳು ಜನರನ್ನು ದಣಿಸುವುದೊಂದನ್ನು ಬಿಟ್ಟು ಬೇರೆ ಯಾವ ಕೆಲಸವನ್ನೂ ಮಾಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬೇಲ್ ದೇವತೆಯು ತಗ್ಗಿದೆ, ನೆಬೋ ದೇವತೆಯು ಕುಗ್ಗಿದೆ. ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು. ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 46:1
22 ತಿಳಿವುಗಳ ಹೋಲಿಕೆ  

ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ, ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹಪ್ರವಾಹವಾಗಿ ಬಾಬಿಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು.


ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ.” ಅವನು ಕೂಗಿ, “ಬಾಬೆಲ್ ಬಿದ್ದು ಹೋಯಿತು, ಬಾಬೆಲ್ ಬಿದ್ದು ಹೋಯಿತು! ಅದರ ದೇವತೆಗಳ ವಿಗ್ರಹಗಳನ್ನು ಒಡೆದು ನೆಲಸಮ ಮಾಡಿಬಿಟ್ಟರು” ಎಂದು ಹೇಳುವನು.


“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.


ಹೀಗಿರಲು ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ; ಆಗ ಆ ದೇಶದಲ್ಲೆಲ್ಲಾ ಗಾಯಪಟ್ಟವರು ನರಳಾಡುವರು.


ಇದರಿಂದ ನಾನು ಬಾಬೆಲಿನ ಬೊಂಬೆಗಳನ್ನು ದಂಡಿಸುವ ದಿನಗಳು ಬರುತ್ತವೆ ಎಂದು ತಿಳಿದುಕೊಳ್ಳಿರಿ. ಆ ದೇಶವೆಲ್ಲಾ ನಾಚಿಕೆಪಡುವುದು; ಅದರ ಪ್ರಜೆಗಳು ಅದರೊಳಗೆ ಹತರಾಗಿ ಬೀಳುವರು.


ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಮಾತನಾಡಲಾರವು; ಹೊತ್ತುಕೊಂಡು ಹೋಗಬೇಕು, ನಡೆಯಲಾರವು. ಅವುಗಳಿಗೆ ಹೆದರಬೇಡಿರಿ, ಕೇಡುಮಾಡಲಾರವು; ಒಳ್ಳೆಯದನ್ನು ಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ” ಎಂದು ಹೇಳುತ್ತಾನೆ


ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು.


ಅಷ್ಡೋದಿನವರು ಮರುದಿನ ಬೆಳಿಗ್ಗೆ ಎದ್ದು ನೋಡಲಾಗಿ ದಾಗೋನ್ ವಿಗ್ರಹವು ಯೆಹೋವನ ಮಂಜೂಷದ ಮುಂದೆ ಬೋರಲಬಿದ್ದಿರುವುದನ್ನು ಕಂಡು ಅದನ್ನು ಎತ್ತಿ ತಿರುಗಿ ಅದರ ಸ್ಥಳದಲ್ಲಿಟ್ಟರು.


ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ನ್ಯಾಯತೀರಿಸುವೆನು. ನಾನೇ ಯೆಹೋವನು.


ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು ಮುಟ್ಟಲೊಲ್ಲರು.


ಸಿಬ್ಮಾ ಎಂಬ ಊರುಗಳನ್ನೂ, ಬೇರೆ ಹೆಸರಿನಿಂದ ಉಚ್ಚರಿಸತಕ್ಕ ನೆಬೋ, ಬಾಳ್ಮೆಯೋನ್ ಎಂಬವುಗಳನ್ನೂ ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.


ವಿಗ್ರಹಗಳು ಸಂಪೂರ್ಣವಾಗಿ ನಾಶವಾಗಿ ಹೋಗುವವು.


ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು, ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ.


ತಪ್ಪಿಸಿಕೊಂಡ ಅನ್ಯಜನರೇ, ಕೂಡಿಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ವಿಗ್ರಹಗಳನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.


ಅವರು ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರುಗದು. ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರಕೊಡಲಾರದು. ಇಲ್ಲವೆ ಅವನನ್ನು ಕಷ್ಟದಿಂದ ಬಿಡಿಸಲಾರದು.


ಬರಗಾಲವು ಅವರ ನೀರನ್ನೆಲ್ಲಾ ಹೀರಲಿ! ಅದು ಬತ್ತಿಹೋಗುವುದು. ಅದು ಬೊಂಬೆಗಳಿಂದ ತುಂಬಿದ ದೇಶ, ಅದರ ಜನರು ತಮ್ಮ ಭಯಂಕರವಾದ ವಿಗ್ರಹಗಳ ಪೂಜೆಯಿಂದ ಮದವೇರಿಸಿಕೊಳ್ಳುತ್ತಾರಷ್ಟೆ;


ಹಾಗೆ ಅವರನ್ನು ಹಿಡಿದು ತರಲು ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ, ನೀವು ನನ್ನ ದೇವರನ್ನು ಸೇವಿಸದೆ, ನಾನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸದೆ ಇರುವುದು ಬೇಕೆಂದೇ ಮಾಡಿದ್ದೋ?


ಅವರ ದೇವರುಗಳನ್ನೂ, ಎರಕದ ಬೊಂಬೆಗಳನ್ನೂ, ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ, ಸೂರೆ ಮಾಡಿಕೊಂಡು ಐಗುಪ್ತಕ್ಕೆ ಬಂದು, ಕೆಲವು ವರ್ಷಗಳ ತನಕ ಉತ್ತರ ದಿಕ್ಕಿನ ರಾಜನ ತಂಟೆಗೆ ಹೋಗುವುದಿಲ್ಲ.


ಅಶ್ಶೂರವೇ, ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ, ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು; ನಿನ್ನ ಪಾಪಗಳು ದುರ್ವಾಸನೆ ಬೀರುತ್ತಿವೆ.


ಬಲ ಹೆಚ್ಚಾಗಿರುವುದರಿಂದ ಅದರಲ್ಲಿ ನಂಬಿಕೆಯಿಟ್ಟು, ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವೆಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು