Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 46:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನ್ನ ಧರ್ಮವನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು; ಚೀಯೋನಿನಲ್ಲಿ ರಕ್ಷಣಾಕಾರ್ಯವನ್ನು ನಡಿಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ಒಳ್ಳೆಯ ಕಾರ್ಯಗಳನ್ನು ಮಾಡುವೆನು. ನನ್ನ ಜನರನ್ನು ಬೇಗನೆ ರಕ್ಷಿಸುವೆನು. ಚೀಯೋನಿಗೆ, ಅಂದರೆ ನನ್ನ ಅದ್ಭುತವಾದ ಇಸ್ರೇಲಿಗೆ ರಕ್ಷಣೆಯನ್ನು ತರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು. ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾಗದು, ನನ್ನ ಮಹಿಮೆಯಾಗಿರುವ ಇಸ್ರಾಯೇಲಿಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 46:13
34 ತಿಳಿವುಗಳ ಹೋಲಿಕೆ  

“ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ” ಎಂಬುದಾಗಿ ಯೆಹೋವನು ಭೂಮಿಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.


ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.


ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”


ನನ್ನ ರಕ್ಷಣಾಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವುದು, ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.


ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.


ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.


“ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಳ್ಳಲ್ಪಟ್ಟದ್ದೂ ಮತ್ತು ಅತ್ಯಮೂಲ್ಯವಾದದ್ದೂ. ಆತನ ಮೇಲೆ ನಂಬಿಕೆಯಿಡುವವನು ಅವಮಾನಪಡುವುದೇ ಇಲ್ಲ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.


ಆ ದಿನದಲ್ಲಿ ಆತನು ಬರುವಾಗ ತನ್ನ ಪರಿಶುದ್ಧ ಜನರಿಂದ ಮಹಿಮೆ ಹೊಂದಿದವನಾಗಿಯೂ ಮತ್ತು ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವನು.


ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.


ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು. ಆಗ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಸುವುದರಿಂದ, ಯೆರೂಸಲೇಮ್ ಪವಿತ್ರವಾಗಿರುವುದು. ಅನ್ಯರು ಇನ್ನು ಅದರಲ್ಲಿ ಹಾದುಹೋಗುವುದಿಲ್ಲ.


ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.


“ಬರುವಾತನು ಇನ್ನು ಸ್ವಲ್ಪ ಕಾಲದಲ್ಲಿ ಬರುವನು ತಡಮಾಡುವುದಿಲ್ಲ.


ಹೀಗಿರಲಾಗಿ ನಮ್ಮ ದೇವರು ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗೆ ಅನುಸಾರವಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವುದು ನೀವೂ ಆತನಲ್ಲಿ ಮಹಿಮೆ ಹೊಂದುವಿರಿ.


ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.


ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.


ನನ್ನದೆಲ್ಲವೂ ನಿನ್ನದೇ ಮತ್ತು ನಿನ್ನದೆಲ್ಲವೂ ನನ್ನದೇ. ನಾನು ಇವರಲ್ಲಿ ಮಹಿಮೆಗೊಂಡಿದ್ದೇನೆ.


ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ; ನಾನು ಅದಕ್ಕೆ ಮೆಚ್ಚಿ ನನ್ನ ಪ್ರಭಾವವನ್ನು ಅಲ್ಲಿ ಪ್ರಕಾಶಗೊಳಿಸುವೆನು” ಇದು ಯೆಹೋವನ ನುಡಿ.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.


ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.


ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.


ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬೇಗನೆ ಬರಲಿ. ಯೆಹೋವನು ತನ್ನ ಜನರನ್ನು ದುರವಸ್ಥೆಯಿಂದ ತಪ್ಪಿಸಿದಾಗ, ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು, ಇಸ್ರಾಯೇಲರು ಹರ್ಷಿಸುವರು.


ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.


ಯೆಹೋವನು ಹೀಗೆನ್ನುತ್ತಾನೆ, “ನ್ಯಾಯವನ್ನು ಅನುಸರಿಸಿ, ಧರ್ಮವನ್ನು ಆಚರಿಸಿರಿ; ಏಕೆಂದರೆ ನನ್ನ ವಿಮೋಚನಕ್ರಿಯೆಯು ಬೇಗನೆ ಬರುವುದು, ನನ್ನ ರಕ್ಷಣಾಧರ್ಮದ ಕಾರ್ಯವು ಶೀಘ್ರವಾಗಿ ವ್ಯಕ್ತವಾಗುವುದು.


ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇಮಿನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ, ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಮೌನವಾಗಿರದೆ ಯೆರೂಸಲೇಮಿನ ಕ್ಷೇಮವನ್ನು ಚಿಂತಿಸುತ್ತಿರುವೆನು.


ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”


ನಾನು ಯೆಹೋವನಿಗೆ ಪಾಪ ಮಾಡಿದ್ದರಿಂದ ಆತನ ಕೋಪವನ್ನು ತಾಳಿಕೊಂಡಿರುವೆನು. ಕಾಲಾನುಕಾಲಕ್ಕೆ ಆತನು ತನ್ನ ವ್ಯಾಜ್ಯವನ್ನು ನಿರ್ವಹಿಸಿ, ನನಗೆ ನ್ಯಾಯವನ್ನು ತೀರಿಸುವನು. ನನ್ನನ್ನು ಬೆಳಕಿಗೆ ತರುವನು. ಆತನ ರಕ್ಷಣಾಧರ್ಮವನ್ನು ನೋಡುವೆನು.


ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು.


ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ಮಳೆಯಂತೆ ಸುರಿಸು. ಭೂಮಿಯು ಒಡೆದು ರಕ್ಷಣೆಯನ್ನು ಮೊಳೆಯಿಸಿ, ಅದರೊಡನೆ ನೀತಿಫಲವನ್ನು ಬೆಳೆಯಿಸಲಿ. ಯೆಹೋವನೆಂಬ ನಾನೇ ಇದಕ್ಕೆಲ್ಲಾ ಕರ್ತನು.


ಯೆಹೋವನು ನಿನ್ನನ್ನು ವೈಭವಪಡಿಸಿರುವುದನ್ನು ಕೇಳಿ ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ನಿಧಿಯೂ, ಇಸ್ರಾಯೇಲಿನ ಸದಮಲಸ್ವಾಮಿಯ ಸನ್ನಿಧಿಯ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವುದರಲ್ಲಿ ಮುಂದಾಗುತ್ತಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು