Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 47:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಗೋ, ಇವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು; ಜ್ಞಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು; ಅದು ಕಾಯಿಸಿಕೊಳ್ಳುವ ಕೆಂಡವಲ್ಲ, ಮುಂದೆ ಕುಳಿತರೆ ಹಾಯಾಗಿರುವ ಬೆಂಕಿಯೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇರುವರವರೆಲ್ಲರು ಒಣಹುಲ್ಲಿನ ಕೂಳೆಯಂತೆ ಸುಟ್ಟುಬಿಡುವುದವರನು ಉರಿಯುವ ಚಿತೆ ತುತ್ತಾಗುವರವರು ಆ ಜ್ವಾಲಾಗ್ನಿಗೆ ತಪ್ಪದೆ. ಅದು ಚಳಿಗೆ ಮೈಕಾಯಿಸಿಕೊಳ್ಳುವ ಬೆಂಕಿಯಂತಲ್ಲ ಮೈಬೆಚ್ಚಗಾಗಿಸಿಕೊಳ್ಳುವ ಉರಿಯಂತಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಹಾ, ಇವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವದು, ಜ್ವಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು; ಅದು ಕಾಯಿಸಿಕೊಳ್ಳುವ ಕೆಂಡವಲ್ಲ, ಮುಂದೆ ಕುಳಿತರೆ ಹಾಯಾಗಿರುವ ಉರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಆ ಮನುಷ್ಯರಿಗೆ ತಮ್ಮನ್ನೇ ರಕ್ಷಿಸಲು ಅಸಾಧ್ಯವಾಗುವದು. ಅವರು ಹುಲ್ಲಿನಂತೆ ಸುಟ್ಟುಹೋಗುವರು. ರೊಟ್ಟಿಸುಡಲು ಕೆಂಡಗಳು ಕಾಣಿಸದಂತೆಯೂ ಚಳಿ ಕಾಯಿಸಿಕೊಳ್ಳಲು ಬೆಂಕಿ ಇರದಂತೆಯೂ ಅವರು ಕ್ಷಣಕಾಲದಲ್ಲಿ ಸುಟ್ಟುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇಗೋ, ಅವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು. ಜ್ವಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು ಇಲ್ಲವೆ ಕಾಯಿಸಿಕೊಳ್ಳುವುದಕ್ಕೆ ಕೆಂಡವಿರುವುದಿಲ್ಲ. ಹತ್ತಿರ ಕೂತುಕೊಳ್ಳಲು ಬೆಂಕಿಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 47:14
21 ತಿಳಿವುಗಳ ಹೋಲಿಕೆ  

“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.


ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ಅವರ ಮೇಲೆ ಕೋಪ ದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ, ಬೆಂಕಿಯು ಅವರನ್ನು ನುಂಗಿಬಿಡುವುದು; ನಾನು ಅವರ ಮೇಲೆ ಕೋಪ ದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.


ಮೂಡಣದಿಂದ ಒಬ್ಬನನ್ನು ಎಬ್ಬಿಸಿ, ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು, ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು, ಅವನನ್ನು ರಾಜರ ಮೇಲೆ ಆಳುವಂತೆ ಮಾಡಿ, ಅವರ ಕತ್ತಿಯನ್ನು ಧೂಳನ್ನಾಗಿಯೂ, ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಹುಲ್ಲನ್ನಾಗಿಯೂ ಅವರನ್ನು ಮಾಡಿದನು.


ಇಸ್ರಾಯೇಲರ ಪರಂಜ್ಯೋತಿಯು ದಹಿಸುವ ಅಗ್ನಿಯಾಗುವುದು. ಅವರ ಪರಿಶುದ್ಧನು ಜ್ವಾಲೆಯಂತಿರುವನು. ಅದು ಒಂದೇ ದಿನದಲ್ಲಿ ಅಶ್ಶೂರದ ಮುಳ್ಳುಗಿಳ್ಳನ್ನು ಸುಟ್ಟು ನುಂಗಿಬಿಡುವುದು.


ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ.


ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?


ಯಾಕೋಬನವಂಶ ಅಗ್ನಿಯಾಗಿಯೂ, ಯೋಸೇಫನ ವಂಶ ಜ್ವಾಲೆಯಾಗಿಯೂ, ಇವೆರಡೂ ಸೇರಿ ಕೊಳೆಯಂತೆ ಇರುವ ಏಸಾವನ ವಂಶವನ್ನು ಧಗಧಗನೆ ದಹಿಸಿ ಭಸ್ಮ ಮಾಡುವವು. ಏಸಾವನ ವಂಶದವರಲ್ಲಿ ಯಾರೂ ಉಳಿಯರು, ಇದು ಯೆಹೋವನೇ ನುಡಿದಿದ್ದಾನೆ.


ಬೆಟ್ಟಗಳ ತುದಿಯಲ್ಲಿ ಅವು ಹಾರಾಡುತ್ತ ರಥಗಳಂತೆ ಚೀತ್ಕಾರ ಮಾಡುತ್ತವೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.


ಸೇನಾಧೀಶ್ವರನಾದ ಯೆಹೋವನು, “ಬಾಬೆಲಿನ ಗಾತ್ರವಾದ ಪೌಳಿಗೋಡೆಯು ಸಂಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು” ಎಂದು ನುಡಿಯುತ್ತಾನೆ.


ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡು ಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ’ ಎಂದು ತಿಳಿಸುವರು.”


ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಬಲಹೀನರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ, ಅವರ ಅಗುಳಿಗಳು ಮುರಿದುಹೋಗಿವೆ.


ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವುದು.


ಉರಿಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ, ಬಾವಿಯಿಂದ ನೀರನ್ನು ತೆಗೆಯುವುದಕ್ಕಾಗಲಿ, ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ, ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ನಾಶಮಾಡುವನು.


ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.


“ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.


ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು, ಅದರ ಮೇಲೆ ಮಾಂಸವನ್ನು ಸುಡುವನು. ಅದನ್ನು ತಿಂದು ತೃಪ್ತನಾಗುವನು. ತನ್ನನ್ನು ಕಾಯಿಸಿಕೊಳ್ಳುತ್ತಾ, “ಆಹಾ, ಬೆಂಕಿಯನ್ನು ಕಂಡೆ, ಬೆಚ್ಚಗಾಯಿತು” ಎಂದುಕೊಳ್ಳುವನು.


ಹೀಗಿರಲಾಗಿ ಜನರು ಹುಲ್ಲನ್ನು ಕೂಡಿಸಿಕೊಳ್ಳುವುದಕ್ಕಾಗಿ ಐಗುಪ್ತ ದೇಶದಲ್ಲೆಲ್ಲಾ ಚದರಿಹೋಗಿ ಹುಡುಕತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು