Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ನಾನೇ ಪರಮಾತ್ಮನು, ನಾನೇ ಆದಿಯೂ, ನಾನೇ ಅಂತ್ಯ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಯಕೋಬೆ, ನಾ ಕರೆದ ಇಸ್ರಯೇಲೆ ನನಗೆ ಕಿವಿಗೊಡು, ಪರಮಾತ್ಮ ನಾನೆ ಆದಿಯು ನಾನೆ, ಅಂತ್ಯವು ನಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು; ನಾನೇ ಪರಮಾತ್ಮನು; ನಾನೇ ಆದಿ, ಅಂತವೂ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಯಾಕೋಬೇ, ನನಗೆ ಕಿವಿಗೊಡು. ಇಸ್ರೇಲೇ, ನೀವು ನನ್ನ ಜನರಾಗುವದಕ್ಕಾಗಿ ನಿಮ್ಮನ್ನು ನಾನು ಕರೆದೆನು. ಆದ್ದರಿಂದ ನನ್ನ ಮಾತುಗಳನ್ನು ಕೇಳಿರಿ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ಆತನು ನಾನೇ, ನಾನೇ ಮೊದಲನೆಯವನು, ನಾನೇ ಕಡೆಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:12
28 ತಿಳಿವುಗಳ ಹೋಲಿಕೆ  

ಇದನ್ನೆಲ್ಲಾ ನಡೆಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ ಯೆಹೋವನೆಂಬ ನಾನೇ; ಹೌದು, ಆದಿಪುರುಷನೂ, ಅಂತ್ಯಕಾಲದವರ ಸಂಗಡಿಗನೂ ಆಗಿರುವ ನಾನೊಬ್ಬನೇ.


ನಾನೇ ಆದಿಯೂ, ಅಂತ್ಯವೂ, ಮೊದಲನೆಯವನೂ, ಕಡೆಯವನೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ.


“ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.


ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ನಾನೇ, ನಾನೇ ಯೆಹೋವನು, ನನ್ನ ಹೊರತು ಯಾವ ರಕ್ಷಕನೂ ಇಲ್ಲ.


ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ! ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.


ಯಾಕೋಬವಂಶವೇ, ಇಸ್ರಾಯೇಲ್ ಮನೆತೆನದವರಲ್ಲಿ ಉಳಿದ ಸಂತಾನವೇ, ನಿಮ್ಮನ್ನು ಗರ್ಭದಿಂದ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದ ನನ್ನ ಮಾತಿಗೆ ಕಿವಿಗೊಡಿರಿ.


ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.


ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”


“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು, ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂ ಹೇಳುವುದೇನಂದರೆ,


ಅದು, “ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು” ಎಂದು ನುಡಿಯಿತು.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ.


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.


ಯೇಸು ಕ್ರಿಸ್ತನಲ್ಲಿ ಸೇರುವುದಕ್ಕೆ ಕರೆಯಲ್ಪಟ್ಟ ನೀವೂ ಸಹ ಆ ಅನ್ಯಜನರೊಳಗಿನವರಾದ್ದರಿಂದ ನಿಮಗೆ,


ಹೀಗೆ ಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು” ಎಂದು ಹೇಳಿದನು.


ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ.


“ನನ್ನ ಜನರೇ, ಆಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ! ಧರ್ಮೋಪದೇಶವು ನನ್ನಿಂದ ಹೊರಡುವುದು, ನನ್ನ ನ್ಯಾಯಬೋಧನೆಯನ್ನು ಜನಾಂಗಗಳಿಗೆ ಬೆಳಕನ್ನಾಗಿ ಸ್ಥಾಪಿಸುವೆನು.


ನೀತಿಯನ್ನು ಹಿಂಬಾಲಿಸುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರೋ, ಯಾವ ಗುಂಡಿಯಿಂದ ಅಗೆಯಲ್ಪಟ್ಟಿರೋ ಆ ಕಡೆಗೆ ನೋಡಿರಿ.


ಜನಾಂಗಗಳೇ, ಸಮೀಪಕ್ಕೆ ಬಂದು ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂಮಿಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವುದೆಲ್ಲವೂ ಆಲಿಸಲಿ.


ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೇ ಸರಿ.


ಈಗ, ಮಕ್ಕಳೇ, ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾತುಗಳನ್ನು ಆಲಿಸಿರಿ.


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದುವರಿಸುತ್ತಾನೆ. ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ; ಆತನು ಅತಿ ಬಲಾಢ್ಯನೂ, ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು.


ಯೆಹೋವನ ಮಾತೇನೆಂದರೆ, ‘ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು. ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು. ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ.


ನಿಮ್ಮ ಮುಪ್ಪಿನ ತನಕ ನಾನೇ ಆಧಾರ, ನರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು. ನಾನೇ ಉಂಟುಮಾಡಿದೆನು, ನಾನೇ ಹೊರುವೆನು. ಹೌದು, ನಿಮ್ಮನ್ನು ಹೊತ್ತು ಸಹಿಸಿ ನಿರ್ವಹಿಸುವೆನು.


ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಇಸ್ರಾಯೇಲೇ, ಈಗ ಕೇಳು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು