Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ! ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. ‘ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ’” ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹೊರಡಿರಿ ಬಾಬಿಲೋನ್ ನಗರದಿಂದ, ಓಡಿರಿ ಕಸ್ದೀಯರ ಕಡೆಯಿಂದ ಪ್ರಚುರಪಡಿಸಿರಿ ಹರ್ಷಧ್ವನಿಯಿಂದ, ಪ್ರಕಟಿಸಿರಿ ಭೂಮಿಯ ಕಟ್ಟಕಡೆಯ ತನಕ, ಈ ಪರಿ ತಿಳಿಸಿರಿ : “ಸರ್ವೇಶ್ವರ, ತಮ್ಮ ದಾಸ ಯಕೋಬನ ಉದ್ಧಾರಕ".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆಯಿಂದ ಹಾರಿಹೋಗಿರಿ; ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ, ಭೂವಿುಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಯೆಹೋವನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನನ್ನ ಜನರೇ, ಬಾಬಿಲೋನನ್ನು ತೊರೆಯಿರಿ. ನನ್ನ ಜನರೇ, ಕಸ್ದೀಯರಿಂದ ಓಡಿಹೋಗಿರಿ. ಈ ವರ್ತಮಾನವನ್ನು ಜನರಿಗೆ ಹರ್ಷಿಸುತ್ತಾ ತಿಳಿಸಿರಿ. ಲೋಕದ ಕಟ್ಟಕಡೆಯ ಸ್ಥಳದಲ್ಲೂ ಈ ವರ್ತಮಾನವನ್ನು ಪ್ರಕಟಿಸಿರಿ. “ಯಾಕೋಬನನ್ನು ಯೆಹೋವನು ರಕ್ಷಿಸಿದನೆಂದು” ಜನರಿಗೆಲ್ಲಾ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಬಾಬಿಲೋನಿನಿಂದ ಹೊರಡಿರಿ. ಕಸ್ದೀಯರ ಕಡೆಯಿಂದ ಓಡಿಹೋಗಿರಿ. ಹರ್ಷಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. “ಯೆಹೋವ ದೇವರು ತಮ್ಮ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾರೆ,” ಎಂದು ನೀವು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:20
39 ತಿಳಿವುಗಳ ಹೋಲಿಕೆ  

ನನ್ನ ಜನರೇ, ನೀವೆಲ್ಲರೂ ಬಾಬೆಲಿನೊಳಗಿಂದ ಹೊರಟು ಯೆಹೋವನ ರೋಷಾಗ್ನಿಯಿಂದ ತಪ್ಪಿಸಿಕೊಳ್ಳಿರಿ.


ಯೆರೂಸಲೇಮಿನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ! ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ.


ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.


ಬಾಬೆಲ್ ದೇಶದೊಳಗಿಂದ ಓಡಿಹೋಗಿರಿ, ಕಸ್ದೀಯರ ಸೀಮೆಯಿಂದ ಹೊರಡಿರಿ; ಹಿಂಡುಗಳ ಮುಂದೆ ಹೋಗುವ ಹೋತಗಳಂತಿರಿ.


ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು, “ನನ್ನ ಜನರೇ, ಅವಳನ್ನು ಬಿಟ್ಟು ಬನ್ನಿರಿ, ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು. ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.”


ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು, “ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.


ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.


ಆಗ ಭೂಮ್ಯಾಕಾಶಗಳೂ ಅಲ್ಲಿನ ಸಮಸ್ತವೂ ಬಾಬೆಲಿನ ನಾಶವನ್ನು ನೋಡಿ ಹರ್ಷಧ್ವನಿಗೈಯುವವು; ಏಕೆಂದರೆ ಹಾಳುಮಾಡುವವರು ಉತ್ತರ ದಿಕ್ಕಿನಿಂದ ಬಂದು ಅದರ ಮೇಲೆ ಬೀಳುವರು; ಇದು ಯೆಹೋವನ ನುಡಿ.”


“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಡದೆ ಹೀಗೆ ಸಾರಿರಿ, ‘ಬಾಬೆಲ್ ಶತ್ರುವಶವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.


ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ, ದೂರ ದ್ವೀಪಗಳಲ್ಲಿ ಸಾರಿರಿ! ಇಸ್ರಾಯೇಲರನ್ನು ಚದರಿಸಿದಾತನು, ‘ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು’ ಎಂದು ಪ್ರಕಟಿಸಿರಿ. ಯೆಹೋವನು ಯಾಕೋಬ್ಯರನ್ನು ವಿಮೋಚಿಸಿದ್ದಾನಲ್ಲಾ,


ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!


ನಡೆದ ಸಂಗತಿಗಳನ್ನು ನೀನು ಕೇಳಿದಿಯಲ್ಲಾ, ನಡೆದದ್ದನ್ನೆಲ್ಲಾ ನೋಡು, ನಿನ್ನವರೇ ಪ್ರಸಿದ್ಧಿಪಡಿಸಲಿ. ಇಂದಿನಿಂದ ಹೊಸ ಸಂಗತಿಗಳನ್ನು, ನೀನು ತಿಳಿಯದಿದ್ದ ಗುಪ್ತವಿಷಯಗಳನ್ನು ನಿನಗೆ ತಿಳಿಸುತ್ತೇನೆ.


ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, ನಾವು ಕನಸು ಕಂಡವರಂತೆ ಇದ್ದೆವು.


ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.


ನಿನ್ನ ಇಸ್ರಾಯೇಲಿನ ಪ್ರಜೆಗೆ ಸಮಾನವಾದ ಜನಾಂಗವು ಲೋಕದಲ್ಲಿ ಯಾವುದಿದೆ? ನೀನೇ ಹೋಗಿ ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿ ಮಾಡಿಕೊಂಡು, ನಿನ್ನ ಹೆಸರನ್ನು ಪ್ರಸಿದ್ಧಪಡಿಸಿಕೊಂಡಿದ್ದಿ, ಐಗುಪ್ತರು ಮೊದಲಾದ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವರ ಎದುರಿನಲ್ಲೇ ನಿನ್ನ ದೇಶಕ್ಕೋಸ್ಕರ ಭಯಂಕರವಾದ ಮಹತ್ಕಾರ್ಯಗಳನ್ನು ನಡಿಸಿದಿ.


ನಿಮ್ಮಲ್ಲಿ ಯಾರಾದರೂ ಭೂಲೋಕದ ಕಟ್ಟಕಡೆಯವರೆಗೆ ಒಯ್ಯಲ್ಪಟ್ಟರೂ, ಅಲ್ಲಿಂದಲೂ ನಿಮ್ಮ ದೇವರಾದ ಯೆಹೋವನು ಅವರನ್ನೂ ಕರೆದುಕೊಂಡು ಬರುವನು.


ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.


ಅವರು ತಮ್ಮ ಧ್ವನಿ ಎತ್ತಿ ಯೆಹೋವನ ಮಹಿಮೆಯನ್ನು ಕುರಿತು ಹಾಡುವರು. ಸಮುದ್ರದ ಕಡೆಯಿಂದ ಆರ್ಭಟಿಸುವರು.


ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.


ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.


ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ, ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.


ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”


ಸೆರೆಯಲ್ಲಿ ಕುಗ್ಗಿರುವವನು ಸಾಯನು, ಪಾತಾಳಕ್ಕೆ ಇಳಿಯನು, ಬೇಗನೆ ಬಿಡುಗಡೆಯಾಗುವನು. ಅವನಿಗೆ ಅನ್ನದ ಕೊರತೆಯೇ ಇರುವುದಿಲ್ಲ.


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ. ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.


“ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ” ಎಂಬುದಾಗಿ ಯೆಹೋವನು ಭೂಮಿಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.


ಅವರಿಗಿಂತ ಬಲಿಷ್ಠರ ಕೈಯಿಂದ ಅವರನ್ನು ಬಿಡಿಸಿದ್ದಾನಷ್ಟೆ.


ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ; ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ. ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು.


ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಯೆಹೋವನು ತನ್ನ ಆಲಯವನ್ನು ನಾಶ ಮಾಡಿದವರಿಗೆ ಮುಯ್ಯಿತೀರಿಸಿದ್ದಾನೆ ಎಂಬ ಸಮಾಚಾರವನ್ನು ಚೀಯೋನಿನಲ್ಲಿ ಪ್ರಕಟಿಸುವುದಕ್ಕೆ ಹೋಗುತ್ತಾರಲ್ಲಾ.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಬಾಬಿಲೋನಿಗೆ ಸೆರೆ ಒಯ್ಯಲ್ಪಟ್ಟವರಲ್ಲಿ ಯೆರೂಸಲೇಮಿಗೂ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ ಸೆರೆಯಿಂದ ಹಿಂತಿರುಗಿ ಬಂದ (ಯೆಹೂದ) ಸಂಸ್ಥಾನದವರ ಜನಗಣತಿ.


ಯೆಹೋವನು ಇಂತೆನ್ನುತ್ತಾನೆ, “ಚೀಯೋನ್ ನಗರಿಯೇ, ಉಲ್ಲಾಸಗೊಳ್ಳು, ಹರ್ಷಧ್ವನಿಗೈ! ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸಿಸುವೆನು.


ನಾನು ಅವರನ್ನು ಸಿಳ್ಳುಹಾಕಿ ಕರೆದು ಕೂಡಿಸುವೆನು. ಅವರನ್ನು ವಿಮೋಚಿಸಿದೆನಲ್ಲಾ; ಅವರು ಹಿಂದೆ ವೃದ್ಧಿಯಾದಂತೆ ಮುಂದೆಯೂ ವೃದ್ಧಿಯಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು