Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಬಾಯಿಯನ್ನು ಹದವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈಯ ನೆರಳಿನಲ್ಲಿ ನನ್ನನ್ನು ಹುದುಗಿಸಿದ್ದಾನೆ. ನನ್ನನ್ನು ಚೂಪಾದ ಬಾಣವನ್ನಾಗಿ ರೂಪಿಸಿ, ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮಾಡಿದನು ನನ್ನ ನುಡಿಯನ್ನು ಹರಿತವಾದ ಖಡ್ಗವನ್ನಾಗಿ ಮುಚ್ಚಿಟ್ಟಹನು ನನ್ನನ್ನು ತನ್ನ ಕರದ ನೆರಳಿನಲ್ಲಿ ರೂಪಿಸಿಹನು ನನ್ನನ್ನು ಚೂಪಾದ ಬಾಣವನ್ನಾಗಿ, ಬಚ್ಚಿಟ್ಟಿಹನು ನನ್ನನು ತನ್ನ ಬತ್ತಳಿಕೆಯಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನ ಬಾಯನ್ನು ಹದವಾದ ಖಡ್ಗವನ್ನಾಗಿ ಮಾಡಿ ತನ್ನ ಕೈಯ ನೆರಳಿನಲ್ಲಿ ನನ್ನನ್ನು ಹುದುಗಿಸಿದ್ದಾನೆ; ನನ್ನನ್ನು ಚೂಪಾದ ಬಾಣವನ್ನಾಗಿ ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ತನ್ನ ಪರವಾಗಿ ಮಾತನಾಡಲು ಯೆಹೋವನು ನನ್ನನ್ನು ಉಪಯೋಗಿಸುತ್ತಾನೆ. ಹದವಾದ ಕತ್ತಿಯಂತೆ ನನ್ನನ್ನು ಉಪಯೋಗಿಸುತ್ತಾನೆ. ಅದೇ ಸಮಯದಲ್ಲಿ ನನ್ನನ್ನು ತನ್ನ ಕೈಯೊಳಗೆ ಸುರಕ್ಷಿತವಾಗಿ ಇರಿಸುತ್ತಾನೆ. ಯೆಹೋವನು ನನ್ನನ್ನು ಬಾಣದಂತೆ ಉಪಯೋಗಿಸುತ್ತಾನೆ, ಅದೇ ಸಮಯದಲ್ಲಿ ಬತ್ತಳಿಕೆಯಲ್ಲಿ ನನ್ನನ್ನು ಅಡಗಿಸಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ. ನನ್ನನ್ನು ಆತನು ನುಣುಪಾದ ಬಾಣವನ್ನಾಗಿ ರೂಪಿಸಿ, ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:2
20 ತಿಳಿವುಗಳ ಹೋಲಿಕೆ  

ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.


ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು, ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಪ್ರಬಲವಾಗಿ ಪ್ರಕಾಶಿಸುವ ಸೂರ್ಯನಂತಿತ್ತು.


ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ. ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ.


ಆಕಾಶವನ್ನು ನಿಲ್ಲಿಸಬೇಕೆಂತಲೂ, ಭೂಲೋಕವನ್ನು ಸ್ಥಾಪಿಸಬೇಕೆಂತಲೂ, ಚೀಯೋನಿಗೆ, “ನೀವು ನನ್ನ ಜನರು” ಎಂದು ಹೇಳಬೇಕೆಂದು ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟು, ನನ್ನ ಕೈಯ ನೆರಳಿನಲ್ಲಿ ನಿನ್ನನ್ನು ಹುದುಗಿಸಿದ್ದೇನೆ.


“ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ, ಹರಿತವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳುವುದೇನಂದರೆ,


ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ, ಕಬ್ಬಿಣದ ಕಂಬವನ್ನಾಗಿಯೂ, ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.


ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.


ಆದಕಾರಣ ನಾನು ನಿಮ್ಮ ಜನರನ್ನು ಪ್ರವಾದಿಗಳ ಮೂಲಕ ಹತಿಸಿದ್ದೇನೆ, ನನ್ನ ಬಾಯಿಯ ಮಾತುಗಳಿಂದ ಸಂಹರಿಸಿದ್ದೇನೆ; ನನ್ನ ನ್ಯಾಯದಂಡನೆಯು ಮಿಂಚಿನಂತೆ ಹೊರಡುವುದು.


ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.


ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.


ಆ ಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು.


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.


ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ.


ಆದ್ದರಿಂದ ನೀನು ಪಶ್ಚಾತ್ತಾಪಪಟ್ಟು ತಿರುಗಿಕೊಳ್ಳದಿದ್ದರೆ ನಾನು ಬೇಗನೆ ನಿನ್ನ ಬಳಿಗೆ ಬಂದು ನನ್ನ ಬಾಯಿಂದ ಹೊರಬರುವ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು.


ನನ್ನ ಮಹಿಮೆಯು ನಿನ್ನೆದುರಿಗೆ ದಾಟಿಹೋಗುವಾಗ ನಾನು ಈ ಬಂಡೆಯ ಸಂದಿನಲ್ಲಿ ನಿನ್ನನ್ನು ಇರಿಸಿ ನನ್ನ ಮುಂದೆ ದಾಟಿ ಹೋಗುವ ತನಕ ನಿನ್ನನ್ನು ಕೈಯಿಂದ ಮರೆಮಾಡುವೆನು.


ನಿಮ್ಮೊಳಗೆ ಯಾರು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವರು? ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.


ಹಾರಿ ಬರುವ ನಿನ್ನ ಬಾಣಗಳ ಬೆಳಕಿಗೆ, ಮಿಂಚುವ ನಿನ್ನ ಈಟಿಯ ಹೊಳಪಿಗೆ, ಸೂರ್ಯಚಂದ್ರರು ಹೆದರಿ ತಮ್ಮ ಗೂಡಿನಲ್ಲಿ ಅಡಗಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು