Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವನು ಹೀಗೆನ್ನುತ್ತಾನೆ, “ಶೂರನ ಸೆರೆಯವರೂ ಅಪಹರಿಸಲ್ಪಡುವರು. ಭಯಂಕರನ ಕೊಳ್ಳೆಯೂ ತೆಗೆಯಲ್ಪಡುವುದು. ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸರ್ವೇಶ್ವರ ಹೀಗೆನ್ನುತ್ತಾರೆ : “ಹೌದು, ಅಪಹರಿಸಲಾಗುವುದು ಬಲಾಢ್ಯನ ಸೆರೆಯಾಳುಗಳನು ಕಸಿದುಕೊಳ್ಳಲಾಗುವುದು ಭೀಕರನ ಕೊಳ್ಳೆಯನು. ನಿನ್ನೊಡನೆ ಹೋರಾಡುವವನ ಸಂಗಡ ಹೊರಾಡುವೆ ನಾನೇ. ಅಷ್ಟೇ ಅಲ್ಲ, ನಿನ್ನ ಮಕ್ಕಳನು ಉದ್ಧರಿಸುವೆ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯೆಹೋವನು ಹೀಗನ್ನುತ್ತಾನೆ - ಶೂರನ ಸೆರೆಯವರೂ ಅಪಹರಿಸಲ್ಪಡುವರು, ಭೀಕರನ ಕೊಳ್ಳೆಯೂ ತೆಗೆಯಲ್ಪಡುವದು; ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದರೆ ಯೆಹೋವನು ಹೇಳುವುದೇನೆಂದರೆ, “ಕೈದಿಗಳು ತಪ್ಪಿಸಿಕೊಳ್ಳುವರು. ಬಲಿಷ್ಠ ಸೈನಿಕನಿಂದ ಯಾರೋ ಒಬ್ಬನು ಕೈದಿಯನ್ನು ಬಿಡಿಸಿಕೊಳ್ಳುವನು. ಇದು ಹೇಗೆ ಸಾಧ್ಯ? ಹೇಗೆಂದರೆ, ನಾನೇ ನಿನ್ನ ಬದಲಾಗಿ ಯುದ್ಧ ಮಾಡುವೆನು; ನಿನ್ನ ಮಕ್ಕಳನ್ನು ರಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಯೆಹೋವ ದೇವರು ಹೀಗೆನ್ನುತ್ತಾರೆ: “ಶೂರನ ಸೆರೆಯವರು ಅಪಹರಿಸಲಾಗುವರು. ಭೀಕರನ ಕೊಳ್ಳೆ ಕಸಿದುಕೊಳ್ಳಲಾಗುವುದು. ಏಕೆಂದರೆ ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ, ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:25
39 ತಿಳಿವುಗಳ ಹೋಲಿಕೆ  

ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.


ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.


ಯೆರೂಸಲೇಮಿನ ಮೇಲೆ ಯುದ್ಧ ಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯು ಬರುವಂತೆ ಮಾಡುವನು, ಹೆಜ್ಜೆಯ ಮೇಲೆ ನಿಂತ ಹಾಗೆಯೇ ಅವರ ಮಾಂಸವು ಕೊಳೆತು ಹೋಗುವುದು, ಕಣ್ಣು ಕುಣಿಯಲ್ಲೇ ಇಂಗುವುದು, ನಾಲಿಗೆಯು ಬಾಯಲ್ಲೇ ಕ್ಷಯಿಸುವುದು.


ಜನಾಂಗದವರು ಅವರನ್ನು ಕರೆದು ತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡು ಹೆಣ್ಣಾಳುಗಳನ್ನಾಗಿ, ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡೆಸುವರು.


ಆ ದಿನದಲ್ಲಿ, ಅವರು ಹೊರಿಸಿದ ಹೊರೆಯು, ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು ಕುತ್ತಿಗೆಯಿಂದಲೂ ತೊಲಗುವುದು, ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು.


ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.


ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು.


ನನ್ನ ಜನರೇ, ನೀವು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾವಿಯೊಳಗಿಂದ ಬರಮಾಡುವೆನು.


ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.


ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು.


ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.


ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ.


ಆಗ ಯೆಹೋವನು ಹೊರಟು, ಯುದ್ಧದ ದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು.


ಅದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಯನ್ನು ನುಗ್ಗಿ ಅವನ ಆಸ್ತಿಯನ್ನು ಕದಿಯಲು ಸಾಧ್ಯವಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಕೊಳ್ಳೆಹೊಡೆಯಬಹುದು.


ಯೆಹೋವನೇ, ನನ್ನ ಸಂಗಡ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯಮಾಡು; ನನ್ನ ಮೇಲೆ ಯುದ್ಧ ಮಾಡುವವರ ಸಂಗಡ ಯುದ್ಧ ಮಾಡು.


ಅವರು ಸಿಂಹದಂತೆ ಘರ್ಜಿಸುತ್ತಾರೆ. ಪ್ರಾಯದ ಸಿಂಹಗಳ ಹಾಗೆ ಆರ್ಭಟಿಸುತ್ತಾರೆ. ಗುರುಗುಟ್ಟುತ್ತಾ ಬೇಟೆ ಹಿಡಿದು ಹೊತ್ತುಕೊಂಡು ಹೋಗುತ್ತಾರೆ. ರಕ್ಷಿಸುವವರು ಯಾರೂ ಇಲ್ಲ.


ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.


ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ಅವು ಐಗುಪ್ತ ದೇಶದಲ್ಲಿ ಸೇನಾಧೀಶ್ವರನಾದ ಯೆಹೋವನ ಗುರುತಾಗಿಯೂ, ಸಾಕ್ಷಿಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಯೆಹೋವನನ್ನು ಕೂಗಿಕೊಳ್ಳಲು ಆತನು ಅವರಿಗಾಗಿ ಹೋರಾಡುವ ಶೂರನಾದ ರಕ್ಷಕನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು.


ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ, ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.


ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು.


ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ; ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.


ನಿನ್ನ ಕರ್ತನೂ, ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ, ನನ್ನ ರೋಷದಿಂದ ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು. ಅದನ್ನು ನೀನು ತಿರುಗಿ ಕುಡಿಯುವುದೇ ಇಲ್ಲ.


ನಾನು ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು, ಹೌದು, ಕ್ರೂರರ ಕೈಯಿಂದ ರಕ್ಷಿಸುವೆನು” ಎಂದಿದ್ದಾನೆ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ! ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಗೆಹಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ಸೀಳಿ ನುಂಗಿ ಬಿಡುವವು; ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು; ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸುವುದಿಲ್ಲ.”


ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಮತ್ತು ಅವನ ಮಕ್ಕಳೂ ಬಿಡುಗಡೆಯಾಗಬೇಕು.


ಸೆರೆಯಲ್ಲಿ ಕುಗ್ಗಿರುವವನು ಸಾಯನು, ಪಾತಾಳಕ್ಕೆ ಇಳಿಯನು, ಬೇಗನೆ ಬಿಡುಗಡೆಯಾಗುವನು. ಅವನಿಗೆ ಅನ್ನದ ಕೊರತೆಯೇ ಇರುವುದಿಲ್ಲ.


ಅವರಿಗಿಂತ ಬಲಿಷ್ಠರ ಕೈಯಿಂದ ಅವರನ್ನು ಬಿಡಿಸಿದ್ದಾನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು