Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದೇ ಯೆಹೋವನ ನುಡಿ, “ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡುತ್ತಾ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇಮಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ತಮ್ಮ ಪ್ರಜೆಗೆ ಇಂತೆನ್ನುತ್ತಾರೆ ಸರ್ವೇಶ್ವರ ಸ್ವಾಮಿ : “ನಿನಗೆ ದಯಪಾಲಿಸುವೆನು ಸದುತ್ತರವನು ಪ್ರಸನ್ನತೆಯ ಕಾಲದಲಿ ಸಹಾಯ ನೀಡುವೆನು ರಕ್ಷಣೆಯ ದಿನದಲಿ ನಿನ್ನನು ಕಾಪಾಡಿ ನೇಮಿಸುವೆನು ಜನತೆಗೆ ಸ್ಥಿರ ಒಡಂಬಡಿಕೆಯಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದೇ ಯೆಹೋವನ ನುಡಿ - ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ, ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ; ನಾನು ನಿನ್ನನ್ನು ಕಾಪಾಡುತ್ತಾ [ನನ್ನ] ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇವಿುಸಿ ಬಂದಿಗಳಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಹೇಳುವುದೇನೆಂದರೆ: “ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡಿ, ಭೂಮಿಯನ್ನು ಸ್ಥಾಪಿಸುವುದಕ್ಕೂ, ಹಾಳಾಗಿರುವ ಸ್ಥಳಗಳನ್ನು ಸೊತ್ತಾಗಿ ಹೊಂದುವುದಕ್ಕೂ, ಜನರ ಒಡಂಬಡಿಕೆಯನ್ನಾಗಿಯೂ ನೇಮಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:8
31 ತಿಳಿವುಗಳ ಹೋಲಿಕೆ  

“ಸುಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು” ಎಂದು ದೇವರು ಹೇಳುತ್ತಾನಲ್ಲಾ. ನೋಡಿ, ಈಗಲೇ ಆ ಸುಪ್ರಸನ್ನತೆಯ ಕಾಲವು; ಇಂದೇ ಆ ರಕ್ಷಣೆಯ ದಿನ.


“ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪಾನುಸಾರವಾಗಿ ನಿನ್ನನ್ನು ಕೈಹಿಡಿದು, ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.


ಯೆಹೋವನೇ, ನಾನಾದರೋ ನಿನಗೆ ಮೊರೆಯಿಟ್ಟಿದ್ದೇನೆ; ಇದು ನಿನ್ನ ಪ್ರಸನ್ನತೆಗೆ ಸಕಾಲ. ಪ್ರೇಮಪೂರ್ಣನಾದ ದೇವನೇ, ಸತ್ಯವಂತನಾದ ರಕ್ಷಕನೇ, ಸದುತ್ತರವನ್ನು ದಯಪಾಲಿಸು.


ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರುಗಿ ಕಟ್ಟುವರು, ಪೂರ್ವದಲ್ಲಿ ಹಾಳುಬಿದ್ದದ್ದನ್ನು ಪುನಃ ಎಬ್ಬಿಸುವರು, ತಲತಲಾಂತರಗಳಿಂದ ಹಾಳಾದ ಪಟ್ಟಣಗಳನ್ನು ಜೀರ್ಣೋದ್ಧಾರ ಮಾಡುವರು.


ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ಪುನಃ ಕಟ್ಟುವರು. ನೀವು ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; “ಬಿದ್ದ ಗೋಡೆಯನ್ನು ಕಟ್ಟುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ” ಎಂಬ ಬಿರುದುಗಳು ನಿಮಗುಂಟಾಗುವವು.


ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.


ಆಕಾಶವನ್ನು ನಿಲ್ಲಿಸಬೇಕೆಂತಲೂ, ಭೂಲೋಕವನ್ನು ಸ್ಥಾಪಿಸಬೇಕೆಂತಲೂ, ಚೀಯೋನಿಗೆ, “ನೀವು ನನ್ನ ಜನರು” ಎಂದು ಹೇಳಬೇಕೆಂದು ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟು, ನನ್ನ ಕೈಯ ನೆರಳಿನಲ್ಲಿ ನಿನ್ನನ್ನು ಹುದುಗಿಸಿದ್ದೇನೆ.


ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ. ಯೆರೂಸಲೇಮಿಗೆ, ‘ನೀನು ಜನ ನಿವಾಸವಾಗುವಿ’ ಎಂದು ಯೆಹೂದದ ಪಟ್ಟಣಗಳಿಗೆ, ‘ಅವು ತಿರುಗಿ ಕಟ್ಟಲ್ಪಡುವವು, ಅಲ್ಲಿನ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು’ ಎಂದು ಮುಂತಿಳಿಸಿ


ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.


ನೀನು ಎಲ್ಲಾ ಕಡೆಗಳಲ್ಲಿಯೂ ಹಬ್ಬಿಕೊಳ್ಳುವಿ; ನಿನ್ನ ಸಂತಾನದವರು ಜನಾಂಗಗಳನ್ನು ವಶಮಾಡಿಕೊಂಡು ಹಾಳು ಪಟ್ಟಣಗಳನ್ನು ಜನಭರಿತವಾಗುವಂತೆ ಮಾಡುವರು.


ನಿನ್ನ ಹಾಳು ಪ್ರದೇಶಗಳು, ನಿನ್ನ ಬೀಳು ಭೂಮಿಯು, ಕೆಟ್ಟುಹೋದ ನಿನ್ನ ಸೀಮೆಯು ಇವುಗಳಿಗೆ ಏನಾಗುವುದೆಂದು ನೋಡುವಿ. ನಿನ್ನನ್ನು ನುಂಗಿದವರು ದೂರವಾಗುವರು, ನಿನ್ನ ನಿವಾಸಿಗಳಿಗೆ ನೀನು ಸಂಕೋಚಸ್ಥಳವಾಗುವಿ.


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.


ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.


ಎಲ್ಲಾ ನಿವಾಸಿಗಳೊಡನೆ ಭೂಮಿಯು ಕರಗಿ ಹೋದರೂ, ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ” ಎಂಬುದು. ಸೆಲಾ


ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು.


ಆದರೆ ಯೇಸು ಕ್ರಿಸ್ತನು ಅದಕ್ಕಿಂತ ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.


ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ಒಡಂಬಡಿಕೆಯ ರಕ್ತ.


ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು.


ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.


“ಯೆಹೋವನಾದ ನಾನೇ ಅದನ್ನು ಕಾಯುತ್ತೇನೆ. ಪ್ರತಿ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ಹಗಲಿರುಳೂ ಕಾಯುತ್ತೇನೆ.


ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.


ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ವಿಗ್ರಹಗಳು ನಿನ್ನನ್ನುದ್ಧರಿಸಲಿ. ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವುದು, ಉಸಿರು ಅದನ್ನು ಒಯ್ಯುವುದು. ನನ್ನನ್ನು ಆಶ್ರಯಿಸುವವನೋ ದೇಶವನ್ನು ಅನುಭವಿಸಿ ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.


ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ,? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?


ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ,


ಯಾಕೋಬಿನಿಂದ ಸಂತಾನವನ್ನು ಹುಟ್ಟಿಸುವೆನು, ಯೆಹೂದ ವಂಶದಿಂದ ನನ್ನ ಪರ್ವತಗಳ ಸ್ವತ್ತಿನ ಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವತ್ತನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು