Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನರಮಾನವರು ತಗ್ಗಿಹೋಗುವರು. ಕುಲೀನರು ಕುಗ್ಗಿಹೋಗುವರು. ಗರ್ವಿಷ್ಠರ ಸೊಕ್ಕು ಅಡಗಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕುಲಹೀನರು ಬೊಗ್ಗುವರು, ಕುಲೀನರು ಕುಗ್ಗುವರು, ಉನ್ನತರ ದೃಷ್ಟಿಯು ತಗ್ಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ಜನರು ತಗ್ಗಿಸಲ್ಪಡುವರು. ಆ ಗಣ್ಯವ್ಯಕ್ತಿಗಳು ತಮ್ಮ ತಲೆಗಳನ್ನು ಕೆಳಗೆ ಮಾಡಿ ನೆಲದ ಕಡೆಗೆ ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನರಮಾನವರು ತಗ್ಗಿಹೋಗುವರು. ಅಹಂಭಾವದ ಕಣ್ಣುಗಳು ಕಂಗೆಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:15
24 ತಿಳಿವುಗಳ ಹೋಲಿಕೆ  

ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಹೀಗಿರಲು ಜನರು ಅಧರ್ಮಿಗಳಾಗಲಿ, ಉತ್ತಮರಾಗಲಿ ತಗ್ಗಿಸಲ್ಪಡುವರು, ಪ್ರತಿ ಮನುಷ್ಯನು ಬಿದ್ದುಹೋಗುವನು. ನೀನು ಅವರನ್ನು ಸ್ವೀಕರಿಸಬೇಡ.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ನಾನು ಇವುಗಳಿಗಾಗಿ ದಂಡಿಸಬಾರದೋ? ಇಂತಹ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ” ಎಂದು ಯೆಹೋವನು ನುಡಿಯುತ್ತಾನೆ.


ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’


ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ, ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.


ಆಹಾ, ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಂಬೆಗಳನ್ನು ಕತ್ತರಿಸುವನು. ಅವು ಧಡಮ್ಮನೆ ಬೀಳುವವು. ಉನ್ನತವಾದ ವೃಕ್ಷಗಳು ಕಡಿದು ಕೆಳಗೆ ಬೀಳುವವು. ಎತ್ತರವಾದ ಮರಗಳು ನೆಲದ ಪಾಲಾಗುವವು.


ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”


ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.


ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ, ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ?


ದೀನರನ್ನು ಉದ್ಧರಿಸುತ್ತಿ. ಹಮ್ಮಿನವರನ್ನು ಕಂಡುಹಿಡಿದು ತಗ್ಗಿಸಿಬಿಡುತ್ತಿ.


ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ; ನನಗೆ ಸೊಕ್ಕಿನ ಕಣ್ಣುಗಳಿಲ್ಲ; ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ.


ಕಣ್ಣುರೆಪ್ಪೆಗಳನ್ನೆತ್ತಿಕೊಂಡು, ಎಷ್ಟೋ ಮೇಲೆ ಎಷ್ಟೋ ಮೇಲೆ ಮೇಲೆಯೇ ನೋಡುತ್ತಿರುವ ಇನ್ನೊಂದು ತರದವರು ಉಂಟು.


“ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೆ ಈಡಾಗುವವು; ಆಗ ತಮ್ಮ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.


ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು