Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಹೀಗಿರಲು, ಒಣಗಿದ ಕಳೆಯನ್ನು ಅಗ್ನಿಜ್ವಾಲೆ ಕಬಳಿಸುವಂತೆ, ಒಣಹುಲ್ಲು ಬೆಂಕಿಯಲ್ಲಿ ಬೂದಿಯಾಗುವಂತೆ, ಅವರ ಬೇರು ಕೊಳೆತುಹೋಗುವುದು. ಅವರ ಹೂ ಧೂಳಿನಂತೆ ತೂರಿಹೋಗುವುದು. ಏಕೆಂದರೆ, ಅವರು ಸೇನಾಧೀಶ್ವರಸ್ವಾಮಿಯ ಉಪದೇಶವನ್ನು ನಿರಾಕರಿಸಿದ್ದಾರೆ. ಇಸ್ರಯೇಲಿನ ಪರಮಪಾವನ ಸ್ವಾಮಿಯ ವಾಕ್ಯವನ್ನು ಅಸಡ್ಡೆಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೂಳೆಯನ್ನು ನುಂಗಿಬಿಡುವ ಹಾಗೂ ಒಣಹುಲ್ಲು ಬೆಂಕಿಯಲ್ಲಿ ಕುಗ್ಗುವಂತೆಯೂ ಅವರ ಬೇರು ಕೊಳೆತು ಅವರ ಹೂವು ದೂಳಾಗಿ ತೂರಿಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಏಕೆಂದರೆ ಅವರು ಸೇನಾಧೀಶ್ವರ ಯೆಹೋವ ದೇವರ ನಿಯಮವನ್ನು ನಿರಾಕರಿಸಿದ್ದರಿಂದಲೂ, ಇಸ್ರಾಯೇಲಿನ ಪರಿಶುದ್ಧರ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿ ಬಿಡುವ ಹಾಗೆಯೂ, ಜ್ವಾಲೆಯು ಒಣಹುಲ್ಲನ್ನು ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆಯುವಂತೆಯೂ, ಚಿಗುರು ಅದರ ಧೂಳಿನಂತೆಯೂ ಏರಿ ಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:24
44 ತಿಳಿವುಗಳ ಹೋಲಿಕೆ  

ಆದುದರಿಂದ ಇಸ್ರಾಯೇಲರ ಸದಮಲಸ್ವಾಮಿಯು ಹೀಗೆನ್ನುತ್ತಾನೆ, “ನೀವು ಈ ನನ್ನ ಮಾತನ್ನು ಅಸಡ್ಡೆಮಾಡಿ, ಬಲಾತ್ಕಾರ ಕುಯುಕ್ತಿಗಳನ್ನು ನಂಬಿ,


ಅವನ ವಂಶವೃಕ್ಷದ ಬೇರುಗಳು ಒಣಗುವುದು, ಅದರ ರೆಂಬೆಯು ಮೇಲೆ ಬಾಡುವುದು.


ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ. ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ತುಂಬಿಕೊಳ್ಳುವನು. ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.


ಬೆಟ್ಟಗಳ ತುದಿಯಲ್ಲಿ ಅವು ಹಾರಾಡುತ್ತ ರಥಗಳಂತೆ ಚೀತ್ಕಾರ ಮಾಡುತ್ತವೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.


ಇಗೋ, ಇವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು; ಜ್ಞಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು; ಅದು ಕಾಯಿಸಿಕೊಳ್ಳುವ ಕೆಂಡವಲ್ಲ, ಮುಂದೆ ಕುಳಿತರೆ ಹಾಯಾಗಿರುವ ಬೆಂಕಿಯೂ ಅಲ್ಲ.


ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರು.


ನೀನು ಅತ್ಯಧಿಕ ಮಹತ್ವವುಳ್ಳವನಾಗಿ ನಿನ್ನೆದುರಿಗೆ ನಿಲ್ಲುವವರನ್ನು ಕೆಡವಿಬಿಟ್ಟಿರುವೆ. ನಿನ್ನ ಕೋಪಾಗ್ನಿಯು ಹೊರಟು ಅವರನ್ನು ಒಣಗಿದ ಹುಲ್ಲನ್ನೋ ಎಂಬಂತೆ ಸುಟ್ಟು ಭಸ್ಮಮಾಡಿ ಬಿಟ್ಟಿದೆ.


ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.


“‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು.


ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು.


ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.


ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.


ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.


“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.


ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.


ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು, ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ, ಅಲ್ಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು. ಆದರೂ ಮರದ ಮೇಲಿನ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.


ಎಫ್ರಾಯೀಮ್ಯರಿಗೆ ಘಾತವಾಗಿದೆ; ಅವರ ವಂಶಮೂಲವು ಒಣಗಿಹೋಗಿದೆ. ಅವರು ಫಲಹೀನರಾಗುವರು; ಹೌದು, ಅವರು ಮಕ್ಕಳನ್ನು ಹೆತ್ತರೂ ಅವರ ಗರ್ಭದ ಪ್ರಿಯಫಲವನ್ನು ಸಾಯಿಸುವೆನು.


ನಾನು ಎಫ್ರಾಯೀಮಿಗೆ ನುಸಿ, ಯೆಹೂದ ಕುಲಕ್ಕೆ ಒಣ ಕುಂಟೆಯಂತಿರುವೆನು.


ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.


ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.


“ಈ ಜನರು ನಿಧಾನವಾಗಿ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಚೀನನನ್ನೂ, ರೆಮಲ್ಯನ ಮಗನನ್ನೂ ನಂಬಿ ಮೆರೆದಿದ್ದರಿಂದ,


ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.


ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ಅದಕ್ಕೆ ಸಮುವೇಲನು, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಯೆಹೋವನ ಮಾತನ್ನು ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಇಸ್ರಾಯೇಲರ ಅರಸುತನದಿಂದ ನಿವಾರಿಸಿದ್ದಾನೆ” ಎಂದು ಹೇಳಿ ತಿರುಗಿಕೊಂಡು ಹೊರಡಲು


ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ದೀ? ಯಾರ ವಿರುದ್ಧವಾಗಿ ಬಾಯ್ದೆರೆದು ಹೀಯಾಳಿಸಿದ್ದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!


ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.


ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.”


ಎಫ್ರಾಯೀಮಿಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನು ತಾನೇ. ನೀವು ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ” ಎಂಬುದೇ.


ದುಷ್ಟತನವು ಬೆಂಕಿಯಂತೆ ಉರಿದು, ಮುಳ್ಳು ಗಿಡಗಳನ್ನು ನುಂಗಿಬಿಟ್ಟು, ಅರಣ್ಯದ ಪೊದೆಗಳನ್ನು ಸುಟ್ಟು ಬಿಡುತ್ತದೆ, ಅವು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.


ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟು ಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.


ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ. ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.


ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು. ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿ, ನಾನು ನಿನ್ನ ಬಳಿಗೆ ರೋಷದಿಂದ ಬಾರೆನು.


ಹೀಗಿರಲಾಗಿ ಜನರು ಹುಲ್ಲನ್ನು ಕೂಡಿಸಿಕೊಳ್ಳುವುದಕ್ಕಾಗಿ ಐಗುಪ್ತ ದೇಶದಲ್ಲೆಲ್ಲಾ ಚದರಿಹೋಗಿ ಹುಡುಕತೊಡಗಿದರು.


ನಿಮ್ಮ ದೇಶದಲ್ಲಿ ಯೆಹೋವನು ಆಕಾಶದಿಂದ ಮಳೆಗೆ ಬದಲಾಗಿ ಧೂಳನ್ನೂ ಮತ್ತು ಉಸುಬನ್ನೂ ನಿಮ್ಮ ಮೇಲೆ ಸುರಿಸುವನು; ಅದುದರಿಂದ ನೀವು ನಾಶವಾಗಿ ಹೋಗುವಿರಿ.


(ಕಲ್ಲು) ಕುಪ್ಪೆಯ ಮೇಲೆ ತನ್ನ ಬೇರುಗಳನ್ನು ಹೆಣೆದುಕೊಂಡು, ಕಲ್ಲುಬಿರುಕಿನಲ್ಲಿಯೂ ನುಗ್ಗಬಲ್ಲನು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವನ ವೃಕ್ಷಗಳಲ್ಲಿ ದ್ರಾಕ್ಷಿಯ ಗಿಡವನ್ನು ನಾನು ಹೇಗೆ ಬೆಂಕಿಗೆ ಸೌದೆಯನ್ನಾಗಿ ಕೊಟ್ಟಿದ್ದೇನೋ, ಹಾಗೆಯೇ ನಾನು ಯೆರೂಸಲೇಮಿನವರನ್ನು ವಿನಾಶಕ್ಕೆ ಗುರಿಮಾಡಿದ್ದೇನೆ.


ಯೆಹೋವನು ಇಂತೆನ್ನುತ್ತಾನೆ, “ಯೆಹೂದವು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿದರು. ಆತನ ವಿಧಿಗಳನ್ನು ಕೈಕೊಳ್ಳಲಿಲ್ಲ. ಅವರ ಪೂರ್ವಿಕರು ಹಿಂಬಾಲಿಸಿದ ಸುಳ್ಳುದೇವತೆಗಳು, ಇವರನ್ನು ದಾರಿ ತಪ್ಪುವಂತೆ ಮಾಡಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು