Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 50:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ನೀತಿ ನಿರ್ಣಯಿಸುವಾತನು ಸಮೀಪದಲ್ಲಿದ್ದಾನೆ. ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು ನ್ಯಾಯಾಸನದ ಮುಂದೆ ನಿಂತುಕೊಳ್ಳುವ. ನನಗೆ ಪ್ರತಿಕಕ್ಷಿಯು ಯಾರು? ಅವನು ನನ್ನ ಬಳಿಗೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನನ್ನ ಪರ ತೀರ್ಪುಕೊಡುವವನು ಇಹನು ಹತ್ತಿರದಲೆ ನನಗೆ ಪ್ರತಿಕಕ್ಷಿ ಯಾರೆ ಬರಲಿ ಮುಂದಕೆ. ನನ್ನೊಡನೆ ವ್ಯಾಜ್ಯಮಾಡಬಲ್ಲವನಾರೇ ನಿಲ್ಲಲಿ ನ್ಯಾಯಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನ ನ್ಯಾಯಸ್ಥಾಪಕನು ಸಮೀಪದಲ್ಲಿದ್ದಾನೆ; ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು [ನ್ಯಾಯಾಸನದ ಮುಂದೆ] ನಿಂತುಕೊಳ್ಳುವ; ನನಗೆ ಪ್ರತಿಕಕ್ಷಿಯು ಯಾರು? ನನ್ನ ಬಳಿಗೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ನನ್ನೊಂದಿಗಿದ್ದಾನೆ. ನಾನು ತಪ್ಪಿತಸ್ಥನಲ್ಲವೆಂದು ಆತನು ತೋರಿಸುವನು. ಆದ್ದರಿಂದ ಯಾರೂ ನನ್ನನ್ನು ಅಪರಾಧಿ ಎಂದು ಹೇಳಲಾಗುವದಿಲ್ಲ. ಯಾರಾದರೂ ನನ್ನನ್ನು ತಪ್ಪಿತಸ್ಥನೆಂದು ದೃಢಪಡಿಸಬೇಕೆಂದಿದ್ದರೆ ಅವರು ಮೊದಲು ನನ್ನ ಬಳಿಗೆ ಬರಲಿ, ನಮಗೆ ವಿಚಾರಣೆಯಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನನಗೆ ನೀತಿ ನಿರ್ಣಯಿಸುವಾತನು ಸಮೀಪದಲ್ಲಿಯೇ ಇದ್ದಾನೆ, ನನ್ನೊಂದಿಗೆ ವ್ಯಾಜ್ಯವಾಡುವವರು ಯಾರು? ನಾವು ಪರಸ್ಪರ ಎದುರಿಸೋಣ! ನನ್ನ ಎದುರಾಳಿ ಯಾರು? ಅವನು ನನ್ನ ಸಮೀಪಕ್ಕೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 50:8
16 ತಿಳಿವುಗಳ ಹೋಲಿಕೆ  

ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದೆನು. ಅದು, “ಈಗ ನಮ್ಮ ದೇವರ ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತನ ಅಧಿಪತ್ಯ ಆರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.


ದ್ವೀಪನಿವಾಸಿಗಳೇ, ನನ್ನ ಕಡೆಗೆ ತಿರುಗಿ ಮೌನದಿಂದಿರಿ. ಜನಾಂಗಗಳು ತಮ್ಮನ್ನು ಬಲಪಡಿಸಿಕೊಳ್ಳಲಿ; ಸಮೀಪಕ್ಕೆ ಬಂದು ಮಾತನಾಡಲಿ. ನ್ಯಾಯಸ್ಥಾನಕ್ಕೆ ಒಟ್ಟಿಗೆ ಹೋಗೋಣ.


ನನಗೆ ನನ್ನ ಪಾಪಗಳನ್ನು ಜ್ಞಾಪಕಪಡಿಸು, ನಾವಿಬ್ಬರೂ ನಿನ್ನ ಅಪಾರಾಧ ಕುರಿತು ವಾದಿಸುವ, ನಿನ್ನ ಸದ್ಧರ್ಮವು ಗೊತ್ತಾಗುವಂತೆ ನಿನ್ನ ನ್ಯಾಯವನ್ನು ತೋರ್ಪಡಿಸು.


ಯಾಕೋಬ್ಯರ ಅರಸನಾದ ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ವ್ಯಾಜ್ಯವು ಈಚೆಗೆ ಬರಲಿ, ನಿಮ್ಮ ವಿಗ್ರಹಗಳಿಗಾಗಿ ನಿಮ್ಮ ಬಲವಾದ ನ್ಯಾಯಗಳನ್ನು ತೋರ್ಪಡಿಸಿರಿ”


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


“ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ.


ವ್ಯಾಜ್ಯವಾಡುವ ಆ ಇಬ್ಬರೂ ಯೆಹೋವನ ಸನ್ನಿಧಿಯಲ್ಲಿ ಯಾಜಕರ ಮುಂದೆಯೂ, ಆಗ ಇರುವ ನ್ಯಾಯಾಧಿಪತಿಗಳ ಮುಂದೆಯೂ ನಿಲ್ಲಬೇಕು.


ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದರ ವಿಷಯದಲ್ಲಿಯೂ, ಅದು ಎತ್ತು, ಕತ್ತೆ, ಕುರಿ ಅಥವಾ ಬಟ್ಟೆಗಳ ವಿಷಯವಾದರೂ, ಕಳೆದುಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ, ಇಬ್ಬರು ಅದು ತಮ್ಮದೆಂದು ಹೇಳುವಾಗ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುತ್ತಾನೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.


ನನಗೆ ಪ್ರತಿವಾದಿ ಇದ್ದಾನೋ? ಇದ್ದರೆ, ನಾನು ನನ್ನನ್ನು ನಿನ್ನ ದೃಷ್ಟಿಗೆ ಮರೆಮಾಡಿಕೊಂಡು, ಮೌನನಾಗಿ ಪ್ರಾಣಬಿಡುವೆನು.


ಯೆಹೋವನೇ, ನೀನು ನನ್ನ ಹತ್ತಿರವೇ ಇರುವೆ, ನಿನ್ನ ಆಜ್ಞೆಗಳೆಲ್ಲಾ ಯಥಾರ್ಥವಾಗಿವೆ.


“ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.


ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು” ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು