Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ನಾನೆ, ನಾನೆ ನಿನ್ನನು ಸಂತೈಸುವವನಾಗಿರೆ, ನೀ ಭಯಪಡುವುದೇಕೆ ಮರ್ತ್ಯನಾದ ಮಾನವನಿಗೆ? ನೀ ಹೆದರಿ ನಡುಗುವುದೇಕೆ ಹುಲುಮಾನವನಿಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನೇ, ನಾನೇ ನಿನ್ನನ್ನು ಸಂತೈಸುವವನಾಗಿರುವಲ್ಲಿ ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ಹೇಳುವುದೇನೆಂದರೆ, “ನಿನ್ನನ್ನು ಸಂತೈಸುವಾತನು ನಾನೇ. ಆದ್ದರಿಂದ ನೀನು ಜನರಿಗೆ ಯಾಕೆ ಹೆದರಬೇಕು. ಅವರು ಹುಟ್ಟಿ ಸಾಯುವ ನರರಾಗಿದ್ದಾರೆ. ಅವರು ಹುಲ್ಲಿನಂತೆ ಸಾಯುವ ಕೇವಲ ಮಾನವರಾಗಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ನಾನೇ, ನಾನೇ ನಿಮ್ಮನ್ನು ಸಂತೈಸುವವನಾಗಿದ್ದೇನೆ. ಹಾಗಾದರೆ ಸಾಯುವ ಮನುಷ್ಯನಿಗೂ, ಹುಲ್ಲಿನಂತ್ತಿರುವ ಮಾನವನಿಗೂ ಭಯಪಡುವ ನೀನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:12
37 ತಿಳಿವುಗಳ ಹೋಲಿಕೆ  

ಯೆಹೋವನು ನನ್ನ ಕಡೆ ಇದ್ದಾನೆ; ಭಯಪಡೆನು. ಮನುಷ್ಯನು ನನಗೆ ಏನು ಮಾಡಾನು?


ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.


ಮೂಗಿನಿಂದ ಉಸಿರಾಡುವ ತನಕ ಬದುಕುವ ನರಮನುಷ್ಯನ ಮೇಲಿನ ಭರವಸೆಯನ್ನು ಬಿಟ್ಟು ಬಿಡಿರಿ. ಏಕೆಂದರೆ ಅವನು ಯಾವ ಲೆಕ್ಕಕ್ಕೂ ಸಮಾನನಲ್ಲ.


“ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.


ತಾಯಿ ಮಗನನ್ನು ಸಂತೈಸುವ ಪ್ರಕಾರ ನಾನು ನಿಮ್ಮನ್ನು ಸಂತೈಸುವೆನು; ಯೆರೂಸಲೇಮಿನಲ್ಲೇ ನಿಮಗೆ ದುಃಖಶಮನವಾಗುವುದು.


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು.


ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.


ಅನೇಕರು ನ್ಯಾಯಾಧಿಪತಿಯ ಕಟಾಕ್ಷವನ್ನು ಕೋರುವರು, ನ್ಯಾಯತೀರ್ಪು ಯೆಹೋವನಿಂದಲೇ ಆಗುವುದು.


ಉಸಿರು ಹೋಗಲು ಅವರು ಮಣ್ಣಿಗೆ ಸೇರುತ್ತಾರೆ, ಅವರ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವುದು.


ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.


ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.


ಸೌಲನು ಸಮುವೇಲನಿಗೆ, “ನಾನು ಯೆಹೋವನ ಮತ್ತು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆನು.


ಆಗ ಯೆಹೋವನ ದೂತನು ಎಲೀಯನಿಗೆ, “ನೀನು ಇವನ ಸಂಗಡ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದ್ದರಿಂದ ಅವನು ಎದ್ದು, ಇವನ ಜೊತೆಯಲ್ಲಿ ಅರಸನ ಬಳಿಗೆ ಹೋದನು.


“ನನ್ನ ಸಂತೈಸಿರಿ, ಸಂತೈಸಿರಿ” ಎಂದು ನಿಮ್ಮ ದೇವರು ಹೇಳುತ್ತಾನೆ.


ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.”


ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ?.


ಇದನ್ನು ಕೇಳಿ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ಕಸ್ದೀಯರು ತಮ್ಮನ್ನು ಮೊರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸುವರೋ ಏನೋ; ಅವರು ನನ್ನನ್ನು ಹಿಂಸಿಸಬಹುದು ಎಂದು ಶಂಕೆಪಡುತ್ತೇನೆ” ಎಂದು ಉತ್ತರಕೊಟ್ಟನು.


ಬಾಬೆಲಿನ ಅರಸನಿಂದ ದೇಶಕ್ಕೆ ಅಧಿಪತಿಯಾಗಿ ನೇಮಿಸಲ್ಪಟ್ಟವನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದರಿಂದ ಕಸ್ದೀಯರಿಗೆ ಅಂಜಿದರು.


“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.


ಸೌಲನೂ ಎಲ್ಲಾ ಇಸ್ರಾಯೇಲರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿ ಎದೆಗುಂದಿದವರಾಗಿ ಬಹಳ ಭಯಪಟ್ಟರು.


ಅವನ ಸೇವಕರ ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿಕೊಂಡು, ಗಡ್ಡದ ಮೇಲೆಲ್ಲಾ ಜೊಲ್ಲು ಸುರಿಸುತ್ತಾ, ಬಾಗಿಲುಗಳನ್ನು ಕೆರೆಯುತ್ತಾ, ತನ್ನನ್ನು ಹುಚ್ಚನಂತೆ ನಟಿಸಿದನು.


“ಇವರು ಯಾವುದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಇವರು ಯಾವುದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ.


ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”


ಯೆರೂಸಲೇಮಿನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ! ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ.


ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು