Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ. ಆಕಾಶವು ಹೊಗೆಯಂತೆ ಚದರಿ ಹೋಗುವುದು, ಭೂಮಿಯು ಹಳೆಯ ವಸ್ತ್ರದಂತಾಗುವುದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವುದು, ನನ್ನ ರಕ್ಷಣಾಧರ್ಮದ ಕಾರ್ಯಕ್ಕೆ ಭಂಗವೇ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಕಾಶಮಂಡಲವನು ನೋಡಿ ಕಣ್ಣೆತ್ತಿ ಭೂಮಂಡಲದತ್ತ ನೋಡಿ ಕೆಳಗೆ ದಿಟ್ಟಿಸಿ. ಆಕಾಶ ಚದರಿಹೋಗುವುದು ಹೊಗೆಯಂತೆ ಭೂಮಿ ಹರಿದುಹೋಗುವುದು ಬಟ್ಟೆಯಂತೆ ಸಾಯುವರು ಭೂನಿವಾಸಿಗಳು ಅದರಂತೆ. ನಾ ಕೊಡುವ ವಿಮೋಚನೆಯೋ ನಿಲ್ಲುವುದು ಶಾಶ್ವತವಾಗಿ ನಾ ನೀಡುವ ಮುಕ್ತಿಯೋ ಅಳಿದುಹೋಗದು ಭಂಗವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ; ಆಕಾಶವು ಹೊಗೆಯಂತೆ ಚದರಿ ಹೋಗುವದು, ಭೂವಿುಯು ವಸ್ತ್ರದ ಹಾಗೆ ಜೀರ್ಣವಾಗುವದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು; ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವದು, ನನ್ನ ರಕ್ಷಣಧರ್ಮದ ಕಾರ್ಯಕ್ಕೆ ಭಂಗವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪರಲೋಕದ ಕಡೆಗೆ ದೃಷ್ಟಿಸಿರಿ. ನಿಮ್ಮ ಸುತ್ತಲೂ ಇರುವ ಭೂಮಿಯನ್ನು ನೋಡಿರಿ. ಹೊಗೆಯ ಮೋಡದಂತೆ ಆಕಾಶವು ಇಲ್ಲದೆಹೋಗುವದು. ಭೂಮಿಯು ಬೆಲೆಯಿಲ್ಲದ ಹಳೆಯ ಬಟ್ಟೆಯಂತಾಗುವುದು. ಭೂಮಿಯ ಮೇಲಿರುವ ಜನರು ಸಾಯುವರು. ಆದರೆ ನನ್ನ ರಕ್ಷಣೆಯು ನಿರಂತರವಾಗಿರುವದು. ನನ್ನ ಕರುಣೆಯು ಅಂತ್ಯವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಏಕೆಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವುವು. ಭೂಮಿಯು ಹಳೆಯ ಬಟ್ಟೆಯಂತಾಗುವುದು ಮತ್ತು ಅದರಲ್ಲಿ ವಾಸಿಸುವವರು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವುದು, ನನ್ನ ನೀತಿಯು ಎಂದಿಗೂ ರದ್ದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:6
27 ತಿಳಿವುಗಳ ಹೋಲಿಕೆ  

ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.


ನಕ್ಷತ್ರ ಸೈನ್ಯವೆಲ್ಲಾ ಗತಿಸಿ ಹೋಗುವುದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಮಾಗಿದ ಹಣ್ಣು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಕೆಳಗೆ ಉದುರುವುದು.


ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು, ಹುಳವು ಅವರನ್ನು ಉಣ್ಣೆಯಂತೆ ತಿಂದುಬಿಡುವುದು. ನನ್ನ ರಕ್ಷಣಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವುದು. ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವುದು.”


ಆದುದರಿಂದ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ತೀಕ್ಷ್ಣರೋಷದಿಂದ ಆಕಾಶಮಂಡಲವನ್ನು ನಡುಗಿಸಿ, ಭೂಲೋಕವನ್ನು ಅದರ ಸ್ಥಳದಿಂದ ಕದಲಿಸಿ ನಡುಗಿಸುವೆನು.


ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದುವರಿಸುತ್ತಾನೆ. ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ; ಆತನು ಅತಿ ಬಲಾಢ್ಯನೂ, ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು.


ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು.


ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.


ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ವಸ್ತ್ರದಂತಾಗುವರು. ಅವರನ್ನು ನುಸಿಯು ತಿಂದುಬಿಡುವುದು.


ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.


ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು.


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,


ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.


ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.


ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.


ಜ್ಞಾನವೂ, ತಿಳಿವಳಿಕೆಯೂ, ರಕ್ಷಣಾಕಾರ್ಯದ ಸಮೃದ್ಧಿಯೂ ಇರುವುದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವುದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವುದು.


ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.


ಆತನ ಕಾರ್ಯವು ಘನ, ಮಾನಗಳುಳ್ಳದ್ದು; ಆತನ ನೀತಿಯು ಸದಾಕಾಲವೂ ಇರುವುದು.


“ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಳಯದಂತಿದೆ; ಇಂತಹ ಜಲಪ್ರಳಯವು ಭೂಮಿಯನ್ನು ಪುನಃ ಆವರಿಸುವುದಿಲ್ಲ ಎಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವುದಿಲ್ಲ, ಗದರಿಸುವುದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು