Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 53:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಷ್ಟಕ್ಕೊಳಗಾದವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಅವನನ್ನು ಲಕ್ಷ್ಯಕ್ಕೇ ತರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜನರು ಆತನನ್ನು ಪರಿಹಾಸ್ಯ ಮಾಡಿದರು. ಆತನ ಸ್ನೇಹಿತರು ಆತನನ್ನು ತೊರೆದರು. ಆತನು ನೋವಿನಿಂದ ಬಳಲಿದನು. ಆತನು ಕಾಯಿಲೆಯಿಂದ ಬಾಧಿತನಾಗಿದ್ದನು. ಜನರು ಆತನ ಕಡೆಗೆ ನೋಡಲೂ ಇಲ್ಲ. ನಾವು ಆತನನ್ನು ಗಮನಕ್ಕೆ ತರಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆತನು ತಿರಸ್ಕೃತನೂ ಮಾನವಕುಲದಿಂದ ನಿರಾಕರಿಸಲಾದವನೂ, ದುಃಖಿತ ಮನುಷ್ಯನೂ, ನೋವನ್ನು ಅನುಭವಿಸಿದವನೂ ಆಗಿದ್ದನು. ನಾವು ನಮ್ಮ ಮುಖಗಳನ್ನು ಆತನಿಂದ ಮರೆಮಾಡಿಕೊಂಡೆವು. ಆತನು ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಆತನನ್ನು ಅತ್ಯಲ್ಪವಾಗಿ ಎಣಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 53:3
38 ತಿಳಿವುಗಳ ಹೋಲಿಕೆ  

ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು,


ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.”


ಮತ್ತು ಆತನು ಅವರಿಗೆ “ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ ನೀವು ಇಲ್ಲೇ ಕಾದುಕೊಂಡಿದ್ದು ಎಚ್ಚರವಾಗಿರಿ” ಎಂದು ಹೇಳಿದನು.


ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು, ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.


ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.


ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ.


ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.


ಯೇಸು ಅವರಿಗೆ, “ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ” ಎಂದು ಹೇಳಿದನು.


ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು.


ಜನರು ಆಕೆ ಸತ್ತಳೆಂದು ತಿಳಿದುಕೊಂಡಿದ್ದರಿಂದ ಆತನನ್ನು ಪರಿಹಾಸ್ಯಮಾಡಿದರು.


ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು, ಆತನ ಮೇಲೆ ಉಗುಳಿ, ಆತನ ಮುಂದೆ ಮೊಣಕಾಲೂರಿ ನಮಸ್ಕರಿಸಿದರು.


ಅದಕ್ಕೆ ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ?


ಯೇಸು ಕಣ್ಣೀರಿಟ್ಟನು.


ಅದಕ್ಕೆ ಯೆಹೂದ್ಯರು, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?” ಎಂದು ಕೇಳಿದರು.


“ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು;


ಚಿಯೋನ್ ನಗರವೇ ನಿನ್ನ ಸೇನಾವ್ಯೂಹಗಳನ್ನು ಈಗ ಒಟ್ಟುಗೂಡಿಸು. ಆಹಾ ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆ ತಪ್ಪಿತು; ಅವುಗಳಿಂದ ನನಗೆ ಬೇಸರವಾಯಿತು.


ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.


ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,


ದೇವರೇ, ನೊಂದು ಕುಗ್ಗಿದವನಾದ ನನ್ನನ್ನಾದರೋ, ನಿನ್ನ ರಕ್ಷಣೆಯು ಭದ್ರಸ್ಥಳದಲ್ಲಿರಿಸುವುದು.


ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಒಪ್ಪಿಸಿಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳ ಕೈಗೆ ಒಪ್ಪಿಸುವರು.


ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆ ಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.


ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ, ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವುದನ್ನು ನೋಡಿ, ಅನೇಕರು ಹೇಗೆ ಹೆದರಿದರೋ,


ಸಮಾಧಿಯಲ್ಲಿ ಸೇರುವವರೊಳಗೆ ಎಣಿಸಲ್ಪಟ್ಟಿದ್ದೇನೆ; ನಿತ್ರಾಣ ಮನುಷ್ಯನಂತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು