Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 54:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವುದಿಲ್ಲ, ನಾಶನವು ದೂರವಾಗಿರುವುದು, ನಿನ್ನ ಹತ್ತಿರಕ್ಕೆ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನ್ಯಾಯನೀತಿ ನಿನಗಾಧಾರ; ದೂರವಿರುವುದು ಹಿಂಸಾಚಾರ. ಭಯಭೀತಿಗೆ ನೀ ದೂರ, ಅವು ಬಾರವು ನಿನ್ನ ಹತ್ತಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವದಿಲ್ಲ, ನಾಶನವು ದೂರವಾಗಿರುವದು, ನಿನ್ನ ಹತ್ತಿರಕ್ಕೆಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀನು ಒಳ್ಳೆಯತನದಿಂದ ಕಟ್ಟಲ್ಪಡುವೆ. ಆದ್ದರಿಂದ ಎಲ್ಲಾ ದುಷ್ಟತ್ವಗಳಿಂದ ನೀನು ಸುರಕ್ಷಿತಳಾಗಿರುವೆ. ನೀನು ಯಾವುದಕ್ಕೂ ಹೆದರುವ ಅವಶ್ಯವಿಲ್ಲ. ಯಾವುದೂ ನಿನಗೆ ಹಾನಿಮಾಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀನು ನೀತಿಯಲ್ಲಿ ನೆಲೆಗೊಂಡಿರುವೆ. ಬಾಧೆಯಿಂದ ದೂರವಾಗಿರುವೆ. ನೀನು ಭೀತಿಯಿಂದ ಭಯಪಡುವುದಿಲ್ಲ, ಏಕೆಂದರೆ ಅದು ನಿನ್ನ ಸಮೀಪಕ್ಕೆ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 54:14
35 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು. ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.”


ಯಾರೂ ಹಾದುಹೋಗದಂತೆ ನನ್ನ ಆಲಯದ ಸುತ್ತಲು ಪಾಳೆಯನ್ನು ಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ದಾಳಿಮಾಡುವುದಿಲ್ಲ; ಏಕೆಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ.


ಯೆಹೋವನು ಇಂತೆನ್ನುತ್ತಾನೆ, “ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮ್ ಸತ್ಯದ ಪಟ್ಟಣವೆಂದು ಅನ್ನಿಸಿಕೊಳ್ಳುವುದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವುದು.”


ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.


ಪೂರ್ವದಲ್ಲಿ ನಿನಗಿದ್ದ ನ್ಯಾಯಾಧಿಪತಿಗಳನ್ನು, ಮಂತ್ರಾಲೋಚಕರನ್ನು ಪುನಃ ಒದಗಿಸಿಕೊಡುವೆನು. ಆ ಮೇಲೆ ನೀನು ಸದಾಚಾರದ ನಗರಿ ಎಂತಲೂ, ಸ್ವಾಮಿ ನಿಷ್ಠೆಯುಳ್ಳ ನಗರಿ ಎಂತಲೂ ಕರೆಯಲ್ಪಡುವಿ.”


ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು. ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು.


ಆತನು ದೇಶದೇಶಗಳ ವ್ಯಾಜ್ಯವನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ ಆಯುಧಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನು ನೇಗಿಲ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರುದ್ಧವಾಗಿ ಜನಾಂಗವು ಕತ್ತಿಯನ್ನೆತ್ತದು. ಇನ್ನು ಮೇಲೆ ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ’ ಎಂದು ಮತ್ತೆ ಮಾತನಾಡುವರು.


ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.


ಆಕಾಶಮಂಡಲವನ್ನು ಹರಡಿ, ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟೆಯಾ? ನಾಶಮಾಡಬೇಕೆಂದು ಬಾಣವನ್ನು ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ? ಆ ಹಿಂಸಕನ ಕ್ರೋಧವು ಎಲ್ಲಿ ಇದೆ?


ಚೀಯೋನ್ ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ತಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.


ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.


ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು: “ಆಹಾ, ಹಿಂಸಕನು ಕೊನೆಗೊಂಡನು, ಕೋಪವು ನಿಂತು ಹೋಯಿತು!


ನಿಮ್ಮ ದೇಶದಿಂದ ವಲಸೆಹೋದವರು ನಿಮ್ಮಲ್ಲಿ ವಾಸಿಸಲಿ; ಮೋವಾಬ್ಯರು ಬಲತ್ಕಾರಿಗಳಿಗೆ ವಶವಾಗದ ಹಾಗೆ ಆಶ್ರಯವಾಗಿರಿ. ಹಿಂಸಿಸುವವರು ನಿಮ್ಮ ದೇಶದಿಂದ ನಿರ್ಮುಲವಾಗುವರು, ನಾಶನವು ನಿಂತುಹೋಗುವುದು. ಪೀಡಿಸುವವರು ನಿಮ್ಮ ದೇಶದಿಂದ ನಿರ್ಮೂಲರಾಗುವರು.


ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಗೊಳ್ಳುವ ಜನಾಂಗವು ಒಳಗೆ ಪ್ರವೇಶಿಸಲಿ!


ಆಗ ನೀವು ಹಿಂದಿನ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ, “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕಮಾಡಿದವನು ಎಲ್ಲಿ? ಗೋಪುರಗಳನ್ನು ಎಣಿಸಿದವನು ಎಲ್ಲಿ?” ಎಂದುಕೊಳ್ಳುವಿರಿ.


ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು” ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು.


“ಹೆದರಬೇಡ, ನಿನಗೆ ಅವಮಾನವಾಗುವುದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.


ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.


ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇಮಿನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ, ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಮೌನವಾಗಿರದೆ ಯೆರೂಸಲೇಮಿನ ಕ್ಷೇಮವನ್ನು ಚಿಂತಿಸುತ್ತಿರುವೆನು.


ಅವರ ಸಂತಾನವು ಪೂರ್ವದ ಸ್ಥಿತಿಯನ್ನು ಹೊಂದುವುದು, ಅವರ ಸಮಾಜವು ನನ್ನ ಮುಂದೆ ನೆಲೆಯಾಗಿರುವುದು, ಅವರನ್ನು ಬಾಧಿಸುವವರನ್ನೆಲ್ಲಾ ದಂಡಿಸುವೆನು.


ನೀನು ಮಲಗುವಾಗ ಹೆದರಿಕೆ ಇರುವುದಿಲ್ಲ, ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ.


ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು.


ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಹಾಳಾದ ನಿಮ್ಮ ಭೂಮಿಯನ್ನು ಫಲವತ್ತಾಗಿಸಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನಿಗೆ ಶರಣುಹೋಗುವ ಸಮಯವು ಒದಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು