Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 54:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕೇಳು, ಕೆಂಡವನ್ನು ಊದುತ್ತಾ ಉಪಯುಕ್ತವಾದ ಆಯುಧವನ್ನು ಉಂಟುಮಾಡುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ, ಹಾಳುಮಾಡುವ ಕೆಡುಕನನ್ನು ನಿರ್ಮಿಸಿದವನೂ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕೆಂಡ ಊದಿ ಕುಲುಮೆಯಲ್ಲಿ ಆಯುಧಮಾಡುವ ಕಮ್ಮಾರನನು ನಾನೇ ಸೃಷ್ಟಿಸಿದಾತ. ವಿನಾಶಮಾಡಲು ಬರುವ ಕೆಡುಕರನು ನಾನೇ ಉಂಟುಮಾಡಿದಾತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕೇಳು, ಕೆಂಡವನ್ನು ಊದುತ್ತಾ ಉಪಯುಕ್ತವಾದ ಆಯುಧವನ್ನುಂಟುಮಾಡುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ, ಹಾಳು ಮಾಡುವ ಕೆಡುಕನನ್ನು ನಿರ್ಮಿಸಿದವನೂ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಇಗೋ, ನಾನು ಕಮ್ಮಾರನನ್ನು ಮಾಡಿದೆನು. ಅವನು ಬೆಂಕಿಯನ್ನು ಊದಿ ಬಿಸಿಯನ್ನು ಹೆಚ್ಚಿಸುವನು. ಆಮೇಲೆ ಕೆಂಪಾಗಿ ಕಾದ ಕಬ್ಬಿಣವನ್ನು ಹೊರತೆಗೆದು ತನಗಿಷ್ಟವಾದ ಉಪಕರಣವನ್ನು ತಯಾರಿಸುವನು. ಅದೇ ರೀತಿಯಲ್ಲಿ ನಾಶಮಾಡುವ ‘ನಾಶಕನನ್ನು’ ನಾನು ನಿರ್ಮಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ, ತನ್ನ ಕೆಲಸಕ್ಕೆ ಆಯುಧಗಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ. ನಾಶಮಾಡುವ ಕೆಡುಕನನ್ನು ಸೃಷ್ಟಿಸಿದವನೂ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 54:16
14 ತಿಳಿವುಗಳ ಹೋಲಿಕೆ  

ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನು ಉಂಟುಮಾಡಿದ್ದಾನೆ.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.


ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ. ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು.


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.


ಇದನ್ನು ನೀನು ಕೇಳಲಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು. ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತು.


ಅದಕ್ಕೆ ಯೇಸು, “ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ” ಎಂದು ಉತ್ತರ ಕೊಟ್ಟನು.


ಇಬ್ರಿಯರು ಈಟಿಕತ್ತಿಗಳನ್ನು ಮಾಡಿಕೊಳ್ಳಬಾರದೆಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ ಇಸ್ರಾಯೇಲ್‌ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.


ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ ಅದು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ವ್ಯಾಜ್ಯವಾಡುತ್ತಾರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.


ಅನಂತರ ಯೆಹೋವನು ನನಗೆ ನಾಲ್ಕು ಮಂದಿ ಕಮ್ಮಾರರನ್ನು ತೋರಿಸಿದನು.


ನಾನು ಕಣ್ಣಿತ್ತಿ ನೋಡಲು ಇಗೋ, ಕೈಯಲ್ಲಿ ಅಳತೆಯ ನೂಲನ್ನು ಹಿಡಿದುಕೊಂಡಿದ್ದವನು ಕಾಣಿಸಿದನು.


“ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು