Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 55:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅರಸಿರಿ ಸರ್ವೇಶ್ವರನನು ಆತ ದೊರಕುವ ವೇಳೆಯಲಿ ವಿನಂತಿಸಿರಿ ಆತನಿರುವಾಗಲೆ ಸಮೀಪದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ಸಮಯವು ದಾಟುವ ಮೊದಲು ನೀವು ಯೆಹೋವನಿಗಾಗಿ ಹುಡುಕಿರಿ. ಆತನು ಹತ್ತಿರವಿರುವಾಗಲೇ ಕರೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ, ಆತನು ಸಮೀಪದಲ್ಲಿರುವಾಗ, ಆತನಿಗೆ ಬಿನ್ನಹ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 55:6
45 ತಿಳಿವುಗಳ ಹೋಲಿಕೆ  

ಯೆಹೋವನಿಗೆ ಮೊರೆಯಿಡುವವರು, ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.


ನಾನು ರಹಸ್ಯದಲ್ಲಿ ನುಡಿದವನಲ್ಲ, ಅಧೋಲೋಕದೊಳಗಿಂದ ಮಾತನಾಡಿದವನಲ್ಲ. ಶೂನ್ಯವನ್ನೋ ಎಂಬಂತೆ, ‘ನನ್ನನ್ನು ಹುಡುಕಿರಿ’ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ಸರಿಯಾದ ಮಾತುಗಳನ್ನೇ ಆಡುತ್ತೇನೆ.


ಆದುದರಿಂದ ಭಕ್ತರೆಲ್ಲರು ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ.


ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ, ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,


ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.


ಯೆಹೋವನ ಕಡೆಗೆ ತಿರುಗಿಕೊಂಡು ಬದುಕಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವುದಕ್ಕೆ ಬೇತೇಲಿನಲ್ಲಿ ಯಾರೂ ಇರುವುದಿಲ್ಲ.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.


“ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ, ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು.


ನೀನು ಶುದ್ಧನೂ, ಯಥಾರ್ಥನೂ ಆಗಿ ಕುತೂಹಲದಿಂದ ಆತನ ಪ್ರಸನ್ನತೆಯನ್ನು ಬಯಸಿ, ಸರ್ವಶಕ್ತನಾದ ದೇವರಿಗೆ ನಿನ್ನ ವಿಜ್ಞಾಪನೆಯನ್ನು ಮಾಡಿಕೊಂಡರೆ,


ನಾವು ನಮ್ಮ ದೇವರಾದ ಯೆಹೋವನಿಗೆ ಮೊರೆಯಿಡುವಾಗೆಲ್ಲಾ ಆತನು ಸಮೀಪವಾಗಿಯೇ ಇದ್ದಾನಲ್ಲಾ; ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವನು?


ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.


ಇದೇ ಯೆಹೋವನ ನುಡಿ, “ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡುತ್ತಾ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇಮಿಸಿದ್ದೇನೆ.


ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.


ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು


ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.”


ಯೇಸು ತಿರುಗಿ ಅವರಿಗೆ, “ನಾನು ಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ ಮತ್ತು ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ” ಎಂದನು.


ಆತನು ತನ್ನ ಪ್ರಜೆಗೋಸ್ಕರ ಘನದ ಕೊಂಬನ್ನು ಎಬ್ಬಿಸಿದ್ದಾನೆ. ಆದುದರಿಂದ ಆತನ ಎಲ್ಲಾ ಭಕ್ತರು, ಆತನ ಸಮೀಪ ಪ್ರಜೆಗಳಾದ ಇಸ್ರಾಯೇಲರು ಹಿಗ್ಗುತ್ತಾರೆ. ಯೆಹೋವನಿಗೆ ಸ್ತೋತ್ರ!


ಆಗ ಆತನು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನು ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು.


ಆದರೂ, ನೀನು ದೇಶದೊಳಗಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದು ಹಾಕಿ, ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟಿದ್ದರಿಂದ ನಿನ್ನಲ್ಲಿ ಒಳ್ಳೆಯದು ಉಂಟೆಂದು ತಿಳಿದು ಬಂದಿದೆ” ಎಂಬುದಾಗಿ ಹೇಳಿದನು.


ದೇವರೇ, ಕೊಂಡಾಡುತ್ತೇವೆ; ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮ ಮಹತ್ವವನ್ನು ನೆನಪುಮಾಡಿಕೊಂಡು; ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತೇವೆ.


ಆದ್ದರಿಂದ ನಿಮ್ಮ ನಿಮಿತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಈ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ.


ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.


“ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ.


ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.


ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ. ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡೆಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು.


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ, “ಇಗೋ, ಇದ್ದೇನೆ” ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನು, ಇನ್ನೊಬ್ಬರನ್ನು ದೂಷಣೆಗೆ ಗುರಿಮಾಡಿ ತೋರುವ ಬೆರಳನ್ನು, ಕೆಡುಕಿನ ನುಡಿಯನ್ನು ಬಿಟ್ಟು,


ಆಗ ನನ್ನ ಭಕ್ತಜನರ ಹಿತಕ್ಕಾಗಿ ಶಾರೋನು ಹಿಂಡುಗಳಿಗೆ ಹುಲ್ಲುಗಾವಲಾಗಿಯೂ, ಆಕೋರಿನ ತಗ್ಗು ದನದ ಹಕ್ಕೆಯಾಗಿಯೂ ಇರುವವು.


ಆತನು ನಿಮಗೆ ಹೇಳಿದ ಮಾತೇನೆಂದರೆ, ‘ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ. ನಿಮಗೆ ಶಾಶ್ವತ ಸ್ವತ್ತಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ.


‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನಿಮ್ಮ ವಿಗ್ರಹಗಳನ್ನು ತೊರೆದುಬಿಟ್ಟು ಹಿಂದಿರುಗಿ, ನಿಮ್ಮ ಎಲ್ಲಾ ಅಸಹ್ಯ ವಸ್ತುಗಳ ಕಡೆಗೆ ಬೆನ್ನುಮಾಡಿರಿ.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.


ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.


ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರೂ ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗಗಳನ್ನೂ, ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದು ಬಿಡಲಿ.


ಆಗ ಏಲಾಮ್ ಸಂತಾನದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ, “ಇಸ್ರಾಯೇಲರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧವಾಗಿ ದ್ರೋಹಮಾಡಿದರೂ ನಮ್ಮನ್ನು ನಾವು ತಿದ್ದಿಕೊಳ್ಳುವ ನಿರೀಕ್ಷೆಯು ಇನ್ನೂ ಉಂಟು.


ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಹಾಳಾದ ನಿಮ್ಮ ಭೂಮಿಯನ್ನು ಫಲವತ್ತಾಗಿಸಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನಿಗೆ ಶರಣುಹೋಗುವ ಸಮಯವು ಒದಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು